Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ಹಸಿವಿನಿಂದ 56 ಜನರ ಸಾವು:...

ದೇಶದಲ್ಲಿ ಹಸಿವಿನಿಂದ 56 ಜನರ ಸಾವು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ22 Sept 2018 8:04 PM IST
share
ದೇಶದಲ್ಲಿ ಹಸಿವಿನಿಂದ 56 ಜನರ ಸಾವು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು, ಸೆ.22: 2015ರಿಂದ ದೇಶದಲ್ಲಿ 56 ಜನರು ಹಸಿವಿನಿಂದ ಸಾವಿಗೀಡಾಗಿದ್ದಾರೆ. ಇದು ಯಾವುದೇ ನಾಗರಿಕ ಸಮಾಜ ತಲೆ ತಗ್ಗಿಸಬೇಕಾದ ವಿಚಾರ. ಕೇಂದ್ರದ ಎನ್‌ಡಿಎ ಸರಕಾರದ ಜನ ವಿರೋಧಿ ಕ್ರಮವೇ ಇದಕ್ಕೆ ಮುಖ್ಯ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ನಾಗರಿಕ ಸಮಾಜದಲ್ಲಿ ಯಾರೊಬ್ಬರೂ ಹಸಿವಿನಿಂದ ಸಾಯಬಾರದು ಎಂದು ಆಹಾರ ಭದ್ರತೆ ಹಾಗೂ ಪಡಿತರಕ್ಕೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿತ್ತು ಎಂದು ಅವರು ಹೇಳಿದ್ದಾರೆ.

ರಾಜ್ಯ ಸರಕಾರ ಕೂಡ ಅನ್ನಭಾಗ್ಯ ಯೋಜನೆಯ ಮೂಲಕ ಬಡ ಜನರು ಹಸಿವಿನಿಂದ ಅಸುನೀಗದಂತೆ ಅವರಿಗೆ ಅಗತ್ಯ ಪಡಿತರ ವಿತರಿಸುತ್ತಿತ್ತು. ಆದರೆ, ಜನಪರ ಕಾಳಜಿ ಇಲ್ಲದ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರಕಾರ ದೇಶದಲ್ಲಿ ಜನ ಹಸಿವಿನಿಂದ ಸಾಯುವಂತೆ ಮಾಡುತ್ತಿದೆ. ಇದು ನಿಜಕ್ಕೂ ಘೋರ ಅಪರಾಧ ಎಂದು ಅವರು ಕಿಡಿಗಾರಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಹಸಿವಿನಿಂದ ಸಾವಿಗೀಡಾಗಿರುವವರ ಪೈಕಿ ಅರ್ಧಕ್ಕೂ ಹೆಚ್ಚು ಜನ ಪಡಿತರ ಚೀಟಿಗಳಿಗೆ ಆಧಾರ ಸಂಖ್ಯೆ ಜೋಡಣೆ ಆಗದ ಕಾರಣ ಪಡಿತರ ದೊರಕದೆ ಸಾವಿಗೀಡಾಗಿದ್ದಾರೆ ಎಂಬ ಅಂಶ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಇದು ಮೋದಿ ಸರಕಾರದ ಕೆಟ್ಟ ಆಡಳಿತದ ಫಲವಾಗಿದೆ ಎಂದು ಈಶ್ವರ್ ಖಂಡ್ರೆ ದೂರಿದ್ದಾರೆ.

ರಾಜ್ಯದ ಗೋಕರ್ಣದಲ್ಲಿ 2017ರ ಜುಲೈನಲ್ಲಿ ದಲಿತ ಕುಟುಂಬದ ಮೂವರು ನಾಲ್ಕು ದಿನಗಳ ಅಂತರದಲ್ಲಿ ಹಸಿವಿನಿಂದ ಸಾವನ್ನಪ್ಪಿದ್ದಾರೆ. ಆಧಾರ್ ಸಂಖ್ಯೆ ಜೋಡನೆ ಮಾಡಿಲ್ಲ ಎಂಬ ಕಾರಣಕ್ಕೆ ಈ ಕುಟುಂಬದ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂದು ಅಧ್ಯಯನ ಹೇಳಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರಕಾರ ಬಡ ಜನರ ತುತ್ತಿನ ಚೀಲಕ್ಕೆ ಕೈ ಹಾಕದೆ ಬಡವರು ನೆಮ್ಮದಿಯಿಂದ ಬದುಕುವಂತೆ ಮಾಡಬೇಕು. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹೀಗೆ ದಿನದಿಂದ ದಿನಕ್ಕೆ ಏರುತ್ತಿದ್ದರೆ ಬಡ ಜನರು ಅಗತ್ಯ ವಸ್ತುಗಳನ್ನು ಖರೀದಿಸದ ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಾದರೂ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಬಡವರ ಕಷ್ಟ ನೀಗಿಸಬೇಕು ಎಂದು ಈಶ್ವರ್ ಖಂಡ್ರೆ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X