Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಲ್ಡನ್ ಗ್ಲೋಬ್ ಸ್ಪರ್ಧೆ: ಗಾಯಾಳು...

ಗೋಲ್ಡನ್ ಗ್ಲೋಬ್ ಸ್ಪರ್ಧೆ: ಗಾಯಾಳು ನಾವಿಕನ ರಕ್ಷಣೆಗೆ ನೌಕಾಪಡೆಯ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ22 Sept 2018 9:58 PM IST
share
ಗೋಲ್ಡನ್ ಗ್ಲೋಬ್ ಸ್ಪರ್ಧೆ: ಗಾಯಾಳು ನಾವಿಕನ ರಕ್ಷಣೆಗೆ ನೌಕಾಪಡೆಯ ಪ್ರಯತ್ನ

ಕೊಚ್ಚಿ, ಸೆ.22: ಗೋಲ್ಡನ ಗ್ಲೋಬ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವೇಳೆ ದಕ್ಷಿಣ ಹಿಂದು ಮಹಾಸಾಗರದಲ್ಲಿ ಭಾರೀ ಚಂಡಮಾರುತ ಹಾಯಿನೌಕೆಗೆ ಅಪ್ಪಳಿಸಿದ ಬಳಿಕ ಗಾಯಗೊಂಡಿರುವ ತನ್ನ ಅಧಿಕಾರಿಯನ್ನು ರಕ್ಷಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವುದಾಗಿ ಭಾರತೀಯ ನೌಕಾಪಡೆಯು ಶನಿವಾರ ತಿಳಿಸಿದೆ.

 ಭಾರತವನ್ನು ಪ್ರತಿನಿಧಿಸಿದ್ದ ನೌಕಾಪಡೆಯ ಕಮಾಂಡರ್ ಅಭಿಲಾಷ್ ಟೋಮಿ ಅವರು ಶುಕ್ರವಾರ ಸ್ವದೇಶಿ ನಿರ್ಮಿತ ‘ಥುರಿಯಾ’ ಹಾಯಿನೌಕೆಯನ್ನು ಚಲಾಯಿಸುತ್ತಿದ್ದಾಗ ಗಂಟೆಗೆ 130 ಕಿ.ಮೀ.ವೇಗದಿಂದ ಬೀಸುತ್ತಿದ್ದ ಭಾರೀ ಗಾಳಿ ಮತ್ತು 10 ಮೀ.ಗಳೆಷ್ಟತ್ತರದ ಅಲೆಗಳಿಂದಾಗಿ ಅದರ ಸ್ತಂಭವು ಮುರಿದು ಬಿದ್ದ ಪರಿಣಾಮ ಅವರ ಬೆನ್ನಿಗೆ ತೀವ್ರ ಏಟು ಬಿದ್ದಿತ್ತು. ಈ ಸಂದರ್ಭದಲ್ಲಿ ಕಳೆದ 84 ದಿನಗಳಲ್ಲಿ 10,500 ನಾಟಿಕಲ್ ಮೈಲಿಗಳಿಗೂ ಅಧಿಕ ದೂರವನ್ನು ಕ್ರಮಿಸಿದ್ದ ಅವರು ಮೂರನೇ ಸ್ಥಾನದಲ್ಲಿದ್ದರು. ಭೂಮಿಯ ಸುತ್ತ 30,000 ಮೈಲು ಪ್ರದಕ್ಷಿಣೆಯ ಈ ಕಠಿಣ ಸ್ಪರ್ಧೆಯು ಜು.1ರಂದು ಆರಂಭಗೊಂಡಿತ್ತು. ಇದು ಅವರ ಎರಡನೇ ಬಾರಿಯ ಏಕಾಂಗಿ ಸ್ಪರ್ಧೆಯಾಗಿತ್ತು.

ಹಿಂದು ಮಹಾಸಾಗರದಲ್ಲಿ ಕಾರ್ಯಾಚರಿಸುತ್ತಿರುವ ಐಎನ್‌ಎಸ್ ಸಾತ್ಪುರಾ ನೌಕೆಯನ್ನು ರಕ್ಷಣಾ ಕಾರ್ಯಕ್ಕೆ ರವಾನಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಇಲ್ಲಿ ತಿಳಿಸಿದರು. ಟೋಮಿ ಆಸ್ಟ್ರೇಲಿಯಾದ ಪರ್ತ್‌ನಿಂದ ಸುಮಾರು 1,900 ನಾಟಿಕಲ್ ಮೈಲು ದೂರದಲ್ಲಿದ್ದು,ಕ್ಯಾನ್‌ಬೆರಾದಲ್ಲಿರುವ ಆಸ್ಟ್ರೇಲಿಯನ್ ರಕ್ಷಣಾ ಸಮನ್ವಯ ಕೇಂದ್ರವು ಆಸ್ಟ್ರೇಲಿಯದ ರಕ್ಷಣಾ ಇಲಾಖೆ ಮತ್ತು ಭಾರತೀಯ ನೌಕಾ ಪಡೆ ಸೇರಿದಂತೆ ಹಲವಾರು ಏಜೆನ್ಸಿಗಳೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಯೋಜಿಸುತ್ತಿದೆ ಎಂದರು.

ಟೋಮಿ(39) 2013ರಲ್ಲಿ ಭೂ ಪ್ರದಕ್ಷಿಣೆ ಮಾಡಿದ್ದ ಮೊದಲ ಭಾರತೀಯನಾಗಿದ್ದು, ಈ ಬಾರಿ ಗೋಲ್ಡನ್ ಗ್ಲೋಬ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಏಕೈಕ ಭಾರತೀಯನಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X