Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಇತಿಹಾಸದ ಪುಟ ಸೇರಿದ ಪ್ರೀಮಿಯರ್...

ಮೈಸೂರು: ಇತಿಹಾಸದ ಪುಟ ಸೇರಿದ ಪ್ರೀಮಿಯರ್ ಸ್ಟುಡಿಯೋ

ಏಷ್ಯಾದಲ್ಲೆ ಎರಡನೇ ಅತಿದೊಡ್ಡ ಸ್ಟುಡಿಯೋ ಎಂಬ ಹೆಗ್ಗಳಿಕೆ

ವಾರ್ತಾಭಾರತಿವಾರ್ತಾಭಾರತಿ22 Sept 2018 10:49 PM IST
share
ಮೈಸೂರು: ಇತಿಹಾಸದ ಪುಟ ಸೇರಿದ ಪ್ರೀಮಿಯರ್ ಸ್ಟುಡಿಯೋ

ಮೈಸೂರು,ಸೆ.22: ಏಷ್ಯಾದಲ್ಲೇ ಅತಿದೊಡ್ಡ ಎರಡನೇ ಸ್ಟುಡಿಯೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಪ್ರಿಮೀಯರ್ ಸ್ಟುಡಿಯೋ ಇತಿಹಾಸದ ಪುಟಗಳನ್ನು ಸೇರಿದ್ದು, ಇಲ್ಲೊಂದು ಅಪಾರ್ಟ್ ಮೆಂಟ್ ತಲೆ ಎತ್ತಲಿದೆ.

ಶುಕ್ರವಾರ ಕಟ್ಟಡವನ್ನು ನೆಲಸಮಗೊಳಿಸಲಾಗಿದ್ದು, ಇಲ್ಲಿ 750ಕ್ಕೂ ಹೆಚ್ಚು ಚಿತ್ರಗಳು ಚಿತ್ರೀಕರಣಗೊಂಡಿದ್ದವು. ಭಾರತೀಯ ಭಾಷೆಗಳಷ್ಟೇ ಅಲ್ಲದೇ, ಹಲವು ವಿದೇಶಿ ಚಿತ್ರಗಳೂ ಇಲ್ಲಿ ಚಿತ್ರೀಕರಣಗೊಂಡಿವೆ. ನಗರದ ಸರಸ್ವತಿಪುರಂನಲ್ಲಿದ್ದ ನವಜ್ಯೋತಿ ಸ್ಟುಡಿಯೋ ಮುಚ್ಚಿದ ಬಳಿಕ ಎಂ.ಎನ್.ಬಸವರಾಜಯ್ಯ ಅವರು ಅರಮನೆಗೆ ಸೇರಿದ ಚಿತ್ತರಂಜನ್ ಮಹಲಿನಲ್ಲಿ ಮೊದಲಿಗೆ ಪ್ರಿಮೀಯರ್ ಸ್ಟುಡಿಯೋ ಆರಂಭಿಸಿದರು.  

ಜಯಲಕ್ಷ್ಮಿಪುರಂನಲ್ಲಿ 1954ರ ಹೊತ್ತಿಗೆ ಸುಮಾರು 10ಎಕರೆಯಷ್ಟು ವಿಶಾಲವಾದ ಪ್ರದೇಶದಲ್ಲಿ 7 ಅಂತಸ್ತುಗಳುಳ್ಳ ಬೃಹತ್ ಸ್ಟುಡಿಯೋ ನಿರ್ಮಾಣಗೊಂಡಿತು. ಒಂದೇ ಬಾರಿಗೆ ಏಳು ಚಿತ್ರಗಳನ್ನು ಡೆವಲಪಿಂಗ್, ಪ್ರಿಂಟಿಂಗ್, ಸಂಕಲನ, ಪ್ರದರ್ಶನ ಮಂದಿರ, 3 ಮಿಚೆಲ್ ಹಾಗೂ ಏರಿಪ್ಲೆಕ್ಸ್ ಕ್ಯಾಮರಾ ಹೀಗೆ ಸಕಲ ಸೌಲಭ್ಯಗಳನ್ನೂ ಈ ಸ್ಟುಡಿಯೋ ಹೊಂದಿತ್ತು. ಹಲವಾರು ಸ್ಟುಡಿಯೋಗಳು ನಿರ್ಮಾಣಗೊಂಡ ನಂತರವು ಕಳೆಗುಂದಲಿಲ್ಲ. 1989ರಲ್ಲಿ ಸಂಜಯ್ ಖಾನ್ ಅವರ “ದಿ ಸೋರ್ಡ್ ಆಫ್ ಟಿಪ್ಪು ಸುಲ್ತಾನ್” ಧಾರವಾಹಿ ಚಿತ್ರೀಕರಣಗೊಳ್ಳುತ್ತಿದ್ದ ವೇಳೆ ಭೀಕರ ಅಗ್ನಿ ದುರಂತ ಸಂಭವಿಸಿ 42ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಬಳಿಕ ಸ್ಟುಡಿಯೋ ಚೇತರಿಸಿಕೊಂಡಿರಲಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐರಾವತ, ನಿಖಿಲ್ ಕುಮಾರಸ್ವಾಮಿ ಅಭಿನಯದ ಜಾಗ್ವಾರ್ ಸಿನಿಮಾ ಕೊನೆಯದಾಗಿ ಚಿತ್ರೀಕರಣಗೊಂಡಿದ್ದ ಸಿನಿಮಾಗಳಾಗಿವೆ. 

'ಸ್ಟುಡಿಯೋ ಮುಚ್ಚಲು ಮನಸ್ಸಿಲ್ಲದಿದ್ದರೂ ಮುಚ್ಚಲೇ ಬೇಕಾಗಿದೆ. ದಿನದಿಂದ ದಿನಕ್ಕೆ ನಿರ್ವಹಣೆಯ ವೆಚ್ಚ ಹೆಚ್ಚುತ್ತಿದೆ. ಸಿನಿಮಾ ಚಿತ್ರೀಕರಣಗಳು ಕಡಿಮೆಯಾಗಿವೆ. ಚಿತ್ರ ನಿರ್ಮಾಣದ ಟ್ರೆಂಡ್ ಗಳು ಬದಲಾಗಿವೆ. ನೆಲಸಮ ಕಾರ್ಯ ಅನಿವಾರ್ಯ' ಎನ್ನುತ್ತಾರೆ ಸ್ಟುಡಿಯೋ ಮಾಲಕ ಬಸವರಾಜಯ್ಯ ಪುತ್ರ ನಾಗಕುಮಾರ್.

ದಿಗ್ಗಜ ನಟರಾದ ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಷ್ ರಜನಿಕಾಂತ್  ಸೇರಿದಂತೆ ಅನೇಕ ನಾಯಕರ ಸಿನಿಮಾ ಶೂಟಿಂಗ್ ಗೆ ಬಳಸಿಕೊಂಡಿದ್ದ ಸ್ಟೂಡಿಯೋ ಇನ್ನು ನೆನಪು ಮಾತ್ರ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X