Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ನೀತಿ ಸಂಹಿತೆ ಉಲ್ಲಂಘನೆ: ಹಸನ್,...

ಐಸಿಸಿ ನೀತಿ ಸಂಹಿತೆ ಉಲ್ಲಂಘನೆ: ಹಸನ್, ಅಸ್ಘರ್, ರಶೀದ್‌ಗೆ ದಂಡ

ವಾರ್ತಾಭಾರತಿವಾರ್ತಾಭಾರತಿ22 Sept 2018 11:41 PM IST
share

ಅಬುಧಾಬಿ, ಸೆ.22: ಏಶ್ಯಕಪ್‌ನಲ್ಲಿ ಶುಕ್ರವಾರ ಸೂಪರ್-4 ಪಂದ್ಯದ ವೇಳೆ ನಡೆದ ಮೂರು ಪ್ರತ್ಯೇಕ ಘಟನೆಗೆ ಸಂಬಂಧಿಸಿ ಪಾಕಿಸ್ತಾನದ ಆಲ್‌ರೌಂಡರ್ ಹಸನ್ ಅಲಿಯ ಜೊತೆಗೆ ಅಫ್ಘಾನಿಸ್ತಾನದ ಇಬ್ಬರು ಆಟಗಾರರಾದ ಅಸ್ಘರ್ ಅಫ್ಘಾನ್ ಹಾಗೂ ರಶೀದ್ ಖಾನ್‌ಗೆ ಪಂದ್ಯಶುಲ್ಕದಲ್ಲಿ 15 ಶೇ. ದಂಡ ವಿಧಿಸಲಾಗಿದೆ. ಐಸಿಸಿ ನೀತಿ ಸಂಹಿತೆ ಲೆವೆಲ್-1ನ್ನು ಉಲ್ಲಂಘಿಸಿದ ಕಾರಣಕ್ಕೆ ಮೂವರಿಗೆ ತಲಾ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

37ನೇ ಓವರ್‌ನಲ್ಲಿ ಬೌಲಿಂಗ್ ಮಾಡಲು ಸಜ್ಜಾಗಿದ್ದ ಪಾಕ್‌ನ ಹಸನ್ ಅಲಿಗೆ ಅಫ್ಘಾನಿಸ್ತಾನದ ನಾಯಕ ಅಸ್ಘರ್ ತನ್ನ ಭುಜವನ್ನು ತಾಗಿಸಿ ಅಸಭ್ಯ ವರ್ತನೆ ತೋರಿದ್ದರು.  ಹಸನ್ ಅಫ್ಘಾನಿಸ್ತಾನ ಇನಿಂಗ್ಸ್‌ನ 33ನೇ ಓವರ್‌ನಲ್ಲಿ ಬೌಲಿಂಗ್‌ನಲ್ಲಿ ಸ್ಟ್ರೈಕರ್‌ನಲ್ಲಿದ್ದ ಅಫ್ಘಾನಿಸ್ತಾನದ ಹಸ್ಮತುಲ್ಲಾ ಶಾಹಿದಿ ಅವರತ್ತ ಚೆಂಡನ್ನು ಎಸೆದು ಬೆದರಿಸಲು ಯತ್ನಿಸಿದ್ದರು.

ಪಾಕಿಸ್ತಾನ ಇನಿಂಗ್ಸ್‌ನ 47ನೇ ಓವರ್‌ನಲ್ಲಿ ಆಸಿಫ್ ಅಲಿ ಅವರನ್ನು ಔಟ್ ಮಾಡಿದ ಬಳಿಕ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ರಶೀದ್‌ಗೆ ದಂಡ ವಿಧಿಸಲಾಗಿದೆ. ಹಸನ್ ಹಾಗೂ ರಶೀದ್ ಮೊದಲ ಬಾರಿ ಡಿಮೆರಿಟ್ ಪಾಯಿಂಟ್ ಪಡೆದಿದ್ದಾರೆ. ಅಸ್ಘರ್ 24 ತಿಂಗಳಲ್ಲಿ ಎರಡನೇ ಬಾರಿ ಡಿಮೆರಿಟ್ ಪಾಯಿಂಟ್ ಪಡೆದರು.

ಪಂದ್ಯ ಕೊನೆಗೊಂಡ ಬಳಿಕ ಮೂವರು ಆಟಗಾರರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ದಂಡ ವಿಧಿಸಿದರು. ಆನ್‌ಫೀಲ್ಡ್ ಅಂಪೈರ್‌ಗಳಾದ ಅನಿಲ್ ಚೌಧರಿ ಹಾಗೂ ಶಾನ್ ಜಾರ್ಜ್, ಮೂರನೇ ಅಂಪೈರ್ ರಾಡ್ ಟಕರ್ ಹಾಗೂ ನಾಲ್ಕನೇ ಅಂಪೈರ್ ಅನಿಸ್-ವುರ್ರಹ್ಮಾನ್ ಆಟಗಾರರ ವಿರುದ್ಧ ದೂರು ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X