Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹನಿಗವಿ ಅಗ್ರಸ್ಥಾನದಲ್ಲಿ ‘ಜರಗನಹಳ್ಳಿ’:...

ಹನಿಗವಿ ಅಗ್ರಸ್ಥಾನದಲ್ಲಿ ‘ಜರಗನಹಳ್ಳಿ’: ಪ್ರೊ.ಚಂಪಾ

ವಾರ್ತಾಭಾರತಿವಾರ್ತಾಭಾರತಿ23 Sept 2018 6:20 PM IST
share
ಹನಿಗವಿ ಅಗ್ರಸ್ಥಾನದಲ್ಲಿ ‘ಜರಗನಹಳ್ಳಿ’: ಪ್ರೊ.ಚಂಪಾ

ಬೆಂಗಳೂರು, ಸೆ.23: ಎಷ್ಟೋ ಜನ ಹನಿಗವಿತೆ ಬರೆದರೂ ಸಹ, ಅವರಲ್ಲಿ ಜರಗನಹಳ್ಳಿ ಶಿವಶಂಕರ್ ಅಗ್ರಸ್ಥಾನದಲ್ಲಿ ನಿಲ್ಲುವರು ಎಂದು ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.

ರವಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕರ್ನಾಟಕ ವಿಕಾಸ ರಂಗವತಿಯಿಂದ ಕವಿ ಜರಗನಹಳ್ಳಿ ಶಿವಶಂಕರ್ ಅವರ 70ನೆ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ‘ಸಾಹಿತ್ಯ ಸಹವಾಸ’ ಹಾಗೂ ನದಿ ಕವನ ಸಂಕಲನ, ಪನ್ನೀರು ಹನಿಗವಿತೆಗಳು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಶಂಕರ್ ಅವರ ಹನಿ ಕವನ ನೇರ ನುಡಿ ಮತ್ತು ವ್ಯಕ್ತಿತ್ವ ಹೊಂದಿರುವ ಕಾರಣದಿಂದಲೇ ಅವರು, ಅಗ್ರಸ್ಥಾನ ತಲುಪಿದ್ದಾರೆ. ಅದಲ್ಲದೆ, ಜಗತ್ತಿನಲ್ಲಿರುವ ವಾಸವ್ಯವನ್ನು ಬರವಣಿಗೆ ಮೂಲಕ ನೀಡುವುದು ಬರಹಗಾರನ ಕೆಲಸವಾಗಿದೆ ಎಂದರು.

ಪ್ರತಿಯೊಬ್ಬ ಸಾಹಿತಿಗೂ ಸಾಮಾಜಿಕ ಬದ್ಧತೆ ಇರಲೇಬೇಕು. ಎಲ್ಲವೂ ಸಮಾಜಕ್ಕಾಗಿಯೇ ಎಂಬ ಸತ್ಯವನ್ನು ಸಾಹಿತಿಗಳೂ ಅರಿಯಬೇಕು. ತಮ್ಮ ಬರಹ ತಮಗೆ ಮಾತ್ರ ಎಂಬ ಹಲವು ಸಾಹಿತಿಗಳ ಧೋರಣೆ ಸರಿಯಲ್ಲ. ಹನಿಗವಿತೆಗಳ ಬಗ್ಗೆ ಸರಿಯಾದ ಅಭಿಪ್ರಾಯ ಕನ್ನಡದಲ್ಲಿ ಮೂಡದ ಕಾರಣ ಹನಿಗವಿತೆ ಗಂಭೀರ ಪ್ರಕಾರವಲ್ಲ ಎಂದು ಹಲವರು ಅದರಿಂದ ವಿಮುಖರಾದರು. ಹನಿಗವಿತೆಗಳ ಶಕ್ತಿಯನ್ನು ಅರಿತು ಅದರ ಪ್ರಚಾರ ಹೆಚ್ಚಾಗುವ ಕಾರ್ಯಕ್ರಮಗಳು ಆಗಬೇಕು ಎಂದು ಚಂಪಾ ಸಲಹೆ ಮಾಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಮಾತನಾಡಿ, ನಮ್ಮ ನಡುವೆ ವೈಜ್ಞಾನಿಕ ಹನಿಗವಿ ಎಂದರೆ, ಅದು ಜರಗನಹಳ್ಳಿ ಶಿವಶಂಕರ್ ಮಾತ್ರ. ಅವರ ಸಾಹಿತ್ಯದಲ್ಲಿ ಪ್ರಕೃತಿಗೆ ಹೆಚ್ಚಿನ ಸ್ಥಾನ ನೀಡುವ ಜೊತೆಗೆ, ಪ್ರಕೃತಿಯನ್ನು ಪ್ರತಿಯೊಬ್ಬರು ಓದುವಂತೆ ಕೆಲಸ ಮಾಡಿದ್ದಾರೆ ಎಂದು ನುಡಿದರು.

ಜೇಡ ಬಲೆ ಕಟ್ಟಿರುವ ಮಾದರಿಯಲ್ಲಿಯೇ ಜರಗನಹಳ್ಳಿ ಅವರ ಕವನವೂ ಇರುತ್ತದೆ. ಕೆಲವೇ ಅಕ್ಷರಗಳಲ್ಲಿ ಹಲವು ಅರ್ಥಗಳನ್ನು ನೀಡುವ ಕವನ ಅವರದಾಗಿದೆ ಎಂದ ಅವರು, ಹನಿಗವಿತೆಯಲ್ಲಿ 16 ಪ್ರಕಾರಗಳಿದ್ದು, ಒಂದೊಂದು ಪ್ರಕಾರವೂ ಸಹ ಅನುಭವ ಮತ್ತು ವಿಚಾರ ಸಮೀಕರಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಕವಿ ಸಿದ್ಧಲಿಂಗ ಪಟ್ಟಣಶೆಟ್ಟಿ, ನಿತಿನ್ ಷಾ, ಎನ್. ರಾಮನಾಥ್, ಸಂಘದ ಪ್ರಧಾನ ಸಂಚಾಲಕ ವ.ಚ.ಚನ್ನೇಗೌಡ, ಸಂಚಾಲಕರಾದ ಡಾ.ಸಂತೋಷ್ ಹಾನಗಲ್, ಕೆ.ಎಸ್.ಎಂ.ಹುಸೇನ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X