Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಹೆಚ್ಚ್ಲು ಮದ್ಯ ಖರೀದಿಗೆ ಅಬಕಾರಿ...

ಉಡುಪಿ: ಹೆಚ್ಚ್ಲು ಮದ್ಯ ಖರೀದಿಗೆ ಅಬಕಾರಿ ಇಲಾಖೆ ಒತ್ತಡ: ಸಂಘದಿಂದ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Sept 2018 6:50 PM IST
share

ಉಡುಪಿ, ಸೆ.23: ಕಳೆದ ಸುಮಾರು 2 ತಿಂಗಳಿನಿಂದ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಮದ್ಯ ಖರೀದಿಸುವಂತೆ ಮದ್ಯ ಮಾರಾಟ ಸನ್ನದುದಾರರಿಗೆ ಅಬಕಾರಿ ಇಲಾಖೆ ಒತ್ತಡ ಹೇರುತ್ತಿದೆ. ಆದರೆ ಬಿಯರ್ ಖರೀದಿಯನ್ನು ನಿರಾಕರಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯವನ್ನು ರೇಷನ್ ರೀತಿಯಲ್ಲಿ ಅಂದರೆ 100 ಪೆಟ್ಟಿಗೆ ಮದ್ಯವನ್ನು ಖರೀದಿ ಮಾಡಿದರೆ 40ರಿಂದ 50 ಪೆಟ್ಟಿಗೆ ಬಿಯರ್ ನೀಡಲಾಗುತ್ತಿದೆ. ವಾಸ್ತವದಲ್ಲಿ ಕೆಲವೊಮ್ಮೆ ಮದ್ಯ ಹೆಚ್ಚು ಮಾರಾಟವಾದರೆ ಕೆಲವೊಮ್ಮೆ ಬಿಯರ್ ಮಾರಾಟವಾಗುತ್ತದೆ. ಮದ್ಯದ ದರಗಳು ಜಾಸ್ತಿ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಗ್ರಾಹಕ ಕಡಿಮೆ ದರದ ಬಿಯರ್‌ನ್ನು ಸೇವಿಸಲು ಇಚ್ಛೆ ಪಡುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಲಾಖೆಯವರ ಒತ್ತಡದಿಂದ ಆಗಸ್ಟ್ ತಿಂಗಳಲ್ಲಿ ಬಿಯರ್ ಖರೀದಿ ಕಡಿಮೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಬಿಯರ್ ಖರೀದಿಗೆ ಇನ್ನೂ ಹೆಚ್ಚಿನ ಕಡಿವಾಣ ಹಾಕಲಾಗುತ್ತಿದೆ ಎಂದು ಸಂಘ ದೂರಿದೆ. ಕಳೆದ ಎಪ್ರಿಲ್ ತಿಂಗಳಿನಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟಗಾರರ ಆರ್ಥಿಕ ಪರಿಸ್ಥಿತಿ ತುಂಬಾ ವ್ಯತ್ಯಯವಾಗಿದೆ. ವಿಧಾನಸಭಾ ಚುನಾವಣೆ, ಪೌರಾಡಳಿತ ಚುನಾವಣೆ, ನೀತಿ ಸಂಹಿತೆ, ಬಂದ್ ಆಚರಣೆಗಳ ಹಿನ್ನೆಲೆಯಲ್ಲಿ ಸನ್ನದುಗಳು ಅಮಾನತುಗೊಂಡಿರುವುದು ಇದಕ್ಕೆ ಕಾರಣ ಎಂದು ಸಂಘ ತಿಳಿಸಿದೆ.

ಈ ಎಲ್ಲಾ ವಿಷಯಗಳನ್ನು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಅಬಕಾರಿ ಆಯುಕ್ತರ, ಅಪರ ಅಬಕಾರಿ ಆಯುಕ್ತರು ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಿಯರ್ ಖರೀದಿಯನ್ನು ನಿರ್ಬಂಧಿಸದಂತೆ ಹಾಗೂ ವಾಸ್ತವಕ್ಕಿಂತ ಅಧಿಕ ಮದ್ಯ ಖರೀದಿಗೆ ಒತ್ತಾಯಿಸದಂತೆ ಮನವಿ ಮಾಡಲಾಗಿದೆ ಎಂದು ಸಂಘದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂದು ಜಿಲ್ಲಾ ಸನ್ನದುದಾರರ ತುರ್ತು ಸಭೆಯನ್ನು ನಡೆಸಿ ಈ ಬಗ್ಗೆ ಚರ್ಚಿಸಲಾಗಿದೆ. ಮಂಗಳವಾರದ ಒಳಗೆ ಪರಿಸ್ಥಿತಿ ಸರಿಯಾಗುವ ಭರವಸೆ ಇದ್ದು, ಪರಿಹಾರ ಕಾಣದೇ ಇದ್ದಲ್ಲಿ ಸೂಕ್ತ ಹೋರಾಟವನ್ನು ಜಿಲ್ಲೆಯಲ್ಲಿ ಹಾಗೂ ನ್ಯಾಯಾಲಯದಲ್ಲಿ ನಡೆಸುವ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಗೋವಿಂದರಾಜ ಹೆಗ್ಡೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X