Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಜನಸಂಖ್ಯೆ ಪ್ರಮಾಣ ಆಧರಿಸಿ ಬಿಬಿಎಂಪಿ...

"ಜನಸಂಖ್ಯೆ ಪ್ರಮಾಣ ಆಧರಿಸಿ ಬಿಬಿಎಂಪಿ ವಿಭಜನೆಗೆ ಶಿಫಾರಸ್ಸು"

ವಾರ್ತಾಭಾರತಿವಾರ್ತಾಭಾರತಿ23 Sept 2018 9:20 PM IST
share
ಜನಸಂಖ್ಯೆ ಪ್ರಮಾಣ ಆಧರಿಸಿ ಬಿಬಿಎಂಪಿ ವಿಭಜನೆಗೆ ಶಿಫಾರಸ್ಸು

ಬೆಂಗಳೂರು, ಸೆ.23: ಬಿಬಿಎಂಪಿಯಲ್ಲಿ ಐದು ಮೇಯರ್‌ಗಳು ಒಬ್ಬ ಮುಖ್ಯ ಮೇಯರ್ ಅಡಿ ಕಾರ್ಯ ನಿರ್ವಹಿಸುವುದರಿಂದ ನಗರದ ಏಕತೆಗೆ ಆಡಚಣೆ ಆಗುವುದಿಲ್ಲ ಎಂದು ಬೆಂಗಳೂರು ಆಡಳಿತ ಪುನರ್ ರಚನೆ ಸಮಿತಿ ಅಧ್ಯಕ್ಷ ಬಿ.ಎಸ್.ಪಾಟೀಲ್ ತಿಳಿಸಿದರು.

ರವಿವಾರ ನಗರದಲ್ಲಿ ಸಿಪಿಐಎಂ ಪಕ್ಷದಿಂದ ಏರ್ಪಡಿಸಿ ಆಡಳಿತ ನಿರ್ವಹಣೆ ಮಸೂದೆ ಸಂಬಂಧದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ, ಕೇಂದ್ರ ಬಿಬಿಎಂಪಿ ಸೇರಿದಂತೆ ಐದು ಬಿಬಿಎಂಪಿ ಆಡಳಿತ ವಿಭಾಗಗಳನ್ನು ಶಿಫಾರಸ್ಸು ಮಾಡಲಾಗಿದೆ. ಹಾಗೂ ಮುಂದಿನ 20 ವರ್ಷಗಳಲ್ಲಿ ಹೆಚ್ಚಳ ವಾಗಬಹುದಾದ ಜನಸಂಖ್ಯೆ ಪ್ರಮಾಣ ಆಧರಿಸಿ ಬಿಬಿಎಂಪಿ ವಿಭಜನೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆಯಿಂದ ಬೆಂಗಳೂರು ಬದಲಾಗಲು ಸಾಧ್ಯವಿಲ್ಲ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಿಷಯಗಳನ್ನು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಸಿದ್ಧಪಡಿಸಿರುವ ಆಡಳಿತ ನಿರ್ವಹಣೆ ಮಸೂದೆಯನ್ನು ಅಂಗೀಕರಿಸುವಲ್ಲಿ ಸರಕಾರ ಆಸಕ್ತಿ ವಹಿಸಬೇಕು ಎಂದರು.

ಬಿಬಿಎಂಪಿ ವಿಭಜನೆ ಆಗುವುದರಿಂದ ಆಯಾ ಬಿಬಿಎಂಪಿ ವಾರ್ಡ್ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಪರಿಹಾರ ಸುಲಭವಾಗಲಿದೆ. ತೆರಿಗೆ, ಆಡಳಿತವ್ಯವಸ್ಥೆ ಮೂಲಭೂತ ಸೌಲಭ್ಯ ಒದಗಿಸುವುದು. ಘನ ತ್ಯಾಜ್ಯವಿರೇವಾರಿ, ಒಳಚರಂಡಿ, ರಸ್ತೆ ನಿರ್ಮಾಣ ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವಿಭಜನೆಗೆ ಶಿಫಾರಸ್ಸು ಮಾಡಲಾಗಿದೆ ಎಂದರು. ಪ್ರಸ್ತುತ ಇರುವ 200 ವಾರ್ಡ್‌ಗಳನ್ನು 400 ವಾರ್ಡ್‌ಗಳಾಗಿ ವಿಂಗಡಿಸಲು ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ವಾರ್ಡ್ ಹೆಚ್ಚಳವಾದರೆ ಜುನಾವಣೆಗೆ ಆಡಚಣೆಯಾಗಲಿದೆ ಎನ್ನುವುದು ತಪ್ಪು ಅಭಿಪ್ರಾಯ. ರಾಜ್ಯ ಜುನಾವಣಾ ಆಯೋಗಕ್ಕೆ ಸರಕಾರ ವಾರ್ಡ್ ವಿಭಜನಾ ಜವಾಬ್ದಾರಿಯನ್ನು ನೀಡಬೇಕು ಎಂದರು.

ವಾರ್ಡ್ ಸಮಿತಿ ರಚನೆಗೂ ಶಿಫಾರಸ್ಸು ಮಾಡಲಾಗಿದ್ದು ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳಿಗೂ ಸಹ ಸಮಿತಿ ಸದಸ್ಯತ್ವವನ್ನು ನೀಡಬೇಕೆಂದು ತಿಳಿಸಿದ ಅವರು ಮಹಾನಗರ ಪಾಲಿಕೆಯಲ್ಲಿ ಸಚಿವ ಸಂಪುಟ ಮಟ್ಟದ ಅವಕಾಶ ನೀಡಬೇಕು ಎಂದರು. ಪ್ರಮುಖವಾಗಿ ಹಾಲಿ ವ್ಯವಸ್ಥೆಯಲ್ಲಿನ ಕೊರತೆ ನಿವಾರಣೆಯಾಗಬೇಕು. ಬೆಂಗಳೂರು ಅತ್ಯುತ್ತಮ ನಗರವಾಗಲು ಮತ್ತು ಜನತೆ ಯೋಗ್ಯವಾಗಿ ಬದುಕಲು ಇರುವ ಅಡಚಣೆ ನಿವಾರಣೆಗಾಗಿ ಬಿಬಿಎಂಪಿ ವಿಭಜನೆ ಆಗತ್ಯವಿದೆ. ಉಳಿದಂತೆ ಪಾರದರ್ಶಕ ಕೊರತೆ ಆರ್ಥಿಕ ನಿರ್ವಹಣೆ ಅವ್ಯವಸ್ಥೆ, ಯೋಜನಾ ಪ್ರದೇಶಕ್ಕೆ ಯೋಜನೆಗಳ ಕೊರತೆ, ನಾಗರಿಕ ಹಿತಾಸಕ್ತಿಗಳನ್ನು ಕಾಪಾಡುವ ಕಾವಲು ವ್ಯವಸ್ಥೆ ವಿಧಾನಗಳು, ವಾರ್ಡ್ ಆಳಿಕೆ ಮತ್ತು ಆಡಳಿತ ಸಬಲೀಕರಣ ಗೊಳಿಸುವುದು. ಸೇವಾ ಸಂಸ್ಥೆಗಳ ವ್ಯಾಪ್ತಿಯನ್ನು ವಾರ್ಡ್‌ಗಳಿಗೆ ಹೊಂದಿಸುವುದು, ವಾರ್ಡ್‌ಗಳಿಗೆ ಹಣಕಾಸು ವರ್ಗಾವಣೆ, ಇನ್ನಿತರ ಅನೇಕ ಸಮಸ್ಯೆಗಳ ಪರಿಹಾರದಿಂದ ಬೆಂಗಳೂರು ಉತ್ತಮಗೊಳಿಸಬಹುದೆಂದು ತಿಳಿಸಿದರು.

ವೇದಿಕೆಯಲ್ಲಿ ಸಿಪಿಎಂ ಕಾರ್ಯದರ್ಶಿ ಉಮೇಶ್, ಅಧ್ಯಕ್ಷ ಪ್ರಕಾಶ್, ಗೋವಿಂದರಾಜು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X