Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಪ್ರತಿ 10 ಲಕ್ಷ ಜನರಿಗೆ ಕೇವಲ...

ಭಾರತದಲ್ಲಿ ಪ್ರತಿ 10 ಲಕ್ಷ ಜನರಿಗೆ ಕೇವಲ 19 ನ್ಯಾಯಾಧೀಶರು!

ವಾರ್ತಾಭಾರತಿವಾರ್ತಾಭಾರತಿ24 Sept 2018 7:50 PM IST
share
ಭಾರತದಲ್ಲಿ ಪ್ರತಿ 10 ಲಕ್ಷ ಜನರಿಗೆ ಕೇವಲ 19 ನ್ಯಾಯಾಧೀಶರು!

ಹೊಸದಿಲ್ಲಿ,ಸೆ.24: ಕಾನೂನು ಸಚಿವಾಲಯದ ಅಂಕಿಅಂಶಗಳಂತೆ ಭಾರತದಲ್ಲಿ ಸರಾಸರಿ 10 ಲಕ್ಷ ಜನರಿಗೆ ಕೇವಲ 19 ನ್ಯಾಯಾಧೀಶರಿದ್ದಾರೆ ಮತ್ತು ನ್ಯಾಯಾಂಗದಲ್ಲಿ ಒಟ್ಟು 6,000ಕ್ಕೂ ಅಧಿಕ ನ್ಯಾಯಾಧೀಶರ ಕೊರತೆಯಿದೆ,ಈ ಪೈಕಿ ಕೆಳನ್ಯಾಯಾಲಯಗಳಲ್ಲಿಯೇ 5,000ಕ್ಕೂ ಅಧಿಕ ಹುದ್ದೆಗಳು ಖಾಲಿಯಿವೆ.

ಸಂಸತ್‌ನಲ್ಲಿ ಚರ್ಚೆಗಾಗಿ ಈ ವರ್ಷದ ಮಾರ್ಚ್‌ನಲ್ಲಿ ಸಿದ್ಧಗೊಳಿಸಲಾಗಿರುವ ವರದಿಯಂತೆ ಭಾರತದಲ್ಲಿ ನ್ಯಾಯಾಧೀಶರು -ಜನತೆಯ ಅನುಪಾತ ಪ್ರತಿ 10 ಲಕ್ಷ ಜನಸಂಖ್ಯೆಗೆ 19.49ರಷ್ಟಿದೆ. ಅಧೀನ ನ್ಯಾಯಾಲಯಗಳಲ್ಲಿ 5,748 ಮತ್ತು ಉಚ್ಚ ನ್ಯಾಯಾಲಯಗಳಲ್ಲಿ 406 ನ್ಯಾಯಾಧೀಶರ ಹುದ್ದೆಗಳು ಖಾಲಿಯಿವೆ.

ಅಧೀನ ನ್ಯಾಯಾಲಯಗಳಲ್ಲಿ ಮಂಜೂರಾಗಿರುವ ನ್ಯಾಯಾಧೀಶರ ಸಂಖ್ಯೆ 22,474 ಆಗಿದ್ದರೂ ಕೇವಲ 16,726 ನ್ಯಾಯಾಧೀಶರು ಕಾರ್ಯ ನಿರ್ವಹಿಸುತ್ತಿದ್ದಾರೆ. ಉಚ್ಚ ನ್ಯಾಯಾಲಯಗಳಲ್ಲಿ 1079 ನ್ಯಾಯಾಧೀಶರು ಇರಬೇಕಾಗಿದ್ದರೂ,ವಾಸ್ತವದಲ್ಲಿ 673 ನ್ಯಾಯಾಧೀಶರಿದ್ದಾರೆ. 31 ನ್ಯಾಯಾಧೀಶರಿರಬೇಕಾದ ಸರ್ವೋಚ್ಚ ನ್ಯಾಯಾಲಯದಲ್ಲಿ ಆರು ಹುದ್ದೆಗಳು ಖಾಲಿಯಿವೆ. ಹೀಗೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿ ಒಟ್ಟು 6,160 ನ್ಯಾಯಾಧಿಶರ ಹುದ್ದೆಗಳು ಖಾಲಿಯಿವೆ.

2016,ಎಪ್ರಿಲ್‌ನಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿಯೇ ನ್ಯಾಯಾಧೀಶರು-ಜನತೆಯ ಅನುಪಾತದ ಬಗ್ಗೆ ಚರ್ಚೆಗೆ ಮರುನಾಂದಿ ಹಾಡಿದ್ದರು. ದಾವೆಗಳ ಮಹಾಪೂರವನ್ನು ನಿರ್ವಹಿಸಲು ನ್ಯಾಯಾಧೀಶರ ಸಂಖ್ಯೆಯನ್ನು ಹಾಲಿ 21,000ದಿಂದ 40,000ಕ್ಕೆ ಹೆಚ್ಚಿಸುವಲ್ಲಿ ಸರಕಾರಗಳ ನಿಷ್ಕ್ರಿಯೆಯ ಬಗೆ ವಿಷಾದಿಸಿದ್ದ ಅವರು, ನೀವು ಎಲ್ಲ ಹೊರೆಯನ್ನೂ ನ್ಯಾಯಾಂಗದ ಮೇಲೆಯೇ ಹೊರಿಸುವಂತಿಲ್ಲ ಎಂದು ಹೇಳಿದ್ದರು.

ಮೊಕದ್ದಮೆಗಳು ಭಾರೀ ಪ್ರಮಾಣದಲ್ಲಿ ಬಾಕಿಯಿರುವುದಕ್ಕೆ ಕೆಳನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಕೊರತೆಯು ಪ್ರಮುಖ ಕಾರಣಗಳಲ್ಲೊಂದಾಗಿರುವುದರಿಂದ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಇತ್ತೀಚಿಗೆ ದೇಶದ 24 ಉಚ್ಚ ನ್ಯಾಯಾಲಯಗಳನ್ನು ಆಗ್ರಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X