Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿಯಲ್ಲಿ ಎರಡು ಕೋಮುಗಳ ನಡುವೆ...

ಬೆಳಗಾವಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ: ಉದ್ವಿಗ್ನ ಪರಿಸ್ಥಿತಿ

ದರ್ಗಾ, ಮನೆಗಳ ಮೇಲೆ ಕಲ್ಲು ತೂರಾಟ; ಆರೋಪ

ವಾರ್ತಾಭಾರತಿವಾರ್ತಾಭಾರತಿ24 Sept 2018 8:18 PM IST
share
ಬೆಳಗಾವಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ: ಉದ್ವಿಗ್ನ ಪರಿಸ್ಥಿತಿ

ಬೆಳಗಾವಿ, ಸೆ.24: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸ್ಲಿಂ ಬಾಹುಳ್ಯವಿರುವ ವೀರಭದ್ರನಗರದ ಮಸ್ಜಿದ್ ಖೂಬಾದ ಮೇಲೆ ಸೆ.23ರಂದು ತಡರಾತ್ರಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ, ಗಣೇಶನ ಮೂರ್ತಿ ಮಾಡಿದ್ದ ಪೆಂಡಾಲ್ ಮೇಲೆ ಕಲ್ಲುತೂರಾಟ ನಡೆಸಲಾಗಿದೆ ಎಂದು ಆರೋಪಿಸಿ, ಕಾಮತ್‌ಗಲ್ಲಿಯಲ್ಲಿ ಆಟೋ ಚಾಲಕ ಸಮೀರ್ ಸೌದಾಗರ್ ಎಂಬವರ ಮೇಲೆ ಅನ್ಯ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.

ವೀರಭದ್ರನಗರ ಹಾಗೂ ಶಿವಾಜಿನಗರದಲ್ಲಿ ಎರಡು ಗಣೇಶಮೂರ್ತಿಯನ್ನು ಕೂರಿಸಲಾಗಿದೆ. ವೀರಭದ್ರನಗರದ ಒಳಗೆ ಗಣೇಶಮೂರ್ತಿಯ ವಿಸರ್ಜನೆ ಮೆರವಣಿಗೆಗೆ ಅವಕಾಶವಿಲ್ಲದಿದ್ದರೂ, ಪೊಲೀಸರ ಸಹಯೋಗದೊಂದಿಗೆ ಒಂದು ಗುಂಪು ಪ್ರವೇಶ ಮಾಡಿದೆ. ಇದೇ ವೇಳೆ ಸ್ಥಳದಲ್ಲಿ ಉದ್ದೇಶಪೂರ್ವಕವಾಗಿ ವಿದ್ಯುತ್ ಕಂಬದ ತಂತಿಗಳನ್ನು ಎಳೆದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಆನಂತರ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಆನಂತರ, ಕಾಕರ್ ಮೊಹಲ್ಲಾದಲ್ಲಿ ಅನ್ಯ ಕೋಮಿನ ಯುವಕರ ಗುಂಪೊಂದು ದರ್ಗಾ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಸ್ಥಳಕ್ಕೆ ಯಾವ ಪೊಲೀಸರೂ ಬಂದಿರಲಿಲ್ಲ. ಆದರೆ, ಘಟನೆ ನಡೆದ ಬಳಿಕ ಮನೆಗಳಿಂದ ಹೊರಗೆ ಬಂದು ನೋಡುತ್ತಿದ್ದಾಗ ಅಮಾಯಕ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಹೋಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಲ್ಲುತೂರಾಟದಿಂದಾಗಿ ಹಲವರು ಗಾಯಗೊಂಡಿದ್ದು, ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಜರುಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಅನಿಲ್ ಬೆನಕೆ, ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಸೇರಿದಂತೆ ಇನ್ನಿತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಜಿಲ್ಲಾಧಿಕಾರಿಗೆ ಮನವಿ: ಕಾಕರ್‌ಮೊಹಲ್ಲಾ, ವೀರಭದ್ರನಗರ, ಬಾಷಿಬನ್ ಜಮಾತ್, ಅಸದ್‌ ಖಾನ್ ಸೊಸೈಟಿ ಜಮಾತ್, ಶೆಟ್ಟಿಗಲ್ಲಿ ಜಮಾತ್, ವೀರಭದ್ರನಗರ ಬಿಲಾಲ್ ಮಸ್ಜಿದ್ ಜಮಾತ್ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಟಿಪ್ಪುಸುಲ್ತಾನ್ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಈ ಘಟನೆಗೆ ಕಾರಣವಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ಅಮಾಯಕರಿಗೆ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.

ವೀರಭದ್ರನಗರದಲ್ಲಿ ಸೆ.23ರಂದು ತಡರಾತ್ರಿ ಎರಡು ಕೋಮುಗಳ ನಡುವೆ ಕಲ್ಲುತೂರಾಟ ನಡೆದಿದೆ. ಅಲ್ಲದೆ, ಕೆಲವು ಕಿಡಿಗೇಡಿಗಳು ಅಂದು ರಾತ್ರಿ 1.30ಕ್ಕೆ ಕಾಕರ್‌ಗಲ್ಲಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ದ್ವಿಚಕ್ರ ವಾಹನಗಳು, ಮನೆಯ ಬಾಗಿಲು, ಕಿಟಕಿಗಳ ಗಾಜುಗಳಿಗೆ ಹಾನಿ ಮಾಡಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನೆಯಲ್ಲಿ ಮಲಗಿದ್ದ ಅಮಾಯಕ ಯುವಕರನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಶಾಮೀಲಾಗಿರುವುದು ಕಂಡು ಬಂದಿದೆ. ಮುಸ್ಲಿಮರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದ್ದು, ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘ-ಸಂಸ್ಥೆಗಳು ಮನವಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X