Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ರಾಜಧಾನಿಯಲ್ಲಿ ಶೇ.48 ರಷ್ಟು...

ರಾಜ್ಯ ರಾಜಧಾನಿಯಲ್ಲಿ ಶೇ.48 ರಷ್ಟು ಮಾತ್ರ ಕನ್ನಡಿಗರು: ಪಿ.ಜಿ.ಆರ್.ಸಿಂಧ್ಯಾ ಬೇಸರ

ವಾರ್ತಾಭಾರತಿವಾರ್ತಾಭಾರತಿ24 Sept 2018 9:10 PM IST
share
ರಾಜ್ಯ ರಾಜಧಾನಿಯಲ್ಲಿ ಶೇ.48 ರಷ್ಟು ಮಾತ್ರ ಕನ್ನಡಿಗರು: ಪಿ.ಜಿ.ಆರ್.ಸಿಂಧ್ಯಾ ಬೇಸರ

ಬೆಂಗಳೂರು, ಸೆ.24: ರಾಜಧಾನಿ ಬೆಂಗಳೂರಿನಲ್ಲಿ ಶೇ.48ರಷ್ಟು ಮಾತ್ರ ಕನ್ನಡಿಗರಿದ್ದು, ಶೇ.52ರಷ್ಟು ಮಂದಿ ಅನ್ಯಭಾಷಿಗರಿರುವುದು, ಕನ್ನಡ ನಾಡು-ನುಡಿಯ ದುರಂತ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಬೇಸರ ವ್ಯಕ್ತಪಡಿಸಿದರು.

ಸೋಮವಾರ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಆಯೋಜಿಸಿದ್ದ, ಜಿನಾಕು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಲಬುರಗಿಯಿಂದ ಚಾಮರಾಜನಗರದವರೆಗೆ ದಕ್ಷಿಣ ಕನ್ನಡದಿಂದ ಚಿತ್ರದುರ್ಗದವರೆಗಿರುವ ಕನ್ನಡಿಗರು ನಗರಕ್ಕೆ ಬಂದರೆ 20 ವರ್ಷಗಳ ನಂತರ 2 ಕೋಟಿ ಜನಸಂಖ್ಯೆ ಏರುವುದಿಲ್ಲ, ಅನ್ಯರಾಜ್ಯದವರ ವಲಸೆಯಿಂದ ನಗರವು ಅನ್ಯಮಯವಾಗಿ ಜನಸಂಖ್ಯೆ ಏರುತ್ತಿದೆ ಎಂದು ಆತಂಕಪಟ್ಟರು.

ರಾಜಕೀಯ ಹಿತಾಸಕ್ತಿಯಿಂದ ಬೆಳಗಾವಿಯ ವಿಭಜನೆಗೆ ಕೆಲವರು ಮಾತನಾಡುತ್ತಿರುವುದು ಖಂಡನೀಯವಾದದ್ದು, ಅಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕೆ ಹೊರತು ವಿಭಜನೆಯಾಗಬಾರದು. ಆಡಳಿತದ ಅನುಕೂಲಕ್ಕಾಗಿ ಬೇಕಾದರೆ ಸೂಕ್ತ ವಿಂಗಡಣೆ ಮಾಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಅವರು ಸರಕಾರಕ್ಕೆ ಸಲಹೆ ಮಾಡಿದರು.

ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಪೋಷಕರು ಬೆಳೆಸಿಕೊಂಡು, ಮಕ್ಕಳಲ್ಲಿ ಭಾಷಾಭಿಮಾನವನ್ನು ಬೆಳೆಸಬೇಕು. ಬಿಬಿಎಂಪಿ ಪ್ರಾಥಮಿಕ ಶಾಲೆಗಳನ್ನು ಗಮನಿಸಿದಾಗ ಮಕ್ಕಳಲ್ಲಿನ ಕನ್ನಡ ಭಾಷಾ ಬಳಕೆ ಕಡಿಮೆ ಅನ್ನಿಸುತ್ತೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ಚಳುವಳಿಗಳ ಮೂಲಕ ಗುರುತಿಸಿಕೊಂಡಿದ್ದ ಜಿನಾಕು ಸಂಸ್ಮರಣೆಯಲ್ಲಿ ಪಾಲ್ಗೊಂಡಿರುವುದು ಸಂತಸದ ವಿಚಾರವಲ್ಲ ಅಭಿಮಾನದ ವಿಚಾರ. ನಾಡಿನ ನಾನಾ ಭಾಗದಿಂದ ಬಂದಿರುವ ಅವರ ಅಭಿಮಾನಿಗಳೇ ಇದಕ್ಕೆ ಸಾಕ್ಷಿ. ಜಿನಾಕು ಒಬ್ಬ ವ್ಯಕ್ತಿಯಾಗಿರದೆ, ವ್ಯಕ್ತಿಯ ಜತೆಗೆ ವಿಚಾರವಿತ್ತು. ಮುಂದಿನ ದಿನಗಳಲ್ಲೂ ಅವರ ವಿಚಾರ ಬದುಕಿರುತ್ತೆ ಎಂದು ಹೇಳಿದರು.

ನಗರದಲ್ಲಿ ಕನ್ನಡ ಭಾಷೆ ಬಳಕೆ ಕಡಿಮೆಯಾಗುತ್ತಿರುವುದರ ಬಗ್ಗೆ ತೀವ್ರ ಹೋರಾಟ ಮಾಡುವ ಮೂಲಕ ಜೀವನದ ಕೊನೆಯವರೆಗೂ ಕನ್ನಡದ ನಾಡು-ನುಡಿ, ನೆಲ-ಜಲ, ಕಲೆ-ಸಾಹಿತ್ಯದ ಉಳಿವಿಗಾಗಿ ಶ್ರಮಿಸಿದರು. ಅಲ್ಲದೆ, ಕಾರ್ಮಿಕ ಸಮಸ್ಯೆಗಳಿಗೆ ಸ್ಪಂದಿಸಿದರು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್, ಕನ್ನಡ ಚಳವಳಿ ಅಧ್ಯಕ್ಷ ಗುರುದೇವ್ ನಾರಾಯಣ್‌ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ವ.ಚ.ಚನ್ನೇಗೌಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X