Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರ ಸಂಘದ ಚುನಾವಣೆ ವಿಚಾರ:...

ಸಹಕಾರ ಸಂಘದ ಚುನಾವಣೆ ವಿಚಾರ: ಆಡಳಿತಾಧಿಕಾರಿ ವಿರುದ್ಧ ಏಕೆ ಕಾನೂನು ಕ್ರಮ ಜರುಗಿಸಬಾರದು?: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Sept 2018 10:23 PM IST
share
ಸಹಕಾರ ಸಂಘದ ಚುನಾವಣೆ ವಿಚಾರ: ಆಡಳಿತಾಧಿಕಾರಿ ವಿರುದ್ಧ ಏಕೆ ಕಾನೂನು ಕ್ರಮ ಜರುಗಿಸಬಾರದು?: ಹೈಕೋರ್ಟ್

ಬೆಂಗಳೂರು, ಸೆ.24: ಸಹಕಾರ ಸಂಘಗಳು ಇರುವುದು ಸದಸ್ಯರ ಮತ್ತು ಜನರ ಅನುಕೂಲಕ್ಕಾಗಿಯೇ ಹೊರತು ಅಧಿಕಾರಿಗಳಿಗಾಗಿ, ರಾಜಕಾರಣಿಗಳಿಗಾಗಿಯಲ್ಲ ಎಂದು ಸಹಕಾರ ಸಂಘದ ರಿಜಿಸ್ಟ್ರಾರ್ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. 

ಹೊಸಕೋಟೆ ತಾಲೂಕಿನ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ನಡೆಸುವಂತೆ ಕೋರಿ ಸಂಘದ ಮಾಜಿ ಅಧ್ಯಕ್ಷ ರಮೇಶ್ ಜಿ. ಮತ್ತಿತರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ನ್ಯಾಯಾಲಯದ ಸೂಚನೆ ಮೀರಿ ಸಂಘದ ಕೆಲವೇ ಆಯ್ದ ಸದಸ್ಯರ ಸಾಮಾನ್ಯ ಸಭೆ ನಡೆಸಲು ಮುಂದಾಗಿದ್ದ ಸಂಘದ ಆಡಳಿತಾಧಿಕಾರಿ ವಿರುದ್ಧ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಹಾಗೆಯೇ ಆಡಳಿತಾಧಿಕಾರಿ ನಡವಳಿಕೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಸಹಕಾರ ಸಂಘಗಳ ರಿಜಿಸ್ಟ್ರಾರ್ ವಿರುದ್ಧವೂ ಕಿಡಿಕಾರಿತು. ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗುವ ಮತ್ತು ನಿಯಮ ಉಲ್ಲಂಘಿಸಿ ನಿಮಗೆ ಬೇಕಂದ ಹಾಗೆ ಆಡಳಿತ ನಡೆಸಲು ಇಚ್ಛಿಸುವ ನೀವು ಕಾನೂನಿಗಿಂತ ಮೇಲಿನವರು ಎಂದು ಭಾವಿಸಿದ್ದೀರಿ. ನಿಮ್ಮಂಥವರು ಹುದ್ದೆಯಲ್ಲಿ ಮುಂದುವರೆಯುವ ಅರ್ಹತೆ ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ನಿಮ್ಮ ಮೇಲೆ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳಬಾರದೇಕೆ ಎಂಬುದಕ್ಕೆ ವಿವರಣೆ ನೀಡಿ ಎಂದು ಸೂಚಿಸಿ, ವಿಚಾರಣೆಯನ್ನು ಅ.28ಕ್ಕೆ ಮುಂದೂಡಿತು.

ಕೊಳತೂರು ಹಾಲು ಉತ್ಪಾದಕರ ಸಂಘಕ್ಕೆ ಅ.11ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಆ ಪ್ರಕಾರ ಆ.14ರಂದು ಚುನಾವಣಾ ದಿನಾಂಕವನ್ನೂ ಘೋಷಿಸಲಾಗಿತ್ತು. ಆದರೆ ಚುನಾವಣೆ ನಡೆಸುವ ಬದಲಿಗೆ ಸಹಕಾರ ಸಂಘದ ರಿಜಿಸ್ಟ್ರಾರ್ ಸಂಘವನ್ನು ಸೂಪರ್‌ಸೀಡ್ ಮಾಡಿ, ಆಡಳಿತಾಧಿಕಾರಿ ನೇಮಕ ಮಾಡಿದ್ದರು. ತದನಂತರ ಚುನಾವಣೆ ನಡೆಸುವಂತೆ ನಿರ್ದೇಶಿಸುವಂತೆ ಕೋರಿ ಸಂಘದ ರಮೇಶ್ ಮತ್ತಿತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದರೂ ಅಧಿಕಾರಿಗಳು ಗೈರಾಗಿದ್ದರು. ಜತೆಗೆ ಆಡಳಿತಾಧಿಕಾರಿ ಸಂಘದ ಸಾಮಾನ್ಯ ಸಭೆ ನಡೆಸಲು ತಮಗೆ ಬೇಕಾದ ಕೆಲವೇ ಆಯ್ದ ಸದಸ್ಯರನ್ನು ಬರುವಂತೆ ನೋಟಿಸ್ ಹೊರಡಿಸಿದ್ದರು.

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ, ಸಭೆ ನಡೆಸಲು ಮುಂದಾಗಿದ್ದ ಅಧಿಕಾರಿಗಳ ಕ್ರಮ ನ್ಯಾಯಾಲಯದ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಂಘದ ಕಾರ್ಯದರ್ಶಿಯನ್ನು ಬಂಧಿಸಿ ಕರೆತರುವಂತೆ ಬೆಂ.ಗ್ರಾ. ಎಸ್ಪಿಗೆ ಆದೇಶಿಸಿ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X