Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗ...

ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗ -ಫಾರ್ಮಸಿಸ್ಟರು

ಇಂದು ವಿಶ್ವ ಫಾರ್ಮಸಿಸ್ಟರ ದಿನ

ಡಾ. ಮುರಲೀಮೋಹನ್, ಚೂಂತಾರುಡಾ. ಮುರಲೀಮೋಹನ್, ಚೂಂತಾರು25 Sept 2018 12:06 AM IST
share
ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗ -ಫಾರ್ಮಸಿಸ್ಟರು

ಪ್ರತಿ ವರ್ಷ ಸೆಪ್ಟಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್‌ಗಳು ವಿಶ್ವ ಫಾರ್ಮಸಿಸ್ಟ್‌ರ ದಿನ ಎಂದು ಆಚರಿಸಿರುತ್ತಾರೆ. 2009ರಲ್ಲಿ ಇಂಟರ್‌ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‌ನ ಆದೇಶದಂತೆ ಈ ಆಚರಣೆೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ಫಾರ್ಮಸಿ ವಿಭಾಗದ ತಜ್ಞರು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಶಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ದಿನವಾಗಿದೆ ಇಂದು. ಪ್ರತಿ ವರ್ಷ ಏನಾದರೊಂದು ತಿರುಳನ್ನು ಇಟ್ಟುಕೊಂಡು, ಜನರಲ್ಲಿ ಮತ್ತು ವೃತ್ತಿ ಬಂಧುಗಳಲ್ಲಿ ಔಷಧಿಗಳ ಬಗ್ಗೆ ಹೆಚ್ಚಿನ ಅರಿವು, ಜಾಗೃತಿ ಮತ್ತು ಕಾಳಜಿ ಮೂಡಿಸುವ ಏಕಮೇವ ಆದ್ಯತೆಯನ್ನು ಈ ಆಚರಣೆಯ ಉದ್ದೇಶ ಹೊಂದಿದೆ.

2015ರ ಆಚರಣೆಯ ತಿರುಳು ಏನೆಂದರೆ ‘ಫಾರ್ಮಸಿಸ್ಟರು ನಿಮ್ಮ ಆರೋಗ್ಯದ ಒಡನಾಡಿ’ ಎಂಬುದಾಗಿದೆ. ಆರೋಗ್ಯ ಕ್ಷೇತ್ರ ಮತ್ತು ಫಾರ್ಮಸಿ ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಬ್ಬ ಯಶಸ್ವಿ ವೈದ್ಯರ ಹಿಂದೆ ಖಂಡಿತವಾಗಿಯೂ ಒಂದು ಪರಿಣಾಮಕಾರಿ ಔಷಧಿ ಹಾಗೂ ನಿಷ್ಠಾವಂತ ಫಾರ್ಮಸಿಸ್ಟ್ ಇದ್ದೇ ಇರುತ್ತಾರೆ. ಒಳ್ಳೆಯ ಗುಣಮಟ್ಟದ, ಪರಿಣಾಮಕಾರಿ ಔಷಧಿ ತಯಾರಿಕೆ, ಸಂಸ್ಕರಣೆ, ಶೇಖರಣೆ ಮತ್ತು ಸಂಶೋಧನೆ ಎಲ್ಲವೂ ವೈದ್ಯಕೀಯ ಕ್ಷೇತ್ರದ ಉನ್ನತಿಗೆ ಅನಿವಾರ್ಯವೆನಿಸಿದೆ. ಪಾರ್ಮಕೋನ್ ಎಂಬ ಗ್ರೀಕ್ ಪದದಿಂದ ಹುಟ್ಟಿದ ಫಾರ್ಮಸಿ ಎಂಬ ಶಬ್ದ ಹಲವಾರು ಅರ್ಥ ಮತ್ತು ಆಯಾಮಗಳನ್ನು ಹೊಂದಿವೆ. ಒಂದೇ ಮಾತಲ್ಲಿ ಹೇಳುವುದಾದರೆ ಔಷಧಿಗಳ ಉತ್ಪಾದನೆೆ, ಶೇಖರಣೆ, ವಿತರಣೆ, ಅಧ್ಯಯನ ಮತ್ತು ಅವಿಷ್ಕಾರ ಎಲ್ಲವೂ ಈ ಫಾರ್ಮಸಿ ಕಾರ್ಯಕ್ಷೇತ್ರದಲ್ಲಿಯೇ ಬರುತ್ತದೆ. ಫಾರ್ಮಸಿ ಕ್ಷೇತ್ರ ಅಂದರೆ ಔಷಧಿ ವಿಜ್ಞಾನದ ವಿಷಯದಲ್ಲಿ ವಿದ್ಯಾರ್ಹತೆ ಪಡೆದು ವೃತ್ತಿಪರವಾಗಿ ಈ ಔಷಧಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಎಲ್ಲರನ್ನೂ ಫಾರ್ಮಸಿಸ್ಟ್ ಎಂದು ಕರೆಯಲಾಗುತ್ತದೆ. ಔಷಧಿಯ ದುರ್ಬಳಕೆ ತಡೆಯುವುದು ಹೇಗೆ?

ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಔಷಧಿ ಕ್ಷೇತ್ರವೂ ಈ ಸಮೀಕರಣಕ್ಕೆ ಹೊರತಾಗಿಲ್ಲ. ದಿನಕ್ಕೊಂದರಂತೆ ಹೊಸ ಹೊಸ ಅಣುಜೀವಿಗಳು, ಬ್ಯಾಕ್ಟೀರಿಯಾಗಳು ಹುಟ್ಟಿಕೊಳ್ಳುತ್ತಿವೆ. ಅದೇ ರೀತಿ ಹೊಸತಾದ ಔಷಧಿಗಳೂ ಹುಟ್ಟಿಕೊಳ್ಳುತ್ತಿವೆ. ವಾತಾವರಣದ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ವಿಕಿರಣ, ವಾತಾವರಣದ ಕಲ್ಮಶಗಳಿಂದಲೂ ಅಣುಜೀವಿಗಳು ತಮ್ಮ ಅಸ್ತಿತ್ವಕ್ಕಾಗಿ ದಿನೇ ದಿನೇ ವಂಶವಾಹಿನಿಗಳಲ್ಲಿ ಪರಿವರ್ತನೆ ಮಾಡಿಸಿಕೊಂಡು ಮನುಕುಲದ ವಿರುದ್ಧ ತೊಡೆತಟ್ಟಿಕೊಂಡು ಸಮರ ಸಾರುತ್ತಲೇ ಇವೆ. ಈಗ ಪ್ರತಿಯೊಂದು ರೋಗಕ್ಕೂ ಒಂದು ಔಷಧಿ ಇದೆ. ಈಗಿನ ಕಾಲಘಟ್ಟದಲ್ಲಿ ಹೊಟ್ಟೆಗೆ ಊಟವಿಲ್ಲದಿದ್ದರೂ ಬದುಕ ಬಹುದು ಆದರೆ ಔಷಧಿ ಇಲ್ಲದೆ ಬದುಕಲಾರ ಎಂಬ ಅನಿವಾರ್ಯತೆಗೆ ಬಂದು ತಲುಪಿದ್ದೇವೆ. ಹಲವಾರು ರೋಗಗಳನ್ನು ಔಷಧಿಗಳ ಬಳಕೆಯಿಲ್ಲದೆ ಆಹಾರ ನಿಯಂತ್ರಣ, ನಿಯಮಿತ ವ್ಯಾಯಾಮ, ದೈಹಿಕ ಕಸರತ್ತು, ಶುದ್ಧ ನೀರು, ಗಾಳಿ ಆಹಾರಗಳಿಂದ ತಡೆಗಟ್ಟಬಹುದೆಂದು ತಿಳಿದಿದ್ದರೂ ನಾವೆಲ್ಲಾ ಒಂದಲ್ಲ ಒಂದು ರೀತಿಯಲ್ಲಿ ಔಷಧಿಗಳಿಗೆ ದಾಸರಾಗುತ್ತಿದ್ದೇವೆ ಎಂಬುದೇ ವಿಪರ್ಯಾಸ.

ಹೆಚ್ಚು ದಢೂತಿಯಿದ್ದರೆ ತೆಳ್ಳಗಾಗಲು ಮಾತ್ರೆ, ತೀರ ಸಣಕಲರಾಗಿದ್ದರೆ ದೇಹತೂಕ ಹೆಚ್ಚಿಸಲು ಚೂರ್ಣ, ಬುದ್ಧಿಶಕ್ತಿ ಹೆಚ್ಚಿಸಲು ಕಷಾಯ, ಮಾತ್ರೆ ಹೀಗೆ ಪ್ರತಿಯೊಂದಕ್ಕೂ ಮನುಷ್ಯ ಒಂದಲ್ಲ ಒಂದು ಔಷಧಿ ತಯಾರಿ ಮಾಡಿಕೊಂಡು ಅನಗತ್ಯವಾಗಿ ಔಷಧಿಗಳ ಮೇಲೆ ಅವಲಂಬಿತನಾಗಿದ್ದಾನೆ. ಔಷಧಿಗಳ ಸದ್ಬಳಕೆಗಿಂತ ದುರ್ಬಳಕೆಯಾಗುತ್ತಿರುವುದೇ ಬಹುದೊಡ್ಡ ದುರಂತ. ಒಂದು ಔಷಧಿ ಮಾರುಕಟ್ಟೆಗೆ ಬರುವ ಮೊದಲು ಸಾಕಷ್ಟು ಸಂಶೋಧನೆ ನಡೆದು ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿ ಪ್ರಾಣಿಗಳಲ್ಲಿ ಮತ್ತು ಮನುಷ್ಯರ ಮೇಲೆ ಪ್ರಯೋಗ ನಡೆಸಿ ಸುರಕ್ಷಿತವಾಗಿದೆ ಎಂದು ಸಾಬೀತಾದಲ್ಲಿ ಮಾತ್ರ ಮನುಕುಲದ ಮೇಲೆ ಉಪಯೋಗಿಸಲು ಅನುಮತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಒಂದು ಔಷಧಿ ಕಾರ್ಖಾನೆಗಳಲ್ಲಿ ತಯಾರಾಗಿ ಮೆಡಿಕಲ್ ಸ್ಟೋರ್‌ಗಳ ಮುಖಾಂತರ ಗ್ರಾಹಕರ ಕೈ ಸೇರುವವರೆಗೆ ವಿಜ್ಞಾನಿಗಳು, ವೈದ್ಯರು, ಸಂಶೋಧಕರು ಮತ್ತು ಫಾರ್ಮಸಿಸ್ಟ್‌ಗಳ ಪಾತ್ರ ಬಹಳ ಗಣನೀಯವಾದದ್ದು ಮತ್ತು ಪವಿತ್ರವಾದದ್ದು. ಔಷಧಿ ನಿಯಂತ್ರಣ ಇಲಾಖೆೆಯಲ್ಲಿ ದೃಢೀಕೃತಗೊಂಡ ಬಳಿಕವೇ ಮಾರುಕಟ್ಟೆಯಲ್ಲಿ ಭ್ಯವಾಗುತ್ತದೆ. ಈ ರೀತಿ ದೊರಕುವ ಔಷಧಿಗಳ ಸದ್ಬಳಕೆಯಲ್ಲಿ ವೈದ್ಯರು ಮತ್ತು ಫಾರ್ಮಸಿಸ್ಟ್‌ಗಳ ಪಾತ್ರ ಅತ್ಯಂತ ಹಿರಿದಾದುದು. ವೈದ್ಯರು ಅನಗತ್ಯವಾಗಿ ಔಷಧಿಗಳನ್ನು ನೀಡಬಾರದು ಮತ್ತು ಅತೀ ಅವಶ್ಯವಿದ್ದಲ್ಲಿ ಮಾತ್ರ ಹಿತಮಿತವಾಗಿ ಬಳಸತಕ್ಕದ್ದು. ಅದೇ ರೀತಿ ವೈದ್ಯ ಬರೆದ ಔಷಧಿಗಳನ್ನು ಸೂಕ್ತ ಪ್ರಮಾಣದಲ್ಲಿ ಮತ್ತು ಅದೇ ಔಷಧಿಗಳನ್ನು ನೀಡುವ ಗುರುತರ ಹೊಣೆಗಾರಿಕೆ ಪಾರ್ಮಸಿಸ್ಟುಗಳ ಕೈಯಲ್ಲಿದೆ. ಹೀಗೆ ಎಲ್ಲರೂ ತಂತಮ್ಮ ಜವಾಬ್ದಾರಿ ಅರಿತು ನಿಭಾಯಿಸಿದಲ್ಲಿ ಮಾತ್ರ ಔಷಧಿಗಳ ದುರ್ಬಳಕೆಯನ್ನು ತಡೆಗಟ್ಟಬಹುದು. ಇಲ್ಲವಾದಲ್ಲಿ ಮುಂದೊಂದು ದಿನ ಅಣುಜೀವಿಗಳು, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳು ಮನುಕುಲವನ್ನು ನುಂಗಿ ನೀರು ಕುಡಿಯಲೂ ಬಹುದು. ಕೊನೆಮಾತು 

ಅತಿಯಾದಲ್ಲಿ ಅಮೃತವೂ ವಿಷವಾಗಬಲ್ಲದು ಎಂಬುದು ನಮ್ಮ ಹಿರಿಯರು ಹೇಳಿದ ಮಾತು. ಯಾವುದೇ ವಸ್ತುವನ್ನು ಹಿತಮಿತವಾಗಿ ಬಳಸಬೇಕು ಎಂಬುದೇ ಇದರ ಆಶಯ. ಹಾಗೆಯೇ ಔಷಧಿಗಳ ವಿಷಯದಲ್ಲಿಯೂ ನಾವು ಜಾಗೃತರಾಗಬೇಕಾದ ಅನಿವಾರ್ಯ ಸನ್ನಿವೇಶ ಬಂದೊದಗಿದೆ. ಯಾಕೆಂದರೆ ಹಲವಾರು ಔಷಧಿಗಳು ರೋಗ ಗುಣವಾಗಿಸುವುದರ ಜೊತೆಗೆ ಇತರ ಇನ್ನಿತರ ರೋಗಗಳಿಗೆ ರಹದಾರಿ ಮಾಡಿಕೊಡುತ್ತದೆ. ಈ ಕಾರಣದಿಂದಲೇ ಅತೀ ಅಗತ್ಯವಿದ್ದಲ್ಲಿ, ಅನಿವಾರ್ಯವಿದ್ದಲ್ಲಿ ಮಾತ್ರ ಔಷಧಿಗಳಿಗೆ ಮೊರೆ ಹೋಗಬೇಕು. ಒಮ್ಮೆ ಔಷಧಿಗಳ ದಾಸರಾದಲ್ಲಿ ಜೀವನ ಪರ್ಯಾಂತ ಔಷಧಿ ಇಲ್ಲದೆ ಮನುಷ್ಯ ಬದುಕಲಾರದಂತಹ ಸನ್ನಿವೇಶಕ್ಕೆ ತಲುಪಿ ಬಿಡುತ್ತಾರೆ. ಈ ನಿಟ್ಟಿನಲ್ಲಿ ವೈದ್ಯರಿಗೆ ಮತ್ತು ಫಾರ್ಮಸಿಸ್ಟರಿಗೆ ಹೆಚ್ಚಿನ ಸಾಮಾಜಿಕ ಜವಾಬ್ದಾರಿ, ಹೊಣೆಗಾರಿಕೆ ಇದೆ. ತಮ್ಮ ವೃತ್ತಿ ಧರ್ಮವನ್ನು ಬಲಿ ಕೊಡದೆ ವೃತ್ತಿಯ ಘನತೆ, ಗೌರವ, ಗಾಂಭೀರ್ಯಗಳನ್ನು ಎತ್ತಿ ಹಿಡಿದು ಮೌಲ್ಯಾಧಾರಿತವಾದ ಧ್ಯೇಯದಿಂದ ಫಾರ್ಮಸಿಸ್ಟ್‌ಗಳು ಕಾರ್ಯ ನಿರ್ವಹಿಸಿದಲ್ಲಿ ಸಾಮಾಜದ ಸ್ವಾಸ್ಥ ವೃದ್ಧಿಸುವುದರಲ್ಲಿ ಎರಡು ಮಾತಿಲ್ಲ. ಹಾಗಾದಲ್ಲಿ ಮಾತ್ರ ಈ ಆಚರಣೆಗೆ ಹೆಚ್ಚಿನ ಮೌಲ್ಯ ಬಂದೀತು. ಅದರಲ್ಲಿಯೇ ಮನುಕುಲದ ಉನ್ನತಿ ಮತ್ತು ಹಿತ ಅಡಗಿದೆ. ಎಲ್ಲಾ ಫಾರ್ಮಸಿಸ್ಟ್‌ಗಳಿಗೆ ಶುಭವಾಗಲಿ.

share
ಡಾ. ಮುರಲೀಮೋಹನ್, ಚೂಂತಾರು
ಡಾ. ಮುರಲೀಮೋಹನ್, ಚೂಂತಾರು
Next Story
X