ಪಡುಬಿದ್ರಿ: ಕಂಟೈನರ್ ಢಿಕ್ಕಿ;ಪಾದಾಚಾರಿಗೆ ಗಂಭೀರ ಗಾಯ
ಪಡುಬಿದ್ರಿ,ಸೆ.25: ರಸ್ತೆ ದಾಟುತಿದ್ದಾಗ ಕಂಟೈನರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66 ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತಿದ್ದಾಗ ಕಂಟೈನರ್ ಢಿಕ್ಕಿ ಹೊಡೆಯಿತು. ಕೂಡಲೇ ಸ್ಥಳೀಯರು ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತಿದ್ದು, ಕೆಲವಡೆ ಅಪಾಯಕಾರಿಯಾಗಿ ಹೆದ್ದಾರಿ ನಿರ್ಮಿಸಲಾಗಿದ್ದು., ಇದರಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.
Next Story