Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ: ಸೆ.27ರಿಂದ ಮೊದಲ ರಾಷ್ಟ್ರೀಯ...

ಮಲ್ಪೆ: ಸೆ.27ರಿಂದ ಮೊದಲ ರಾಷ್ಟ್ರೀಯ ಪ್ಯಾರಾ ಬೀಚ್ ವಾಲಿಬಾಲ್

ವಾರ್ತಾಭಾರತಿವಾರ್ತಾಭಾರತಿ25 Sept 2018 8:09 PM IST
share
ಮಲ್ಪೆ: ಸೆ.27ರಿಂದ ಮೊದಲ ರಾಷ್ಟ್ರೀಯ ಪ್ಯಾರಾ ಬೀಚ್ ವಾಲಿಬಾಲ್

ಉಡುಪಿ, ಸೆ.25: ಭಾರತೀಯ ಪ್ಯಾರಾಲಿಂಪಿಕ್ಸ್ ವಾಲಿಬಾಲ್ ಫೆಡರೇಷನ್‌ನ ಆಶ್ರಯದಲ್ಲಿ ಮೊತ್ತಮೊದಲ ಪ್ಯಾರಾ ಬೀಚ್ ವಾಲಿಬಾಲ್ ಸೀನಿಯರ್ ಸ್ಟಾಂಡಿಂಗ್ ರಾಷ್ಟ್ರೀಯ ಚಾಂಪಿಯನ್‌ಷಿಪ್ ಸೆ.27ರಿಂದ 29ರವರೆಗೆ ಮಲ್ಪೆಯ ಸಮುದ್ರ ಕಿನಾರೆಯಲ್ಲಿ ನಡೆಯಲಿದೆ ಎಂದು ಫೆಡರೇಷನ್‌ನ ಅಧ್ಯಕ್ಷ ಎಚ್.ಚಂದ್ರಶೇಖರ್ ತಿಳಿಸಿದ್ದಾರೆ.

ಮಣಿಪಾಲದ ಕಂಟ್ರಿ ಇನ್ ಹೊಟೇಲ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ 16 ವಿಕಲಚೇತನರ ಪ್ಯಾರಾ ಬೀಚ್ ವಾಲಿಬಾಲ್ ತಂಡಗಳು ಮೂರು ದಿನಗಳ ಈ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿವೆ. ವಿಕಲಚೇತನರ ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ಈ ಟೂರ್ನಿಯನ್ನು ಮೊದಲ ಬಾರಿ ಕರ್ನಾಟಕದ ಕರಾವಳಿಯಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಕರ್ನಾಟಕ, ಗೋವಾ, ತೆಲಂಗಾಣ, ತಮಿಳುನಾಡು, ಪಾಂಡಿಚೇರಿ, ಮಹಾರಾಷ್ಟ್ರ, ಉತ್ತರ ಪ್ರದೇಶ, ಉತ್ತರಖಾಂಡ, ರಾಜಸ್ತಾನ, ಹರ್ಯಾಣ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಜಾರ್ಖಂಡ್ ಹಾಗೂ ದಿಲ್ಲಿ ತಂಡಗಳು ಈಗಾಗಲೇ ಟೂರ್ನಿಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ. ಪ್ರತಿ ರಾಜ್ಯದಿಂದ ಎರಡು ತಂಡಗಳು ಆಡಬಹುದು ಎಂದು ಚಂದ್ರಶೇಖರ್ ತಿಳಿಸಿದರು.

ಹೆಚ್ಚಾಗಿ ಬೀಚ್‌ನಲ್ಲಿ ಆಡುವ ಈ ವಾಲಿಬಾಲ್‌ನ ಒಂದು ತಂಡದಲ್ಲಿ ಇಬ್ಬರು ಆಟಗಾರರಿರುತ್ತಾರೆ. ಆದರೆ ಇದು ವಿಕಲಚೇತನರಿಗಾಗಿ ನಡೆಯುವ ಸ್ಪರ್ಧೆಯಾದ ಕಾರಣ ತಂಡದಲ್ಲಿ ತಲಾ ಮೂವರು ಆಟಗಾರರಿರುತ್ತಾರೆ. ಇವರು ಕುಳಿತು ಮತ್ತು ನಿಂತು ಆಡುತ್ತಾರೆ. ಮಲ್ಪೆಯಲ್ಲಿ ನಡೆಯಲಿರುವುದು ನಿಂತು ಆಡುವ ವಾಲಿಬಾಲ್ ಆಟವಾಗಿದೆ ಎಂದು ಚಂದ್ರಶೇಖರ್ ವಿವರಿಸಿದರು.

ಪ್ರತಿ ತಂಡದಲ್ಲಿ ಮೂವರು ಪುರುಷ ಆಟಗಾರರಿರಬಹುದು. ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆಯೂ ಇರಬಹುದು. ಆದರೆ ಬೀಚ್ ವಾಲಿಬಾಲ್‌ನಲ್ಲಿರುವ ವಸ್ತ್ರಸಂಹಿತೆಯಿಂದ ಭಾರತದಲ್ಲಿ ಮಹಿಳೆಯರು ಈ ಆಟಕ್ಕೆ ಬರುವುದು ತೀರಾ ಅಪರೂಪ ಎಂದರು.

ಕರಾವಳಿಯ ತೀರ ಪ್ರದೇಶದಲ್ಲಿರುವ ಯುವಕರು ಈ ಆಟದಲ್ಲಿ ಹೆಚ್ಚು ಆಸಕ್ತಿ ತೋರಿಸಬೇಕು. ಇದಕ್ಕಾಗಿ ನಾಳೆ ಮಲ್ಪೆ ಬೀಚ್‌ನಲ್ಲಿ ಬೆಳಗ್ಗೆಯಿಂದ ಸಾರ್ವಜನಿಕರಿಗಾಗಿ ಆಟದ ಪ್ರಾತ್ಯಕ್ಷಿಕೆ ಇರುತ್ತದೆ. ಆಸಕ್ತಿ ಇರುವ ತರುಣರು ಇದರಲ್ಲಿ ಭಾಗವಹಿಸಬಹುದು ಎಂದು ಚಂದ್ರಶೇಖರ್ ತಿಳಿಸಿದರು.

ಚಾಂಪಿಯನ್‌ಷಿಪ್‌ನ್ನು ಅ.27ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಉದ್ಘಾಟಿಸುವರು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರಬಾಬು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಿಇಒ ಶಿವಾನಂದ ಕಾಪಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.ಸಮಾರೋಪ ಸಮಾರಂಭ ಸೆ.29ರಂದು ಸಂಜೆ ನಡೆಯಲಿದೆ.

ಸ್ಪರ್ಧೆಗಳನ್ನು ವಿಶ್ವ ಪ್ಯಾರಾ ವಾಲಿಬಾಲ್ ನಿಯಮದಡಿ ಆಡಲಾಗುವುದು. ಒಟ್ಟು ಒಂದು ಲಕ್ಷ ರೂ.ಬಹುಮಾನ ನಿಧಿಯನ್ನು ವಿಜೇತರಿಗೆ ವಿತರಿಸಲಾಗುವುದು. ಸ್ಪರ್ಧೆಯ ಕೊನೆಯ ಭಾರತೀಯ ರಾಷ್ಟ್ರೀಯ ಪ್ಯಾರಾ ಬೀಚ್ ವಾಲಿಬಾಲ್ ತಂಡವನ್ನು ಆಯ್ಕೆ ಮಾಡಲಾಗುವುದು. ಈ ತಂಡ 2019ರ ಫೆ. ತಿಂಗಳಲ್ಲಿ ಗೋವಾದಲ್ಲಿ ನಡೆಯುವ ವಿಶ್ವ ಪ್ಯಾರಾ ಬೀಚ್ ವಾಲಿಬಾಲ್ ಟೂರ್ನಿಯಲ್ಲಿ ಭಾಗವಹಿಸಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎನ್‌ಐಸಿಎಫ್‌ನ ನಿರ್ದೇಶಕ ಡಾ.ಜಗನ್ನಾಥನ್, ಫೆಡರೇಷನ್‌ನ ಮಾರ್ಕೆಟಿಂಗ್ ಮುಖ್ಯಸ್ಥ ರಂಜಿತ್ ಮಾರ್ಟಿನ್, ಶಿವಕುಮಾರ ಶೆಟ್ಟಿ, ಉದಯಕುಮಾರ್ ಶೆಟ್ಟಿ, ನಗರಸಭಾ ಪೌರಾಯುಕ್ತ ಜನಾರ್ದನ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಅಧಿಕಾರಿ ಡಾ.ರೋಶನ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X