Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ...

ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಸರಕಾರದ ಆದೇಶ

ವಾರ್ತಾಭಾರತಿವಾರ್ತಾಭಾರತಿ25 Sept 2018 8:13 PM IST
share
ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಸರಕಾರದ ಆದೇಶ

ಬೆಂಗಳೂರು, ಸೆ.25: ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಘೋಷಿಸಿದ್ದ ಮಾಧ್ಯಮ ಸಂಜೀವಿನಿ ಯೋಜನೆಯ ಅನುಷ್ಠಾನಕ್ಕೆ ಸರಕಾರ ಆದೇಶ ಹೊರಡಿಸಿದೆ.

ಪತ್ರಕರ್ತರು ವೃತ್ತಿನಿರತ ಕೆಲಸಗಳ ವೇಳೆ ಅಪಘಾತಕ್ಕೆ ಒಳಗಾದರೆ ಇಲ್ಲವೆ ಇನ್ನಿತರೆ ಅವಘಡಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಸಂದರ್ಭದಲ್ಲಿ ಅವರುಗಳ ಕುಟುಂಬದವರಿಗೆ 5ಲಕ್ಷ ರೂ.ವರೆಗಿನ ಜೀವ ವಿಮೆ ಖಾತರಿ ನೀಡಲಿರುವ ಮಾಧ್ಯಮ ಸಂಜೀವಿನಿ ಸಮೂಹ ಜೀವವಿಮೆ ಸೌಲಭ್ಯವನ್ನು ಪತ್ರಕರ್ತರಿಗೆ ಕಲ್ಪಿಸಲಾಗುವುದು.  

ಈ ಯೋಜನೆಯಡಿ ಪತ್ರಕರ್ತರಿಗೆ 5ಲಕ್ಷ ರೂ.ವರೆಗಿನ ಜೀವವಿಮೆ ಸೌಲಭ್ಯದ ಖಾತ್ರಿ ನೀಡಲಾಗುವುದು. ಈ ವಿಮೆ ಕಂತುಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಭರಿಸಲಾಗುವುದು. ಪತ್ರಕರ್ತರು ತಮ್ಮ 60 ವರ್ಷ ವಯಸ್ಸಿನವರಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗುವುದು. ಈ ಯೋಜನೆಯಿಂದ ರಾಜ್ಯದಾದ್ಯಂತ ಪ್ರಸ್ತುತ ಇರುವ 2065 ಮಾನ್ಯತೆ ಪಡೆದ ಪತ್ರಕರ್ತರು ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಈ ಯೋಜನೆಯನ್ನು ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ನಿಯಮ 1999/2000 ರಡಿ ಟೆಂಡರ್ ಆಹ್ವಾನಿಸಿ ಕ್ರಮ ವಹಿಸಲಾಗುವುದು.

ಮಾಧ್ಯಮ ಸಂಜೀವಿನಿ ಸಮೂಹ ಜೀವವಿಮೆ ಸೌಲಭ್ಯವನ್ನು ಪತ್ರಕರ್ತರಿಗೆ ಕಲ್ಪಿಸಲಾಗುವ ಯೋಜನೆಗೆ ಅನುಮತಿ ನೀಡಿ ಈ ಕೆಳಕಂಡ ಮಾನದಂಡಗಳನ್ವಯ ಆದೇಶಿಸಿದೆ.

ಪತ್ರಕರ್ತರು ಇಲಾಖೆಯಿಂದ ಮಾನ್ಯತೆ ಪತ್ರವನ್ನು ಪಡೆದಿರಬೇಕು. 25 ವರ್ಷದಿಂದ 60 ನೇ ವಯಸ್ಸಿನವರೆಗೆ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಪತ್ರಕರ್ತರು ವತ್ತಿನಿರತ ಕೆಲಸದ ಮೇಲೆ ಅಪಘಾತಕ್ಕೆ ಒಳಗಾದರೆ ಅಥವಾ ಗಂಭೀರ ಮತ್ತು ಇನ್ನಿತರೆ ಮಾರಣಾಂತಿಕ ಕಾಯಿಲೆಗಳಿಂದ ಅಕಾಲಿಕ ಮರಣ ಹೊಂದಿದ ಸಂದರ್ಭದಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಿಮಾ ಸೌಲಭ್ಯ ಪಡೆಯಲು ನಾಮ ನಿರ್ದೇಶಿತ ವ್ಯಕ್ತಿಯು ಕಂದಾಯ ಇಲಾಖೆಯಿಂದ ಕುಟುಂಬ ಅವಲಂಬಿತ ಪ್ರಮಾಣ ಪತ್ರವನ್ನು ಪಡೆದು ವಿಮಾ ಸಂಸ್ಥೆಗೆ ಸಲ್ಲಿಸಬೇಕು. ಕಾರ್ಯ ನಿರ್ವಹಿಸುವ ವೇಳೆಯಲ್ಲಿ ಅಮಾನತ್ತು ಇಲ್ಲವೆ ವಜಾಗೊಂಡಿರುವ ಪತ್ರಕರ್ತರು ಈ ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ. ಪತ್ರಕರ್ತರು ಕಾರ್ಯ ಅವಧಿಯಲ್ಲಿ ಭಾರತೀಯ ಪತ್ರಿಕಾ ಮಂಡಳಿ ಅಥವಾ ಐಬಿಎನಿಂದ ಛೀಮಾರಿ ಅಥವಾ ದಂಡ, ಇಲ್ಲವೆ ಎರಡೂ ಶಿಕ್ಷೆಗಳಿಗೆ ಗುರಿಯಾಗಿರುವಂತ ಪತ್ರಕರ್ತರು ಮತ್ತು ಸದನದ ಹಕ್ಕುಚ್ಯುತಿ ಸಮಿತಿಯ ದಂಡನೆಗೊಳಗಾದ ಪತ್ರಕರ್ತರು ಈ ಸೌಲಭ್ಯಕ್ಕೆ ಅರ್ಹರಲ್ಲ. ಅರ್ಜಿ ಸಲ್ಲಿಸುವ ವೇಳೆಯಲ್ಲಿ ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಭಾಗಿಯಾಗಿರಬಾರು ಎಂದು ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X