Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತರ್‌ರಾಷ್ಟ್ರೀಯ ಬಾಕ್ಸಿಂಗ್ ಕೂಟ:...

ಅಂತರ್‌ರಾಷ್ಟ್ರೀಯ ಬಾಕ್ಸಿಂಗ್ ಕೂಟ: ಸಂದೀಪ್ ಕೌರ್‌ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ25 Sept 2018 11:56 PM IST
share
ಅಂತರ್‌ರಾಷ್ಟ್ರೀಯ ಬಾಕ್ಸಿಂಗ್ ಕೂಟ: ಸಂದೀಪ್ ಕೌರ್‌ಗೆ ಚಿನ್ನ

ಚಂಡಿಗಡ, ಸೆ.25: ಯುವ ಬಾಕ್ಸಿಂಗ್ ತಾರೆ ಸಂದೀಪ್ ಕೌರ್ ಪೊಲೆಂಡ್‌ನಲ್ಲಿ ನಡೆದ 13ನೇ ಆವೃತ್ತಿಯ ಅಂತರ್‌ರಾಷ್ಟ್ರೀಯ ಸಿಲೆಸಿಯಾನ್ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 52 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡರು.

ಸಂದೀಪ್ ಪದಕ ಸುತ್ತಿನಲ್ಲಿ ಪೊಲೆಂಡ್‌ನ ಕರೊಲಿನಾ ಅಂಪುಸ್ಕಾರನ್ನು 5-0 ಅಂತರದಿಂದ ಮಣಿಸಿದರು.

ಪಟಿಯಾಲದ ಹಸ್ಸಾನ್‌ಪುರ ಹಳ್ಳಿಯಲ್ಲಿ ಜನಿಸಿರುವ 16ರ ಹರೆಯದ ಕೌರ್‌ಗೆ ಯಶಸ್ಸು ಸುಲಭದಲ್ಲಿ ಲಭಿಸಿಲ್ಲ. ಬಡ ಕುಟುಂಬದಿಂದ ಬಂದಿರುವ ಕೌರ್ ಹೋರಾಟದಿಂದಲೇ ಮೇಲೆ ಬಂದಿದ್ದಾರೆ. ಕುಟುಂಬದಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾದಾಗ ಹಳ್ಳಿಯ ಜನರು ಹಾಗೂ ಆಕೆಯ ಹೆತ್ತವರು ಕ್ರೀಡೆಯನ್ನು ತೊರೆಯುವಂತೆ ಒತ್ತಾಯಿಸಿದ್ದರು. ಸಂದೀಪ್ ಬಾಕ್ಸಿಂಗ್‌ನಲ್ಲಿ ತೊಡಗಿಸಿಕೊಂಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಸಂದೀಪ್ ತಂದೆ ಸರ್ದಾರ್ ಜಸ್ವಿರ್ ಸಿಂಗ್ ಪಟಿಯಾಲ ನಗರದಲ್ಲಿ ಆಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಸಿಂಗ್ ಸಂಪಾದನೆ ಕುಟುಂಬದ ಹಸಿವು ನೀಗಿಸಲು ಸಾಕಾಗುತ್ತಿರಲಿಲ್ಲ. ಆದರೆ, ಪುತ್ರಿ ಕೌರ್ ಬಾಕ್ಸಿಂಗ್‌ನ್ನು ತೊರೆಯದಂತೆ ಎಲ್ಲ ಪ್ರಯತ್ನ ನಡೆಸಿದ್ದರು.

ಚಿಕ್ಕಪ್ಪ ಸಿಮ್ರನ್‌ಜಿತ್ ಸಿಂಗ್ ಸಂದೀಪ್ ಕೌರ್‌ಗೆ ಬಾಕ್ಸಿಂಗ್ ಆಯ್ದುಕೊಳ್ಳಲು ಪ್ರೇರಣೆಯಾಗಿದ್ದರು. ‘‘ನಾನು ಚಿಕ್ಕಪ್ಪನೊಂದಿಗೆ ನಮ್ಮ ಹಳ್ಳಿಯ ಸಮೀಪದ ಬಾಕ್ಸಿಂಗ್ ಅಕಾಡಮಿಗೆ ತೆರಳುತ್ತಿದ್ದೆ. ಆಗ ನಾನು ಬಾಲಕಿಯಾಗಿದ್ದೆ. ಅಕಾಡಮಿಯಲ್ಲಿ ಹಲವು ಯುವ ಬಾಕ್ಸರ್‌ಗಳನ್ನು ನೋಡಿದ್ದೆ. ನಿಧಾನವಾಗಿ ಕ್ರೀಡೆಯತ್ತ ನನ್ನ ಆಸಕ್ತಿ ಬೆಳೆಯಿತು. 8ನೇ ವಯಸ್ಸಿನಲ್ಲಿ ನಾನು ಮೊದಲ ಬಾರಿ ಬಾಕ್ಸಿಂಗ್ ಗ್ಲೌಸ್‌ನ್ನು ಕೈಗೆತ್ತಿಕೊಂಡು ತರಬೇತಿ ಆರಂಭಿಸಿದ್ದೆ’’ ಎಂದು ಸಂದೀಪ್ ಕೌರ್ ಬಾಲ್ಯದ ನೆನಪನ್ನು ತೆರೆದಿಟ್ಟರು.

ಸಂದೀಪ್ ಕೌರ್ ಕೋಚ್ ಸುನೀಲ್ ಕುಮಾರ್ ಅವರೊಂದಿಗೆ ಬಾಕ್ಸಿಂಗ್ ಅಕಾಡಮಿಯಲ್ಲಿ ತರಬೇತಿ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X