Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯಾ ಕಪ್: ಭಾರತದ ವಿರುದ್ಧ ರೋಚಕ ಟೈ...

ಏಷ್ಯಾ ಕಪ್: ಭಾರತದ ವಿರುದ್ಧ ರೋಚಕ ಟೈ ಸಾಧಿಸಿದ ಅಫ್ಘಾನ್

ವಾರ್ತಾಭಾರತಿವಾರ್ತಾಭಾರತಿ26 Sept 2018 9:21 AM IST
share
ಏಷ್ಯಾ ಕಪ್: ಭಾರತದ ವಿರುದ್ಧ ರೋಚಕ ಟೈ ಸಾಧಿಸಿದ ಅಫ್ಘಾನ್

ದುಬೈ, ಸೆ.26: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಪಂದ್ಯದಲ್ಲಿ ಬಲಾಢ್ಯ ಭಾರತದ ವಿರುದ್ಧ ಅಪ್ಘಾನಿಸ್ತಾನ ರೋಚಕ ಟೈ ಸಾಧಿಸಿ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಯಿತು.

ಕೊನೆಕ್ಷಣದಲ್ಲಿ ತಂಡವನ್ನು ಸೋಲಿನ ಅಂಚಿನಿಂದ ಪಾರು ಮಾಡುವಲ್ಲಿ ರವೀಂದ್ರ ಜಡೇಜಾ ಪ್ರಯತ್ನ ನಡೆಸಿದರು. ಆದರೆ 34 ಎಸೆತಗಳಲ್ಲಿ 25 ರನ್ ಗಳಿಸಿದ್ದ ಜಡೇಜಾ, ರಶೀದ್ ಖಾನ್ ಎಸೆತದಲ್ಲಿ ನಜೀಬುಲ್ಲಾ ಅವರಿಗೆ ಕ್ಯಾಚ್ ನೀಡುವ ಮೂಲಕ ಇನ್ನೂ ಒಂದು ಎಸೆತ ಇರುವಂತೆಯೇ ಭಾರತ ಆಲೌಟ್ ಆಯಿತು. ಈ ಮೂಲಕ ಎಂ.ಎಸ್.ಧೋನಿ ನಾಯಕನಾಗಿ ಆಡಿದ 200ನೇ ಪಂದ್ಯ ಟೈನಲ್ಲಿ ಅಂತ್ಯವಾಯಿತು.

253 ರನ್ನುಗಳ ಗೆಲುವಿನ ಗುರಿ ಪಡೆದ ಭಾರತಕ್ಕೆ ಲೋಕೇಶ್ ರಾಹುಲ್ 66 ಎಸೆತಗಳಲ್ಲಿ 60 ಹಾಗೂ ಅಂಬಟಿ ರಾಯುಡು 57 (49) ಭರ್ಜರಿ ಆರಂಭ ಒದಗಿಸಿದರು. ಭಾರತ ವಿಕೆಟ್ ನಷ್ಟವಿಲ್ಲದೇ 110 ರನ್ ಗಳಿಸಿದ್ದಾಗ ನಬಿ ಅಪ್ಘಾನಿಸ್ತಾನಕ್ಕೆ ಮೊದಲ ವಿಕೆಟ್ ಗಳಿಸಿಕೊಟ್ಟರು. ಅಲ್ಪ ಅಂತರದಲ್ಲೇ ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್ ರಾಹುಲ್ ಅವರನ್ನು ರಶೀದ್ ಖಾನ್ ಪೆವಿಲಿಯನ್‌ಗೆ ಕಳುಹಿಸಿದರು. ನಾಯಕ ಧೋನಿ, ಮನೀಶ್ ಪಾಂಡೆ ಮತ್ತು ಕೇದಾರ್ ಜಾಧವ್ ಅವರು ಅಗ್ಗದ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಭಾರತ ಸೋಲಿನ ದವಡೆಗೆ ಸಿಲುಕಿತು. ಆ ಹಂತದಲ್ಲಿ 66 ಎಸೆತಗಳಲ್ಲಿ 44 ರನ್ ಗಳಿಸಿದ ದಿನೇಶ್ ಕಾರ್ತಿಕ್ ತಂಡವನ್ನು ಆಧರಿಸಲು ಪ್ರಯತ್ನಿಸಿದರು. ಗೆಲುವಿಗೆ ಇನ್ನೂ 48 ರನ್‌ಗಳು ಬೇಕಿದ್ದಾಗ ದಿನೇಶ್ ಕಾರ್ತಿಕ್ ಔಟಾದರು. ದೀಪಕ್ ಚಹಾರ್, ಕುಲದೀಪ್ ಯಾದವ್, ಸಿದ್ಧಾರ್ಥ್ ಕೌಲ್ ಪೆವಿಲಿಯನ್‌ಗೆ ಪರೇಡ್ ನಡೆಸಿದರು.

ಭಾರತದ ವಿರುದ್ಧ ದಾಖಲೆ ಶತಕ ಬಾರಿಸಿದ ಮುಹಮ್ಮದ್ ಶಹಝಾದ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X