Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಅನೇಕ ವೈದ್ಯರು ಕ್ಷಯರೋಗದ ಲಕ್ಷಣ...

ಭಾರತದ ಅನೇಕ ವೈದ್ಯರು ಕ್ಷಯರೋಗದ ಲಕ್ಷಣ ಪತ್ತೆ ಮಾಡುವಲ್ಲಿ ವಿಫಲ: ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ26 Sept 2018 8:29 PM IST
share
ಭಾರತದ ಅನೇಕ ವೈದ್ಯರು ಕ್ಷಯರೋಗದ ಲಕ್ಷಣ ಪತ್ತೆ ಮಾಡುವಲ್ಲಿ ವಿಫಲ: ಅಧ್ಯಯನ

ವಾಶಿಂಗ್ಟನ್,ಸೆ.26: ಭಾರತದಲ್ಲಿ ಖಾಸಗಿ ಕ್ಷೇತ್ರದ ಅನೇಕ ವೈದ್ಯರು ಕ್ಷಯರೋಗದ ಲಕ್ಷಣಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗುತ್ತಾರೆ ಮತ್ತು ರೋಗಿಗೆ ಅಸಮರ್ಪಕ ಚಿಕಿತ್ಸೆಯನ್ನು ನೀಡುತ್ತಾರೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಭಾರತ, ಚೀನಾ, ಇಂಡೋನೇಶಿಯಾ ಹಾಗೂ ಇತರ ಹಲವು ದೇಶಗಳಲ್ಲಿ ಗಾಳಿಯಿಂದ ಹರಡುವ ಕ್ಷಯರೋಗ ಅಥವಾ ಟಿಬಿ ಸಾರ್ವಜನಿಕ ಆರೋಗ್ಯ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. 2017ರಲ್ಲಿ ಈ ಕಾಯಿಲೆಗೆ ತುತ್ತಾಗಿ 1.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ತಿಳಿಸಿದೆ. ಈ ಕಾಯಿಲೆಯ ವಿರುದ್ಧದ ಹೋರಾಟದಲ್ಲಿ ರೋಗಿಯು ಕೆಮ್ಮಲು ಆರಂಭಿಸಿದ ಸಂದರ್ಭದಲ್ಲಿ ಅವರನ್ನು ಪರೀಕ್ಷಿಸುವ ಪ್ರಾಥಮಿಕ ಆರೋಗ್ಯ ವೈದ್ಯರು ದುರ್ಬಲ ಕೊಂಡಿಯಾಗಿದ್ದಾರೆ ಎಂದು ಅಧ್ಯಯನ ತಿಳಿಸಿದೆ. ಈ ಅಧ್ಯಯನವನ್ನು ನಡೆಸಿದ ಮುಂಬೈ ಮತ್ತು ಪೂರ್ವ ಪಾಟ್ನದಲ್ಲಿ ಇದು ರುಜುವಾತಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನದ ಆರ್ಥಿಕ ನೆರವಿನೊಂದಿಗೆ ಮ್ಯಾಕ್‌ಗಿಲ್ ವಿಶ್ವವಿದ್ಯಾನಿಲಯ, ವಿಶ್ವಬ್ಯಾಂಕ್ ಮತ್ತು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯದ ಸಂಶೋಧಕರ ನೇತೃತ್ವದಲ್ಲಿ ನಡೆದ ಈ ಅಧ್ಯಯನದಲ್ಲಿ ಕೆಲವು ಜನರನ್ನು ರೋಗವಿರುವಂತೆ ನಟಿಸುವಂತೆ ತಿಳಿಸಲಾಗಿತ್ತು. 2015-15 ರ ಮಧ್ಯೆ ಹತ್ತು ತಿಂಗಳ ಕಾಲ ಈ ಅಧ್ಯಯನ ನಡೆಸಲಾಗಿತ್ತು. 24 ಮಾದರಿ ರೋಗಿಗಳು ಸಾಮಾನ್ಯ ಕೆಮ್ಮು ಮತ್ತು ರೋಗವಿರುವ ಸಾಧ್ಯತೆ ಹೊಂದಿರುವ ಕಫ ಹೀಗೆ ಹಲವು ಲಕ್ಷಣಗಳ ಜೊತೆಗೆ 1,288 ಖಾಸಗಿ ಕ್ಷೇತ್ರದ ವೈದ್ಯರ ಬಳಿ ತೆರಳಿದರು. ಈ ಸಂದರ್ಭದಲ್ಲಿ ಈ ರೋಗಿಗಳನ್ನು ಪರೀಕ್ಷಿಸಿದ, ಅರ್ಹ ವೈದ್ಯರು, ಅನರ್ಹರು ಮತ್ತು ಸಾಂಪ್ರದಾಯಿಕ ಔಷಧ ಚಿಕಿತ್ಸೆಯನ್ನು ಅನುಸರಿಸುವ ಶೇ.65 ವೈದ್ಯರು ಭಾರತೀಯ ಮತ್ತು ಅಂತರ್‌ರಾಷ್ಟ್ರೀಯ ಸೇವಾ ಗುಣಮಟ್ಟಕ್ಕೆ ಸರಿಹೊಂದದ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಕೆಲವೊಂದು ಪ್ರಕರಣಗಳಲ್ಲಿ ಸಮಸ್ಯೆಯು ವಾಯುಮಾಲಿನ್ಯದ ಜೊತೆ ಸಂಬಂಧ ಹೊಂದಿದೆ ಎಂದು ಸಂಶಯಿಸಿದ ವೈದ್ಯರು ರೋಗಿಗೆ ರೋಗನಿರೋಧಕ ಔಷಧಿ ಮತ್ತು ಸಿರಪ್ ನೀಟಿ ಕೆಲವು ವಾರಗಳ ನಂತರ ವಾಪಸ್ ಭೇಟಿ ಮಾಡುವಂತೆ ಸೂಚಿಸಿದ್ದರು.

ವೈದ್ಯಕೀಯ ತರಬೇತಿ ಪಡೆದ ವೈದ್ಯರು, ಮುಖ್ಯವಾಗಿ ಮುಂಬೈಯಲ್ಲಿ ಅರ್ಧದಷ್ಟು ಮಾದರಿ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು ಒದಗಿಸುವ ಮೂಲಕ ಇತರರಿಗಿಂತ ಉತ್ತಮ ನಿರ್ವಹಣೆ ನೀಡಿದ್ದಾರೆ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ವೈದ್ಯ ತರಬೇತಿ ಪಡೆಯದ ವೈದ್ಯರು ಮತ್ತು ಆಯುಷ್ ಎಂದು ಕರೆಯಲ್ಪಡುವ ಆಯುರ್ವೇದ, ಯುನಾನಿ, ಸಿದ್ಧೌಷಧಿ ಇತ್ಯಾದಿಗಳನ್ನು ನೀಡುವ ಸಾಂಪ್ರದಾಯಿಕ ವೈದ್ಯರು ಅತ್ಯಂತ ಕೆಟ್ಟ ನಿರ್ವಹಣೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X