Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಪಿಸಿಎಲ್: ಎಲ್ಲೂರು ಗ್ರಾಪಂಗೆ 1.45...

ಯುಪಿಸಿಎಲ್: ಎಲ್ಲೂರು ಗ್ರಾಪಂಗೆ 1.45 ಕೋಟಿ ರೂ. ಅನುದಾನ

ವಾರ್ತಾಭಾರತಿವಾರ್ತಾಭಾರತಿ26 Sept 2018 8:39 PM IST
share
ಯುಪಿಸಿಎಲ್: ಎಲ್ಲೂರು ಗ್ರಾಪಂಗೆ 1.45 ಕೋಟಿ ರೂ. ಅನುದಾನ

ಪಡುಬಿದ್ರಿ, ಸೆ. 26: ಎಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಅದಾನಿ ಸಮೂಹದ ಯುಪಿಸಿಎಲ್ ಸಂಸ್ಥೆ, ಎಲ್ಲೂರು ಗ್ರಾಪಂಗೆ 2018-19ನೇ ವಾರ್ಷಿಕ ಸಾಲಿನಲ್ಲಿ ಸಿಎಸ್‌ಆರ್ ಅನುದಾನದಡಿ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲು 1.45 ಕೋಟಿ ರೂ.ಗಳ ಧೃಢೀಕರಣ ಪತ್ರವನ್ನು ಮಂಗಳವಾರ ಇಲ್ಲಿ ಹಸ್ತಾಂತರಿಸಿತು.

ಎಲ್ಲೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗ್ರಾಪಂ ಸದಸ್ಯರ ಉಪಸ್ಥಿತಿಯಲ್ಲಿ ಎಲ್ಲೂರು ಗ್ರಾಪಂ ಅಧ್ಯಕ್ಷೆ ವಸಂತಿ ಮಧ್ವರಾಜ್ ಅವರಿಗೆ ಯುಪಿಸಿಎಲ್ ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಕಿಶೋರ್ ಆಳ್ವ ಅವರು 2018-19ನೇ ವಾರ್ಷಿಕ ಸಾಲಿನ ಕ್ರಿಯಾಯೋಜನೆಯಲ್ಲಿ ನಮೂದಿಸಿರುವ ಅಭಿವೃದ್ಧಿ ಹೊಂದಬೇಕಾದ ವಿವಿಧ ಕಾಮಗಾರಿಗಳನ್ನು ಅದಾನಿ ಯುಪಿಸಿಎಲ್ ಸಿಎಸ್‌ಆರ್ ಅನುದಾನದಡಿಯಲ್ಲಿ ನಿರ್ವಹಿಸಲು ಒಪ್ಪಿಗೆ ಸೂಚಿಸುವ ಧೃಢೀಕರಣ ಪತ್ರವನ್ನು ಸಂಸ್ಥೆಯ ಪರವಾಗಿ ನೀಡಿದರು.

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಯುಪಿಸಿಎಲ್ 3 ವರ್ಷಗಳ ಅವಧಿಗೆ ಯೋಜನಾ ಪ್ರದೇಶದ ಸುತ್ತಮುತ್ತಲಿನ 7 ಗ್ರಾಪಂಗಳಿಗೆ ಒಟ್ಟು 22.73 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಸಿಎಸ್‌ಆರ್ ಯೋಜನೆಯಡಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಅನುದಾನವನ್ನು ಘೋಷಿಸಲಾಗಿದ್ದು, ಅದರಂತೆ ಎಲ್ಲೂರು ಗ್ರಾಪಂಗೆ ಈ ಅವಧಿಯಲ್ಲಿ ಒಟ್ಟು 3.75 ಕೋಟಿ ರೂ.ಗಳ ಅಭಿವೃದ್ಧಿ ಕೆಲಸಗಳನ್ನು ಅದಾನಿ ಸಂಸ್ಥೆಯ ಮೂಲಕ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

2016-17ನೇ ಸಾಲಿನಿಂದ ಈವರೆಗೆ ಘೋಷಿಸಿದ ಅನುದಾನದಡಿಯಲ್ಲಿ ಈಗಾಗಲೇ ಸುಮಾರು 1.88ಕೋಟಿ ರೂ. ವೆಚ್ಚದಲ್ಲಿ 10 ಅಭಿವೃದ್ಧಿ ಕಾಮಗಾರಿ ಗಳು ಪೂರ್ಣಗೊಂಡು ಗ್ರಾಮಸ್ಥರ ಉಪಯೋಗಕ್ಕೆ ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ 500 ಮೀ.ಉದ್ದದ ಪಣಿಯೂರು-ದುರ್ಗಾನಗರ ರಸ್ತೆ ಕಾಂಕ್ರೀಟೀಕರಣ, 2500 ಮೀ. ಉದ್ದದ ಎಲ್ಲೂರು-ಕೆಮ್ಮೆಂಡಲು ರಸ್ತೆ ಡಾಮರೀಕರಣ, 880 ಮೀ. ಉದ್ದದ ಕೆಂಜಾ -ಮುದರಂಗಡಿ ರಸ್ತೆ ಅಭಿವೃದ್ಧಿ, 250 ಮೀ. ಉದ್ದದ ವೀರಭದ್ರ ರಸ್ತೆ, 350 ಮೀ. ಉದ್ದದ ಕಂಚುಗರಕೇರಿ ರಸ್ತೆ, 400 ಮೀ. ಉದ್ದದ ಕುಂಜೂರು ದೇವಾಸ್ಥಾನ ರಸ್ತೆ, 790 ಮೀ. ಉದ್ದದ ಕೇಂಜಾ-ಮಾಣಿಯೂರು ರಸ್ತೆ ಕಾಂಕ್ರೀಟೀಕರಣ, 255 ಮೀ. ಉದ್ದದ ಬೆಳ್ಳಿಬೆಟ್ಟು-ಆಲಡೆ ರಸ್ತೆ ಅಭಿವೃದ್ಧಿ, ಮುದರಂಗಡಿ ಪೇಟೆಯಿಂದ ತಜೆ ಮಸೀದಿ ತನಕ ರಸ್ತೆಯ ವಿದ್ಯುದ್ದೀಕರಣ, ಅದಮಾರು ಪೇಟೆಯಿಂದ ಕುಂಜೂರು ಶ್ರೀ ದುರ್ಗಾ ದೇವಸ್ಥಾನ ತನಕ ರಸ್ತೆಯ ವಿದ್ಯುತ್ ಕಾಮಗಾರಿಗಳು ಒಳಗೊಂಡಿವೆ ಎಂದು ಆಳ್ವ ವಿವರಿಸಿದರು.

2018-19ನೇ ಸಾಲಿನ ಸಿಎಸ್‌ಆರ್ ಕ್ರಿಯಾಯೋಜನೆ ಪತ್ರವನ್ನು ಆದಷ್ಟು ಬೇಗನೆ ನೀಡಬೇಕೆಂದು ಗ್ರಾಪಂಗೆ ಮನವಿ ಮಾಡಿದ ಆಳ್ವ, ಇದರಲ್ಲಿ ಸೇರಿರುವ 1.45 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಸಂಸ್ಥೆ ಅತೀ ಶೀಘ್ರವೇ ಕೈಗೆತ್ತಿ ಕೊಂಡು ಡಿಸೆಂಬರ್ ತಿಂಗಳ ಒಳಗೆ ಕಾಮಗಾರಿಗಳನ್ನು ಪೂರ್ಣ ಗೊಳಿಸ ಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ವಸಂತಿ ಮಧ್ವರಾಜ್ ಮಾತನಾಡಿ, ಯುಪಿಸಿಎಲ್ ಸಂಸ್ಥೆಗೆ ಗ್ರಾಪಂ ಪರವಾಗಿ ಅಭಿನಂದನೆ ಸಲ್ಲಿಸಿದರು. ಎಲ್ಲೂರು ಗ್ರಾಪಂ ಸದಸ್ಯ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಮತಾ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಚಂದ್ರಶೇಖರ, ಜಿಪಂ ಸದಸ್ಯೆ ಶಿಲ್ಪಜಿ. ಸುವರ್ಣ, ತಾಪಂ ಸದಸ್ಯ ಕೇಶವ ಮೊಯ್ಲಿ, ಪಂಚಾಯತ್ ಸದಸ್ಯರಾದ ಸದಾಶಿವ ಶೆಟ್ಟಿ, ರವಿರಾಜ ರಾವ್, ವಿಮಲಾ ದೇವಾಡಿಗ, ರಾಜೇಂದ್ರ, ಪೂರ್ಣಿಮಾ ಪ್ರಸಾದ್, ರಹೀಮ್ ಕುಂಜೂರು, ಲೀಲಾ ದೇವಾಡಿಗ, ಮೋಹನ ಆಚಾರ್ಯ, ವಸಂತಿ, ವಾಣಿ, ಪುಷ್ಪಾ, ಯುಪಿಸಿಎಲ್ ಸಂಸ್ಥೆಯ ಅಧಿಕಾರಿಗಳಾದ ಗಿರೀಶ್ ನಾವಡ, ರವಿ ಆರ್ ಜೇರೆ, ವಿನೀತ್ ಆಂಚನ್, ಸುಖೇಶ್ ಸುವರ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X