Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲ್ಯ ವಿವಾಹ: ಮುದ್ರಣ ಸಂಸ್ಥೆಗಳಿಗೆ...

ಬಾಲ್ಯ ವಿವಾಹ: ಮುದ್ರಣ ಸಂಸ್ಥೆಗಳಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Sept 2018 8:08 PM IST
share

ಉಡುಪಿ, ಸೆ. 26: ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಂತೆ 18 ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಯಾವುದೇ ಗಂಡು ಮಕ್ಕಳಿಗೆ ಮದುವೆಯಾದಲ್ಲಿ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುವುದು. ಈ ಕಾಯ್ದೆಯ ಪ್ರಕಾರ ಬಾಲ್ಯ ವಿವಾಹ ಆದಲ್ಲಿ ಕೇವಲ ಹುಡುಗ, ಹುಡುಗಿಯ ತಂದೆ ತಾಯಿ ಅಲ್ಲದೇ ಪೂಜಾರಿಗಳು, ಸಂಬಂಧಿಕರು ಪ್ರೇರೇಪಿಸಿದವರು, ಉತ್ತೇಜನ ನೀಡಿದವರು, ಬಾಲ್ಯ ವಿವಾಹ ತಡೆಯಲು ವಿಫಲರಾದವರು ಮತ್ತು ಬಾಗವಹಿಸಿದವರು ಎಲ್ಲರೂ ಅಪರಾಧಿಗಳೇ ಆಗುತ್ತಾರೆ.

ಅದರಂತೆ ಅವರ ಮೇಲೆ ಪ್ರಕರಣ ದಾಖಲಿಸಲು ಅವಕಾಶವಿದ್ದು, ಬಾಲ್ಯ ವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಪ್ರಕಾರ ತಪ್ಪಿತಸ್ಥರು ಕನಿಷ್ಟ ಒಂದು ವರ್ಷದಿಂದ ಗರಿಷ್ಟ 2 ವರ್ಷಗಳವರೆಗೆ ಕಾರಾಗೃಹವಾಸ ಮತ್ತು ಒಂದು ಲಕ್ಷ ರೂ.ವರೆಗೆ ದಂಡ ಶಿಕ್ಷೆಗೆ ಗುರಿಯಾಗುವರು.

ಗ್ರಾಹಕರು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಬಂದಾಗ ಮುದ್ರಣ ಕಾರರು ಕಡ್ಡಾಯವಾಗಿ ವಧು ಮತ್ತು ವರರ ವಯಸ್ಸಿನ ದೃಢೀಕರಣ ಪತ್ರವನ್ನು ಕುಟುಂಬದವರಿಂದ ಪಡೆದು ಹುಡುಗನಿಗೆ 21 ವರ್ಷ, ಹುಡುಗಿಗೆ 18 ವರ್ಷ ಪೂರ್ಣವಾಗಿದೆ ಎಂದು ಖಾತ್ರಿ ಪಡಿಸಿದ ನಂತರವಷ್ಟೇ ಮದುವೆ ಲಗ್ನ ಪತ್ರ ಮುದ್ರಿಸಿಕೊಡಲು ಸೂಚಿಸಲಾಗಿದೆ.

ಒಂದು ವೇಳೆ ಮುದ್ರಿಸಿದ ಲಗ್ನಪತ್ರಿಕೆಯ ಮದುವೆಯ ನಂತರ ಬಾಲ್ಯ ವಿವಾಹವೆಂದು ಕಂಡುಬಂದಲ್ಲಿ ಕಾನೂನು ಪ್ರಕಾರ ಮುದ್ರಣಕಾರರನ್ನು ತಪ್ಪಿತಸ್ಥ ರೆಂದು ಪರಿಗಣಿಸಲು ಕಾನೂನಿನಲ್ಲಿ ಅವಕಾಶವಿದೆ. ವಧು-ವರರ ವಯಸ್ಸಿನ ದೃಢೀಕರಣ ಪತ್ರಗಳನ್ನು ಪರಿಗಣಿಸುವಾಗ ಜನನ ಪ್ರಮಾಣ ಪತ್ರ, ಶಾಲಾ ವಯಸ್ಸಿನ ದೃಢೀಕರಣ ಪತ್ರ, ಎಸೆಸೆಲ್ಸಿ ಅಂಕಪಟ್ಟಿ ಅಥವಾ ಸರಕಾರಿ ವೈದ್ಯರು ರೇಡಿಯೋಲಜಿ ಪರೀಕ್ಷೆ ನಡೆಸಿ ನೀಡಿದ ದೃಢೀಕರಿಸಿದ ವಯಸ್ಸಿನ ಪ್ರಮಾಣ ಪತ್ರಗಳು ಮಾತ್ರ ಮದುವೆಗೆ ಅರ್ಹವಾಗಿರುತ್ತವೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಮುದ್ರಣಕಾರರು ಮತ್ತು ಡಿಟಿಪಿ ಕೇಂದ್ರದವರು ಆಮಂತ್ರಣ ಪತ್ರಿಕೆ ಮುದ್ರಿಸುವಾಗ ವಯಸ್ಸನ್ನು ಖಾತ್ರಿ ಪಡಿಸಿಕೊಂಡ ನಂತರವೇ ಮುದ್ರಿಸುವ ಮೂಲಕ ಬಾಲ್ಯವಿವಾಹವನ್ನು ತಡೆಗಟ್ಟಲು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ತಮ್ಮಲ್ಲಿಗೆ ಬರುವ ಎಲ್ಲಾ ಗ್ರಾಹಕರಿಗೂ ಜಾಗೃತಿ ಮೂಡಿಸಿ, ಅವರಿಂದ ವಯಸ್ಸಿನ ದೃಢೀಕರಣ ಪತ್ರ ಪಡೆದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಅದರ ದಾಖಲೆಗಳನ್ನು ಇರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿಯ ಅ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X