Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರದೊಳಗೆ ಆದೇಶ ಪಾಲನೆ:...

ವಾರದೊಳಗೆ ಆದೇಶ ಪಾಲನೆ: ಅನುಷ್ಠಾನಾಧಿಕಾರಿಯ ನೇಮಕ

ಹಿರಿಯ ನಾಗರಿಕರ ರಕ್ಷಣೆಗೆ ಉಡುಪಿ ಜಿಲ್ಲಾಡಳಿತದಿಂದ ಕ್ರಮ

ವಾರ್ತಾಭಾರತಿವಾರ್ತಾಭಾರತಿ28 Sept 2018 5:49 PM IST
share

ಉಡುಪಿ, ಸೆ. 28: ಹಿರಿಯ ನಾಗರಿಕರ ನ್ಯಾಯ ಮಂಡಳಿಯಿಂದ ಆದೇಶ ಪಡೆದ ಒಂದು ವಾರದೊಳಗಾಗಿ ಆದೇಶದ ಪಾಲನೆಯಾಗಬೇಕೆಂದು ಉಡುಪಿ ಜಿಲ್ಲಾಡಳಿತ ಸ್ಪಷ್ಟ ನಿರ್ದೇಶನ ನೀಡಿದ್ದು, ಇದರ ಅನುಷ್ಠಾನಕ್ಕಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ನಿರಂಜನ್ ಭಟ್ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಮಾನವಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನುಬಾಗ್ ಈ ವಿಚಾರ ತಿಳಿಸಿದರು. ಆದೇಶ ಪಡೆದ ಎರಡೆ ದಿನಗಳೊಳಗೆ ಖಾತಾ ಬದಲಾವಣೆ ಮಾಡಿಕೊಡುವುದಾಗಿ ನಗರ ಸಭೆ ಹಾಗೂ ಗ್ರಾಪಂ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಈ ಮೂಲಕ ಉಡುಪಿ ಜಿಲ್ಲಾಡಳಿತವು ಇಡೀ ರಾಜ್ಯಕ್ಕೆ ಮಾದರಿಯಾಗುವಂತಹ ಕಾರ್ಯವಿಧಾನವನ್ನು ರೂಪಿಸಿ ಅನ್ಯಾಯಕ್ಕೊಳಗಾಗಿರುವ ಹಿರಿಯ ನಾಗರಿಕರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದೆ ಎಂದರು.

ಆಸ್ತಿ ಲಪಾಟಿಸುವ ಮೂಲಕ ಮಕ್ಕಳಿಂದ ವಂಚನೆಗೆ ಒಳಗಾದ ಉಡುಪಿ ಜಿಲ್ಲೆಯ ಕಿರ್ಕಾಲು ಗ್ರಾಮದ ಫ್ಲೋರಿನ್ ಕ್ಯಾಸ್ತಲಿನೋ(74) ಹಾಗೂ ಉಡುಪಿ ತಾಲೂಕಿನ ಕೆಂಜೂರು ಗ್ರಾಮದ ರಾಜೀವಿ ಶೆಡ್ತಿ ಎಂಬವರು ಹಿರಿಯ ನಾಗರಿಕರ ನ್ಯಾಯ ನಿರ್ವಹಣಾ ಮಂಡಳಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ನ್ಯಾಯಮಂಡಳಿಯು ಮೇ ತಿಂಗಳಲ್ಲಿ ಜಮೀನು ಹಾಗೂ ಮನೆ ವರ್ಗಾವಣೆಯ ವ್ಯವಸ್ಥಾಪತ್ರವನ್ನು ರದ್ದುಗೊಳಿಸಿ ಈ ಕುರಿತು ನೊಂದಣಿ ದಾಖಲೆಗಳಲ್ಲಿ ಸೂಕ್ತ ತಿ್ದುಪಡಿ ಮಾಡುವಂತೆ ಆದೇಶಿಸಿತ್ತು.

ಈ ಎರಡೂ ಪ್ರಕರಣಗಳಲ್ಲಿ ನ್ಯಾಯಮಂಡಳಿಯ ಆದೇಶ ಪಾಲನೆಯಾಗ ದಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಸೆ.18 ರಂದು ಜಿಲ್ಲಾಧಿಕಾರಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಇನ್ನು ಮುಂದೆ ಆದೇಶ ಪಡೆದ ಒಂದು ವಾರದೊಳಗಾಗಿ ಆದೇಶದ ಪಾಲನೆಯಾಗಬೇಕೆಂದು ಜಿಲ್ಲಾಧಿ ಕಾರಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಆದೇಶದ ಬಳಿಕ ಹಿರಿಯ ನಾಗರಿಕರು ದಾಸ್ತಾವೇಜು ರದ್ದತಿಗಾಗಿ ಹಲವು ಬಾರಿ ಕಚೇರಿಗಳಿಗೆ ಅಲೆದಾಡುವ ವಿಚಾರವನ್ನು ಗಮನಿಸಿದ ಜಿಲ್ಲಾಧಿಕಾರಿ, ಅದಕ್ಕಾಗಿ ಅನುಷ್ಠಾನಾಧಿಕಾರಿಯನ್ನು ನೇಮಕ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜೀವಿ ಶೆಡ್ತಿಯ ಪತಿ ಸಂಜೀವ ಶೆಟ್ಟಿ ಹಾಜರಿದ್ದರು.

ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ

ಉಡುಪಿ ಜಿಲ್ಲಾಧಿಕಾರಿ ನ್ಯಾಯ ಮಂಡಳಿಯ ಆದೇಶ ಅನುಷ್ಠಾನಕ್ಕಾಗಿ ಅಧಿಕಾರಿಯನ್ನು ನೇಮಕ ಮಾಡಿರುವುದರಿಂದ ಇನ್ನು ಮುಂದೆ ಆದೇಶ ಪಡೆದ ಹಿರಿಯ ನಾಗರಿಕರು ಕಚೇರಿಯಿಂದ ಕಚೇರಿಗೆ ಅಲೆದಾಡುವ ಅಗತ್ಯವೇ ಇರು ವುದಿಲ್ಲ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನುಬಾಗ್ ತಿಳಿಸಿದ್ದಾರೆ.

ನ್ಯಾಯಮಂಡಳಿ ಆದೇಶ ನೀಡಿದ ಕೂಡಲೇ ನೇರವಾಗಿ ಅನುಷ್ಠಾನಾಧಿಕಾರಿ ಯನ್ನು ಸಂಪರ್ಕಿಸಿದರೆ, ಅವರು ಪೊಲೀಸ್ ಇಲಾಖೆ, ಸಬ್‌ರಿಜಿಸ್ಟ್ರಾರ್ ಕಛೇರಿ, ಕಂದಾಯ ಇಲಾಖೆ, ನಗರಸಭೆ ಮುಂತಾದ ಅಧಿಕಾರಿಗಳನ್ನು ಸಂಪರ್ಕಿಸಿ ಆದೇಶದ ಅನುಷ್ಠಾನಕ್ಕೆ ಸಹಕರಿಸಲಿದ್ದಾರೆ. ಜಿಲ್ಲಾಡಳಿತದ ನೀರ್ದೇಶದಂತೆ ವಾರದೊಳಗೆ ಸಬ್‌ರಿಜಿಸ್ಟ್ರಾರ್ ನೋಂದಣಿ ದಾಖಲಾತಿಗಳನ್ನು ರದ್ದುಪಡಿಸಿ, ಪೋಲಿಸ್, ನಗರಸಭೆ ಅಥವಾ ಗ್ರಾಪಂ ಅಧಿಕಾರಿಗಳು ಮೂರು ದಿನಗಳೊಳಗೆ ಆದೇಶವನ್ನು ಅನುಷ್ಠಾನಗೊಳಿಸಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಕೂಡಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನುಸರಿಸಬೇಕೆಂದು ಪ್ರತಿಷ್ಠಾನವು ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಈಗಾಗಲೇ ಆಗ್ರಹ ಪತ್ರಗಳನ್ನು ಸಲ್ಲಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X