Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ-ಭದ್ರಾವತಿಯಲ್ಲಿ ಗುಡುಗು ಸಹಿತ...

ಶಿವಮೊಗ್ಗ-ಭದ್ರಾವತಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ರಸ್ತೆಗಳ ಮೇಲೆ ಉರುಳಿಬಿದ್ದ ಮರಗಳು

ವಾರ್ತಾಭಾರತಿವಾರ್ತಾಭಾರತಿ28 Sept 2018 6:19 PM IST
share
ಶಿವಮೊಗ್ಗ-ಭದ್ರಾವತಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಶಿವಮೊಗ್ಗ, ಸೆ. 28: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಜಿಲ್ಲೆಯಲ್ಲಿ ಮಳೆಯಾಗಲಾರಂಭಿಸಿದೆ. ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ವರ್ಷಧಾರೆಯಾಗಿದೆ. ಎರಡೂ ನಗರಗಳ ಹಲವೆಡೆ ಮರಗಳು ಉರುಳಿಬಿದ್ದು, ಜನ-ವಾಹನ ಸಂಚಾರಕ್ಕೆ ಅಡ್ಡಿಯಾದ ವರದಿಗಳು ಬಂದಿವೆ. 

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ಅತ್ಯಧಿಕ 22.8 ಮಿಲಿ ಮೀಟರ್ (ಮಿ.ಮೀ.) ಮಳೆಯಾಗಿದೆ. ಉಳಿದಂತೆ ಭದ್ರಾವತಿಯಲ್ಲಿ 21.8 ಮಿ.ಮೀ., ತೀರ್ಥಹಳ್ಳಿಯಲ್ಲಿ 11.8 ಮಿ.ಮೀ., ಸಾಗರ 9.2 ಮಿ.ಮೀ., ಶಿಕಾರಿಪುರ 14.8 ಮಿ.ಮೀ., ಸೊರಬ 6.2 ಮಿ.ಮೀ., ಹೊಸನಗರ 4.4 ಮಿ.ಮೀ. ವರ್ಷಧಾರೆಯಾಗಿದೆ. 

ಅಬ್ಬರ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ಗುರುವಾರ ಸಂಜೆಯಿಂದಲೇ ಮಳೆಯಾಗಲಾರಂಭಿಸಿದೆ. ಶುಕ್ರವಾರ ಕೂಡ ಎರಡೂ ನಗರಗಳ ಹಲವೆಡೆ ಉತ್ತಮ ಮಳೆಯಾಯಿತು. ಧಾರಾಕಾರ ವರ್ಷಧಾರೆಯಿಂದ ರಸ್ತೆಗಳ ಮೇಲೆಯೇ ಮಳೆ ನೀರು ಹರಿಯಿತು. ಗುಂಡಿ-ಗೊಟರುಗಳಲ್ಲಿ ಮಳೆ ನೀರು ತುಂಬಿದ ಪರಿಣಾಮ, ವಾಹನ ಸವಾರರು ತೀವ್ರ ತೊಂದರೆ ಎದುರಿಸುವಂತಾಯಿತು. 

ಶಿವಮೊಗ್ಗ ನಗರದ ಆಲ್ಕೋಳದ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲೆಯೇ ಬೃಹದಾಕಾರದ ನೀಲಗಿರಿ ಮರವೊಂದು ಉರುಳಿಬಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಭದ್ರಾವತಿ ಪಟ್ಟಣದ ವಿಐಎಸ್‍ಎಲ್ ಪಾಲಿಟೆಕ್ನಿಕ್ ಬಳಿ ಮರ ಉರುಳಿಬಿದ್ದು, ಸುಮಾರು ಎರಡಕ್ಕೂ ಹೆಚ್ಚು ದ್ವಿ ಚಕ್ರ ವಾಹನಗಳು ಜಖಂಗೊಂಡಿರುವ ಮಾಹಿತಿಗಳು ಬಂದಿವೆ. 

ತಣ್ಣನೆ ವಾತಾವರಣ: ಶಿವಮೊಗ್ಗ ನಗರದಲ್ಲಿ ಕಳೆದ ಹಲವು ದಿನಗಳಿಂದ ಮಳೆ ಮಾಯವಾಗಿತ್ತು. ಬಿಸಿಲ ಬೇಗೆ ಹೆಚ್ಚಿತ್ತು. ತಾಪಮಾನದ ಪ್ರಮಾಣ 35 ಡಿಗ್ರಿ ಆಸುಪಾಸಿನಲ್ಲಿ ದಾಖಲಾಗುತ್ತಿತ್ತು. ಸುಡು ಬಿಸಿಲು ಅಕ್ಷರಶಃ ನಾಗರಿಕರ ನೆತ್ತಿ ಸುಡುತ್ತಿತ್ತು. ಕಳೆದೆರೆಡು ಎರಡ್ಮೂರು ದಿನಗಳಿಂದ ಬೀಳುತ್ತಿರುವ ಮಳೆಯಿಂದ ತಂಪನೆಯ ವಾತಾವರಣ ಮನೆ ಮಾಡಿದ್ದು, ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. 

ತೊಂದರೆ: ಪ್ರಸ್ತುತ ಬೀಳುತ್ತಿರುವ ಮಳೆಯು ಕೆಲ ರೈತರಿಗೆ ಅನುಕೂಲ ಕಲ್ಪಿಸಿದ್ದರೆ, ಮತ್ತೆ ಕೆಲ ರೈತರಿಗೆ ಅನಾನುಕೂಲವಾಗಿ ಪರಿಣಮಿಸಿದೆ. ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಕಡಿಮೆಯಾಗಿ, ಬಿಸಿಲು ಬೀಳಲಾರಂಭಿಸಿತ್ತು. ಇದರಿಂದ ವಾತಾವರಣದಲ್ಲಿ ತೇವಾಂಡ ಕಡಿಮೆಯಾಗಿ, ಕೆಲ ಬೆಳೆಗಳು ಒಣಗಲಾರಂಭಿಸಿದ್ದವು. ಇದು ರೈತ ಸಮುದಾಯದಲ್ಲಿ ಆತಂಕ ಸೃಷ್ಟಿಸಿತ್ತು. 

ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ವಿಶೇಷವಾಗಿ ಬತ್ತ ಹಾಗೂ ತೋಟದ ಬೆಳೆಗಳಿಗೆ ಮಳೆ ಸಹಕಾರಿಯಾಗಿದೆ. ಮತ್ತೊಂದೆಡೆ ಈಗಾಗಲೇ ಕಟಾವಿಗೆ ಬಂದಿರುವ ಮೆಕ್ಕೆಜೋಳಕ್ಕೆ ತೊಂದರೆಯಾಗಿ ಪರಿಣಮಿಸಿದೆ. ಮಳೆಯಿಂದ ಕೊಯ್ಲಿಗೆ ಬಂದಿರುವ ಮೆಕ್ಕೆಜೋಳದ ತೆನೆಗಳು ನೆನೆಯುವಂತಾಗಿದೆ ಎಂದು ರೈತರು ಹೇಳುತ್ತಾರೆ. 

ವಿದ್ಯುತ್ ವ್ಯತ್ಯಯ
ಭದ್ರಾವತಿ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಧಾರಾಕಾರ ವರ್ಷಧಾರೆಯಾಯಿತು. ಇದರಿಂದ ವಿವಿಧೆಡೆ ಮರ ಹಾಗೂ ಮರದ ರಂಬೆ-ಕೊಂಬೆಗಳು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ಪಟ್ಟಣದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮೆಸ್ಕಾಂ ಸಿಬ್ಬಂದಿಗಳು, ವಿದ್ಯುತ್ ತಂತಿಗಳ ಮೇಲೆ ಬಿದ್ದ ಮರ ಹಾಗೂ ರಂಬೆಕೊಂಬೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತಲ್ಲೀನವಾಗಿದ್ದುದು ಕಂಡುಬಂದಿತು. 

ಸಿಡಿಲ ಅಬ್ಬರ
ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಗುಡುಗು-ಮಿಂಚಿನ ಆರ್ಭಟ ಜೋರಾಗಿದೆ. ಭದ್ರಾವತಿಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಗುಡುಗು ಸಹಿತ ಬಿದ್ದ ಮಳೆಯು, ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿತ್ತು. ಹಾಗೆಯೇ ಸಿಡಿಲಿನ ಆರ್ಭಟವು ನಾಗರಿಕರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X