Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲೆಗಾರ ಹೇಳಿಕೆ: ಎನ್‌ಕೌಂಟರ್...

ಕೊಲೆಗಾರ ಹೇಳಿಕೆ: ಎನ್‌ಕೌಂಟರ್ ಪ್ರಕರಣದಿಂದ ನ್ಯಾಯಾಧೀಶರು ಹಿಂದಕ್ಕೆ ಸರಿಯಲು ಕೇಂದ್ರ ಮನವಿ

ವಾರ್ತಾಭಾರತಿವಾರ್ತಾಭಾರತಿ28 Sept 2018 10:26 PM IST
share

ಹೊಸದಿಲ್ಲಿ, ಸೆ.28: ನ್ಯಾಯಪೀಠದ ಸದಸ್ಯರಾಗಿರುವ ನ್ಯಾಯಾಧೀಶರೊಬ್ಬರು ಭದ್ರತಾ ಪಡೆಯ ಕೆಲವು ಸಿಬ್ಬಂದಿಯನ್ನು ಕೊಲೆಗಾರರು ಎಂದು ಸಂಬೋಧಿಸಿರುವ ಹಿನ್ನೆಲೆಯಲ್ಲಿ ಮಣಿಪುರ ಎನ್‌ಕೌಂಟರ್ ಪ್ರಕರಣದಿಂದ ಹಿಂದಕ್ಕೆ ಸರಿಯುವಂತೆ ಕೇಂದ್ರ ಸರಕಾರ ಪೀಠಕ್ಕೆ ಮನವಿ ಮಾಡಿದೆ.

2000ದಿಂದ 2012ರ ಮಧ್ಯೆ ಈಶಾನ್ಯ ರಾಜ್ಯದಲ್ಲಿ 350 ಭದ್ರತಾ ಸಿಬ್ಬಂದಿ ನಡೆಸಿದ್ದಾರೆ ಎಂದು ಆರೋಪಿಸಲಾಗಿರುವ 1,528 ನಕಲಿ ಎನ್‌ಕೌಂಟರ್‌ಗಳ ವಿರುದ್ಧ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆ ನಡೆಸುತ್ತಿರುವ ಪೀಠದಲ್ಲಿ ನ್ಯಾಯಾಧೀಶ ಮದನ್ ಬಿ.ಲೊಕುರ್ ಮತ್ತು ಯು.ಯು.ಲಲಿತ್ ಸದಸ್ಯರಾಗಿದ್ದಾರೆ. ಈ ಕುರಿತು ಜುಲೈ 31ರಂದು ನಡೆದ ವಿಚಾರಣೆಯ ವೇಳೆ ನ್ಯಾಯಾಧೀಶ ಲೊಕುರ್ ಸಿಬಿಐಯನ್ನು ಉದ್ದೇಶಿಸಿ, ನಿಮ್ಮ ಪ್ರಕಾರ ಈ ಪ್ರಕರಣಗಳಲ್ಲಿ 14 ಕೊಲೆಗಾರರಿದ್ದಾರೆ ಮತ್ತು ಅವರು ಮಣಿಪುರದಲ್ಲಿ ಮುಕ್ತವಾಗಿ ನಡೆದಾಡುತ್ತಿದ್ದಾರೆ. ನೀವು ಯಾವೊಬ್ಬನನ್ನೂ ಬಂಧಿಸಿಲ್ಲ. ಸಮಾಜದ ಗತಿಯೇನು? ಯಾರಾದರೂ ಅತ್ಯಾಚಾರ ಮಾಡಿದರೆ, ಅಲ್ಲಿ ವಶಪಡಿಸಿಕೊಳ್ಳುವಂಥದ್ದೇನಿದೆ? ಹಾಗಾದರೆ ನೀವು ಆತನನ್ನು ಮುಕ್ತವಾಗಿ ಅಲೆದಾಡಲು ಬಿಡುತ್ತೀರಾ? ಎಂದು ಖಾರವಾಗಿ ನುಡಿದಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಭದ್ರತಾ ಪಡೆ ಸಿಬ್ಬಂದಿ ಸಲ್ಲಿಸಿರುವ ಅರ್ಜಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಹೇಳುತ್ತಾ, ತಮ್ಮನ್ನು ಅತ್ಯಾಚಾರಿಗಳಿಗೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಪ್ರಕರಣದ ನ್ಯಾಯಸಮ್ಮತ ವಿಚಾರಣೆ ನಡೆಯಲು ಅನುವು ಮಾಡಲು ಈ ಪ್ರಕರಣದಿಂದ ಹಿಂದಕ್ಕೆ ಸರಿಯುವಂತೆ ನ್ಯಾಯಾಧೀಶರಿಗೆ ತಿಳಿಸಿದ್ದರು. ಈ ಕುರಿತು ನ್ಯಾಯಾಲಯದಲ್ಲಿ ವಾದ ಮಂಡಿಸಿರುವ ಅಟರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಈ ಹೇಳಿಕೆಯು ಸಶಸ್ತ್ರಪಡೆಗಳ ನೈತಿಕ ಸ್ಥೈರ್ಯಕ್ಕೆ ಧಕ್ಕೆ ತಂದಿದೆ ಎಂದು ತಿಳಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಬಂಡುಕೋರರಿಗಿಂತ ಹೆಚ್ಚು ಭದ್ರತಾ ಸಿಬ್ಬಂದಿ ಸಾವನ್ನಪ್ಪುತ್ತಾರೆ.

ಹಾಗಾಗಿ ಅವರ ಮನಸ್ಸಿನಲ್ಲಿ ಭಯವಿದೆ. ನ್ಯಾಯಾಲಯಗಳೂ ತಪ್ಪು ಮಾಡುತ್ತವೆ ಎಂದು ಅಟರ್ನಿ ಜನರಲ್ ತಿಳಿಸಿದ್ದಾರೆ. ಈ ಹೇಳಿಕೆಯು ಯಾವುದೇ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ದೋಷಾರೋಪ ಪಟ್ಟಿಯ ವಿಷಯದಲ್ಲಿ ಸಿಬಿಐ ನಿರ್ದೇಶಕರಿಗೆ ಸ್ಪಂದನೆಯಾಗಿತ್ತು ಅಷ್ಟೇ ಎಂದು ನ್ಯಾಯಪೀಠ ಸ್ಪಷ್ಟೀಕರಣ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X