Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇ-ಫಾರ್ಮಸಿ ವಿರೋಧಿಸಿ ಔಷಧಿ ಅಂಗಡಿಗಳ...

ಇ-ಫಾರ್ಮಸಿ ವಿರೋಧಿಸಿ ಔಷಧಿ ಅಂಗಡಿಗಳ ಬಂದ್ ಕರೆ: ದಾವಣಗೆರೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ28 Sept 2018 11:04 PM IST
share
ಇ-ಫಾರ್ಮಸಿ ವಿರೋಧಿಸಿ ಔಷಧಿ ಅಂಗಡಿಗಳ ಬಂದ್ ಕರೆ: ದಾವಣಗೆರೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ

ದಾವಣಗೆರೆ,ಸೆ.28: ಆನ್‍ಲೈನ್ ಮೂಲಕ ಔಷಧ ವ್ಯಾಪಾರ ಕೈಬಿಡುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ಔಷಧಿ ಅಂಗಡಿಗಳು, ಔಷಧಿ ಸಗಟು ಮತ್ತು ಚಿಲ್ಲರೆ ವ್ಯಾಪಾರಸ್ಥರು ನಗರ, ಜಿಲ್ಲಾದ್ಯಂತ ಔಷಧಿ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟಿಸಿದರು.

ನಗರದ ಡಿಸಿ ಕಚೇರಿಗೆ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ನಿಯೋಗವು ತೆರಳಿ, ಇ-ಫಾರ್ಮಸಿ ಮುಂಬರುವ ದಿನಗಳಲ್ಲಿ ಅಪಾಯ, ಸಂಕಷ್ಟ, ದುಷ್ಪರಿಣಾಮಗಳನ್ನು ತಂದೊಡ್ಡುವ ಹಿನ್ನೆಲೆಯಲ್ಲಿ ಇಂತಹ ಮಾರಕ ಮಹಾಮಾರಿಯನ್ನು ಅಪಾಯಗಳು ಆರಂಭವಾಗುವ ಮುನ್ನವೇ ಕೇಂದ್ರ ಸರ್ಕಾರ ಹಿಂಪಡೆಯಲೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಮುಖಾಂತರ ಕೇಂದ್ರಕ್ಕೆ ಮನವಿ ಅರ್ಪಿಸಿದರು. 

ಇದೇ ವೇಳೆ ಮಾತನಾಡಿದ ಸಂಘದ ಜಿಲ್ಲಾ ಗೌರವ ಕಾರ್ಯದರ್ಶಿ ಎನ್.ಪಿ.ಪ್ರಸನ್ನಕುಮಾರ, ಇ-ಫಾರ್ಮಸಿ ಎಂಬ ವಿತರಣಾ ವ್ಯವಸ್ಥೆಯನ್ನು ದೇಶಾದ್ಯಂತ ತರಾತುರಿಯಲ್ಲಿ ಜಾರಿಗೊಳಿಸಲು ಕೇಂದ್ರ ಮುಂದಾಗಿದ್ದು, ಕಾನೂನಾತ್ಮಕವಲ್ಲದ ರೀತಿಯಲ್ಲಿ ಇ-ಫಾರ್ಮಸಿ ಯೋಜನೆ ಜಾರಿಗೊಳಿಸುವ ಮೂಲಕ ಸರ್ಕಾಕರವು ಗ್ರಾಹಕರ ಹಿತಾಸಕ್ತಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಔಷಧಿ ಗ್ರಾಹಕರ ಹಿತದೃಷ್ಟಿಯಿಂದ ಇ-ಫಾರ್ಮಸಿ ಎಂಬ ಕೇಂದ್ರ ಸರ್ಕಾರದ ಹೊಸ ನೀತಿ ವಿರುದ್ಧ ಗ್ರಾಹಕರಿಗೆ ವಾಸ್ತವಾಂಶ ತಿಳಿಸಬೇಕಾದ ಮಹತ್ವದ ಹೊಣೆಗಾರಿಕೆ ಔಷಧಿ ವಾಪಾರಸ್ಥರಾಗಿ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯ ಮೇರೆಗೆ ನಗರ, ಜಿಲ್ಲಾದ್ಯಂತ ಔಷಧಿ ಅಂಗಡಿ ಗಳನ್ನು ಬಂದ್ ಮಾಡುವ ಮೂಲಕ ಕೇಂದ್ರದ ಗಮನ ಸೆಳೆಯುತ್ತಿದ್ದೇವೆ ಎಂದು ಅವರು ತಿಳಿಸಿದರು. 

ಇ-ಫಾರ್ಮಸಿ ಎಂಬುದು ಔಷಧಿ ಅಂಗಡಿಯಲ್ಲ. ಇ-ಫಾರ್ಮಸಿಗೆ ಕಂಪ್ಯೂಟರ್ ಇರುವ, ಓದಲು-ಬರೆಯಲು ಬಾರದ, ಅಂಗಡಿ, ಮುಗ್ಗಟ್ಟು ಇಲ್ಲದೇ, ಔಷಧಿಯ ಅರಿವೇ ಇಲ್ಲದೇ, ಹಣದ ವಹಿವಾಟಿನ ಆಸರೆಯೂ ಇಲ್ಲದೇ, ವಿಳಾಸ ಕೊಟ್ಟು, 50 ಸಾವಿರ ಸಂದಾಯ ಮಾಡಿದರೆ ಕೊರಿಯರ್ ನಂತೆ ಔಷಧಿಗಳ ಪ್ರಾಥಮಿಕ ಜ್ಞಾನವೂ ಇಲ್ಲದಂತಹ ವ್ಯಕ್ತಿಗಳು ಕಳಿಸುತ್ತಾರೆ. ಇದರಿಂದ ಅನುಕೂಲಕ್ಕಿಂತ ಅಪಾಯ, ಅನಾಹುತಗಳೇ ಹೆಚ್ಚು ಎಂದು ಅವರು ಹೇಳಿದರು. 

ವೈದ್ಯರ ಔಷಧಿ ಚೀಟಿಯನ್ನು ಇ-ಫಾರ್ಮಸಿ ಪೋರ್ಟಲ್‍ನಲ್ಲಿ ತುಂಬಬೇಕು. ತಮಗೆ ತಲಪಬಹುದಾದ ಔಷಧವು ತಮಗೆ ವೈದ್ಯರ ಸಲಹೆಯಂತೆ ದೊರೆಯುವ ಖಾತ್ರಿ ಅಥವಾ ಗುಣಮಟ್ಟ ಔಷಧಿ ಹೌದೋ ಅಲ್ಲವೋ ಎಂಬ ಬಗ್ಗೆ ಯಾವುದೊಂದು ಪ್ರಕ್ರಿಯೆ ನಡೆಯುವುದಿಲ್ಲ. ಕಾನೂನಾತ್ಮಕವಾಗಿ -ಫಾರ್ಮಸಿಸ್ಟ್ ಕೊನೆಯಲ್ಲಿ ಔಷಧವನ್ನು ಸ್ವಹಸ್ತದಿಂದ ತಲುಪಿಸಬೇಕೇ ವಿನಾ ಇ-ಫಾರ್ಮಸಿಗೆ ಅಂತಹ ನೀತಿ ಇಲ್ಲ. ಜನರ ಆರೋಗ್ಯಕ್ಕೂ ಇ-ಫಾರ್ಮಸಿ ಕುತ್ತು ತರುವುದರಲ್ಲಿ ಯಾವುದೇ ಅನುಮಾನ ವೂ ಇಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ವಿತರಣೆಯಾದ ಔಷಧದಿಂದ ತಮಗೆ ಏರುಪೇರಾದಲ್ಲಿ ವೈದ್ಯರ ಚೀಚಿಯನ್ನು ನೀವು ಕಳಿಸಿದ ವ್ಯಕ್ತಿಯನ್ನು ಮಾತ್ರ ಪ್ರಶ್ನಿಸಬಹುದು. ಇಲ್ಲದಿದ್ದರೆ ಔಷಧ ನಿಯಂತ್ರಣ  ಇಲಾಖೆಗೆ ದೂರು ನೀಡಬೇಕು. ಈಗಿರುವ ರೀತಿ ನಮ್ಮ ಔಷಧಿ ಅಂಗಡಿಯಂತೆ ನಿಮ್ಮ ಊರಿನಲ್ಲೇ ಖಾತರಿಪಡಿಸಿಕೊಳ್ಳುವ ಅವಕಾಶದಿಂದ ಔಷಧಿ ಗ್ರಾಹಕರು ವಂಚಿತರಾಗಲಿದ್ದಾರೆ. ನಕಲಿ ಮತ್ತು ಮಾದಕ ಔಷಧಗಳ ವ್ಯಾಪಾರ ಎಗ್ಗಿಲ್ಲದಂತೆ, ಇತಿಮಿತಿ ಇಲ್ಲದಂತೆ ನಡೆಯಲು ಇ-ಫಾರ್ಮಸಿ ರಹದಾರಿಯಾಗಲಿದೆಯೆಂಬುದನ್ನೂ ಕೇಂದ್ರ ಸರ್ಕಾರ ಮರೆಯಬಾರದು ಎಂದು ಅವರು ಎಚ್ಚರಿಸಿದರು. 

ಸಂಘದ ಅಧ್ಯಕ್ಷ ಪೋಪಟ್ ಲಾಲ್ ಎಂ.ಜೈನ್, ಜಂಟಿ ಕಾರ್ಯದರ್ಶಿ ಎಸ್.ರವಿಕುಮಾರ ನುಗ್ಗೇಹಳ್ಳಿ, ಜಿ.ಪಿ.ಯೋಗಾನಂದಸ್ವಾಮಿ, ಎಚ್.ಸಿ.ಲಿಂಗರಾಜು, ಕೆ.ಸಚಿನ್ ಆಚಾರ್ಯ, ಚಿದಂಬರ ದೀಕ್ಷಿತ್, ಕೆ.ಎನ್.ಶಂಕರ್, ಬಿ.ಮಲ್ಲಿಕಾರ್ಜುನ, ಎನ್.ರವಿಚಂದ್ರ ನಾಯಕ್, ಡಿ.ಪಿ.ಸುನಿಲಕುಮಾರ, ಎಸ್.ಎ.ಧನಂಜಯ, ವಿ.ಮಂಜುನಾಥ,  ಜೆ.ಎಸ್.ಲೋಕೇಶ ಇತರರು ಪ್ರತಿಭಟನೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X