Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ.23 ರಿಂದ ಶಾರ್ಜಾದಲ್ಲಿ 2ನೇ ಆವೃತ್ತಿಯ...

ನ.23 ರಿಂದ ಶಾರ್ಜಾದಲ್ಲಿ 2ನೇ ಆವೃತ್ತಿಯ ಟಿ-10 ಕ್ರಿಕೆಟ್ ಲೀಗ್

ಝಹೀರ್ ಖಾನ್, ಕ್ರಿಸ್ ಗೇಲ್, ಲಸಿತ್ ಮಾಲಿಂಗ ಭಾಗಿ

ವಾರ್ತಾಭಾರತಿವಾರ್ತಾಭಾರತಿ28 Sept 2018 11:51 PM IST
share
ನ.23 ರಿಂದ ಶಾರ್ಜಾದಲ್ಲಿ 2ನೇ ಆವೃತ್ತಿಯ ಟಿ-10 ಕ್ರಿಕೆಟ್ ಲೀಗ್

ದುಬೈ, ಸೆ.28: ಶಾರ್ಜಾದಲ್ಲಿ ನ.23 ರಿಂದ ಡಿ.2ರ ತನಕ ನಡೆಯಲಿರುವ ಎರಡನೇ ಆವೃತ್ತಿಯ ಟಿ-10 ಲೀಗ್‌ನಲ್ಲಿ ವಿಶ್ವದ ಪ್ರಸಿದ್ಧ ಕ್ರಿಕೆಟಿಗರಾದ ಕ್ರಿಸ್ ಗೇಲ್, ಝಹೀರ್ ಖಾನ್, ಲಸಿತ್ ಮಾಲಿಂಗ, ಮೊರ್ನೆ ಮೊರ್ಕೆಲ್ ಹಾಗೂ ರಶೀದ್ ಖಾನ್ ಸಹಿತ ಹಲವರು ಭಾಗವಹಿಸಲಿದ್ದಾರೆ.

64 ಅಗ್ರ ಕ್ರಿಕೆಟಿಗರ ಗುಂಪಿನಲ್ಲಿರುವ ಆಟಗಾರರು 8 ತಂಡಗಳಲ್ಲಿ ಟಿ-10 ಲೀಗ್‌ನಲ್ಲಿ ಭಾಗವಹಿಸಲಿದ್ದಾರೆ. ಲೀಗ್ 10 ಓವರ್‌ಗಳ ಕ್ರಿಕೆಟ್ ಆಗಿದ್ದು ಟೂರ್ನಿಯು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

 8 ತಂಡಗಳಾದ ಕೇರಳ ಕಿಂಗ್ಸ್, ಪಂಜಾಬ್ ಲೆಜೆಂಡ್ಸ್, ಮರಾಠ ಅರೇಬಿಯನ್ಸ್, ಬಂಗಾಳ ಟೈಗರ್ಸ್, ದಿ ಕರಾಚಿಯನ್ಸ್, ರಾಜ್‌ಪೂತ್ಸ್, ನಾರ್ಥರ್ನ್ ವಾರಿಯರ್ಸ್ ಹಾಗೂ ಪಾಖ್‌ಟೂನ್ಸ್ ಟೂರ್ನಿಯಲ್ಲಿ ಭಾಗವಹಿಸಲಿದೆ. ಈ ವರ್ಷ ಕರಾಚಿಯನ್ಸ್ ಹಾಗೂ ನಾರ್ಥರ್ನ್ ವಾರಿಯರ್ಸ್‌ ತಂಡಗಳು ಹೊಸತಾಗಿ ಸೇರ್ಪಡೆಯಾಗಿವೆ.

ಕಳೆದ ವರ್ಷದ ಚಾಂಪಿಯನ್ ಕೇರಳ ಕಿಂಗ್ಸ್ ತಂಡ ಕ್ರಿಸ್ ಗೇಲ್, ಜುನೈದ್ ಖಾನ್, ಸಂದೀಪ್, ಟಾಮ್ ಕರನ್, ಫ್ಯಾಬಿಯನ್ ಅಲ್ಲೆನ್, ನಿರೊಶನ್ ಡಿಕ್ವೆಲ್ಲಾ, ಇಮ್ರಾನ್ ನಝೀರ್‌ರನ್ನು ಆಯ್ಕೆ ಮಾಡಿಕೊಂಡಿದೆ.

ಆಟಗಾರರಾದ ಕ್ರಿಸ್ ಜೋರ್ಡನ್, ಲಿಯಾಮ್ ಪ್ಲಂಕೆಟ್, ಲೂಕ್ ರಾಂಚಿ, ಮುಹಮ್ಮದ್ ಸಾಮಿ, ಝಹೀರ್ ಖಾನ್, ಉಮರ್ ಅಕ್ಮಲ್, ಟಾಮ್ ಮೂರ್ಸ್, ಅನ್ವರ್ ಅಲಿಯವರನ್ನು ಕಳೆದ ವರ್ಷದ ರನ್ನರ್ಸ್ ಅಪ್ ಪಂಜಾಬ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮರಾಠ ತಂಡಕ್ಕೆ ಅಫ್ಘಾನಿಸ್ತಾನದ ರಶೀದ್ ಖಾನ್ ನಾಯಕನಾಗಿ ಆಯ್ಕೆಯಾಗಿದ್ದು, ಈ ತಂಡದಲ್ಲಿ ಅಲೆಕ್ಸ್ ಹೇಲ್ಸ್, ಕರ್ಮಾನ್ ಅಕ್ಮಲ್, ಜೇಮ್ಸ್ ಫಾಕ್ನರ್, ಲಸಿತ್ ಮಾಲಿಂಗ, ಜೇಮ್ಸ್ ವಿನ್ಸಿ, ಬ್ರೆಂಡನ್ ಟೇಲರ್ ಸಹಿತ ಹಲವರಿದ್ದಾರೆ.

ಟಿ-10 ಲೀಗ್ ವಿಶ್ವದ ಮೊದಲ 10 ಓವರ್‌ಗಳ ಅಂತರ್‌ರಾಷ್ಟ್ರೀಯ ವೃತ್ತಿಪರ ಕ್ರಿಕೆಟ್ ಲೀಗ್ ಆಗಿದ್ದು, ಇದಕ್ಕೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಮಾನ್ಯತೆಯಿದೆ. ಟಿ-10 ಲೀಗ್ 2017ರಲ್ಲಿ ಯುಎಇನಲ್ಲಿ ಉದಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X