Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಬ್ರಹ್ಮನ ನಾವು ಬಲ್ಲೆವು

ಬ್ರಹ್ಮನ ನಾವು ಬಲ್ಲೆವು

ವಾರ್ತಾಭಾರತಿವಾರ್ತಾಭಾರತಿ29 Sept 2018 12:11 AM IST
share
ಬ್ರಹ್ಮನ ನಾವು ಬಲ್ಲೆವು

ಬ್ರಹ್ಮನ ನಾವು ಬಲ್ಲೆವು, ವಿಷ್ಣುವ ನಾವು ಬಲ್ಲೆವು,

ತೆತ್ತೀಸಕೋಟಿ ದೇವತೆಗಳ ನಾವು ಬಲ್ಲೆವು.
ಅದೇನು ಕಾರಣವೆಂದಡೆ,
ಇವರು ಹಲವು ಕಾಲ ನಮ್ಮ ನೆರೆಮನೆಯಲ್ಲಿದ್ದರಾಗಿ,
ಇವರು ದೇವರೆಂಬುದ ನಾ ಬಲ್ಲೆನಾಗಿ,
ಒಲ್ಲೆನೆಂದಾತಂಬಿಗ ಚೌಡಯ್ಯ.
                           -ಅಂಬಿಗರ ಚೌಡಯ್ಯ

ಅಂಬಿಗರ ಚೌಡಯ್ಯನವರ ಮನೋಜ್ಞವೂ ಕ್ರಾಂತಿಕಾರಿಯೂ ಆದ ವಚನವಿದು. ಈ ವಚನ ಏಕದೇವೋಪಾಸನೆಯ ಮಹತ್ವವನ್ನು ಪರೋಕ್ಷವಾಗಿ ತಿಳಿಸುತ್ತದೆ. ದೇಶದ ತುಂಬ ದೇವಾನುದೇವತೆಗಳೇ ಇದ್ದಾರೆ. 33 ಕೋಟಿ ದೇವತೆಗಳನ್ನು ನಾವು ಬಲ್ಲೆವು. ಅಷ್ಟೇ ಅಲ್ಲ, ಬ್ರಹ್ಮನನ್ನೂ ವಿಷ್ಣುವನ್ನೂ ಬಲ್ಲೆವು ಎಂದು ಅವರು ಹೇಳುವ ರೀತಿಯಲ್ಲಿ ಮಾನವ ಕಾಳಜಿ ಮತ್ತು ಸುಳ್ಳುದೇವತೆಗಳ ಬಗೆಗಿನ ವ್ಯಂಗ್ಯವಿದೆ. ಬಸವಣ್ಣನವರು ‘ದೇವನೊಬ್ಬ ನಾಮ ಹಲವು’ ಎಂಬುದನ್ನು ತಿಳಿಸುವ ಮೊದಲು ಅಂಬಿಗರ ಚೌಡಯ್ಯ ಮೊದಲಾದ ಶರಣರು ಕೂಡ ತೆತ್ತೀಸಕೋಟಿ ದೇವತೆಗಳ ಬಗ್ಗೆ ಸಂಶಯವನ್ನು ಇಟ್ಟುಕೊಂಡಿರಲಿಲ್ಲ. ಸತ್ಯದ ಅರಿವಾದ ಕೂಡಲೆ ಅವರು ಏಕದೇವೋಪಾಸನೆಯ ಮಹತ್ವವನ್ನು ಅರಿತರು. ಕಣ್ಣಿಗೆ ಕಾಣದ ದೇವರು ನಮ್ಮ ತಂದೆ, ಕಣ್ಣಿಗೆ ಕಾಣುವ ದೇವರುಗಳೆಲ್ಲ ನಮ್ಮ ಮಕ್ಕಳು ಎಂಬುದನ್ನು ಅವರು ಈ ವಚನದಲ್ಲಿ ಸೂಚಿಸಿದ್ದಾರೆ.
ಏಕದೇವೋಪಾಸನೆಯ ಪ್ರಜ್ಞೆ ಮೂಡುವವರೆಗೂ ಈ ದೇವರುಗಳೆಲ್ಲ ನಮ್ಮ ನೆರೆಮನೆಯವರಂತೆ ಇದ್ದರು ಎಂದು ಅವರು ಕಣ್ಣಿಗೆ ಕಾಣುವ ಎಲ್ಲ ದೇವರುಗಳನ್ನು ಜನಸಾಮಾನ್ಯರ ಸ್ಥಾನಕ್ಕೆ ಇಳಿಸಿದ್ದಾರೆ. ಏಕೆಂದರೆ ಅವರೆಲ್ಲ ಜನರಿಂದಲೇ ರೂಪುಗೊಂಡಿದ್ದಾರೆ. ಆದ್ದರಿಂದ ಜನರಿಂದ ಸೃಷ್ಟಿಯಾದ ಈ ದೇವರುಗಳನ್ನೆಲ್ಲ ನಾನು ಬಲ್ಲೆ ಎಂದು ತಿಳಿಸುತ್ತಾರೆ. ಇಂಥ ದೇವರುಗಳ ಒಳಹೊರಗುಗಳು ಗೊತ್ತಾದ ಕಾರಣ ಇವುಗಳ ಸಹವಾಸ ಬೇಡವೆಂದು ಖಂಡತುಂಡವಾಗಿ ಹೇಳುತ್ತಾರೆ.
ಶರಣರಿಗೆ ದೇವರು ಒಬ್ಬನೇ ಇದ್ದಾನೆ. ಇಡೀ ಜಗತ್ತಿನ ಸಕಲ ಚರಾಚರ ಗಳಿಗೂ ಆತನೊಬ್ಬನೇ ದೇವರಾಗಿದ್ದಾನೆ. ಆತನ ದೃಷ್ಟಿಯಲ್ಲಿ ಯಾವುದೇ ಭೇದಭಾವವಿಲ್ಲ. ಮಾದಾರ ಚೆನ್ನಯ್ಯನವರ ಮನೆಯಲ್ಲಿ ಆತ ಅಂಬಲಿಯನ್ನೂ ಸೇವಿಸುತ್ತಾನೆ. ಈ ತೆತ್ತೀಸಕೋಟಿ ದೇವತೆಗಳಲ್ಲಿ ಯಾವೊಂದು ದೇವತೆಯೂ ಹೊಲೆಮಾದಿಗರ ಮನೆಗೆ ಹೋಗಿ ಅಂಬಲಿಯನ್ನು ಕುಡಿದಿಲ್ಲ. ಮಾನವ ನಿರ್ಮಿತ ಈ ದೇವತೆಗಳು ಮೇಲ್ಜಾತಿ ಮತ್ತು ಮೇಲ್ವರ್ಗದವರು ಹೇಳಿದಂತೆಯೆ ಕೇಳುತ್ತವೆ. ಇವುಗಳ ಹೆಸರಿನಲ್ಲಿ ಮೇಲ್ವರ್ಗದ ಸವರ್ಣೀಯರು ವರ್ಣಭೇದ, ಜಾತಿಭೇದ, ಅಸ್ಪಶ್ಯತೆ ಮುಂತಾದ ಆಚರಣೆಗಳನ್ನು ಸಹಸ್ರಾರು ವರ್ಷಗಳಿಂದ ಆಚರಿಸುತ್ತ ಬಂದಿದ್ದಾರೆ. ಅಂತೆಯೆ ಇಂಥ ದೇವತೆಗಳನ್ನು ಅಂಬಿಗರ ಚೌಡಯ್ಯನವರು ತಿರಸ್ಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X