Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಸಂಪುಟ ವಿಸ್ತರಣೆ ಬೆನ್ನಲ್ಲೆ ಖಾತೆಗಳ...

​ಸಂಪುಟ ವಿಸ್ತರಣೆ ಬೆನ್ನಲ್ಲೆ ಖಾತೆಗಳ ಬದಲಾವಣೆ ಸಾಧ್ಯತೆ?

ವಾರ್ತಾಭಾರತಿವಾರ್ತಾಭಾರತಿ29 Sept 2018 6:33 PM IST
share
​ಸಂಪುಟ ವಿಸ್ತರಣೆ ಬೆನ್ನಲ್ಲೆ ಖಾತೆಗಳ ಬದಲಾವಣೆ ಸಾಧ್ಯತೆ?

ಬೆಂಗಳೂರು, ಸೆ. 29: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ಅಕ್ಟೋಬರ್ 10ರೊಳಗೆ ವಿಸ್ತರಣೆಯಾಗುವುದು ನಿಶ್ಚಿತವಾಗಿದ್ದು, ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಕೆಲ ‘ಖಾತೆ’ಗಳ ಬದಲಾವಣೆ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಡಾ.ಸುಧಾಕರ್, ಸಿ.ಎಸ್.ಶಿವಳ್ಳಿ, ಬಿ.ಸಿ.ಪಾಟೀಲ್ ಸೇರಿದಂತೆ ಹಲವು ಮಂದಿ ಆಕಾಂಕ್ಷಿಗಳಿದ್ದು, ಆ ಪೈಕಿ 6 ಮಂದಿ ಕಾಂಗ್ರೆಸ್‌ನಿಂದ ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಿಸಿದೆ. ವಿಸ್ತರಣೆ ಬೆನ್ನಲ್ಲೆ ಪ್ರಮುಖ ಖಾತೆಗಳಿಗಾಗಿ ಕೆಲವರ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಕೆಲ ಪ್ರಭಾವಿಗಳ ಖಾತೆಯಲ್ಲೂ ಅದಲು ಬದಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಾಲಿನ ಖಾತೆಗಳಲ್ಲಿ ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ, ಬೃಹತ್ ಕೈಗಾರಿಕೆ ಹಾಗೂ ಕಂದಾಯ, ಗೃಹ ಖಾತೆ ಸೇರಿದಂತೆ ಅದಲು-ಬದಲು ಆಗಲಿವೆ. ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಲು ಹೆಚ್ಚಿನ ಆಸಕ್ತಿ ಹೊಂದಿದ್ದಾರೆಂದು ತಿಳಿದು ಬಂದಿದೆ.

ಈ ಮಧ್ಯೆ ಜಲಸಂಪನ್ಮೂಲ ಖಾತೆ ಮತ್ತೆ ಉತ್ತರ ಕರ್ನಾಟಕದ ಪಾಲಾಗುವ ಸಾಧ್ಯತೆಗಳಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಹೊಣೆಗಾರಿಕೆ ಆರ್.ವಿ. ದೇಶಪಾಂಡೆ ಕೈವಶವಾಗಲಿದ್ದು, ಕಂದಾಯ ಖಾತೆ ಡಾ.ಜಿ.ಪರಮೇಶ್ವರ್ ಹೆಗಲಿಗೆ ಹೋಗಲಿದೆ ಎಂದು ಹೇಳಲಾಗಿದೆ.

ಗೃಹ ಖಾತೆ ಯಾರಿಗೆ ಕೊಡಲಿದ್ದಾರೆಂಬುದು ಇನ್ನೂ ಖಾತ್ರಿಯಾಗಿಲ್ಲ. ಈ ನಡುವೆ ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿಯವರಿಗೆ ಗೃಹ ಖಾತೆ ಹೊಣೆಗಾರಿಕೆ ನೀಡುವ ಸಾಧ್ಯತೆಗಳಿವೆ. ಆದರೆ, ಜಾರ್ಜ್, ಪರಮೇಶ್ವರ್, ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪೈಪೋಟಿ ನಡೆಸಿದ್ದಾರೆಂದು ತಿಳಿದು ಬಂದಿದೆ.

ವರಿಷ್ಠರಿಗೆ ತೀವ್ರ ತಲೆ ನೋವಾಗಿದ್ದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಪ್ರಮುಖ ಖಾತೆಗಳಿಗಾಗಿ ಮುಖಂಡರ ನಡುವೆ ಜಂಗಿಕುಸ್ತಿ ನಡೆಯುವ ಸಾಧ್ಯತೆಗಳಿದ್ದು, ಸಂಪುಟ ವಿಸ್ತರಣೆ ಹಾಗೂ ಖಾತೆ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ‘ಸೂತ್ರ’ದತ್ತಲೇ ಎಲ್ಲರ ಚಿತ್ತ ನೆಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X