Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕತ್ತೆಗಳಿಗೆ ಪಾದ ಪೂಜೆ ಮಾಡುವ ಮೂಲಕ...

ಕತ್ತೆಗಳಿಗೆ ಪಾದ ಪೂಜೆ ಮಾಡುವ ಮೂಲಕ ವಾಟಾಳ್ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Sept 2018 6:48 PM IST
share
ಕತ್ತೆಗಳಿಗೆ ಪಾದ ಪೂಜೆ ಮಾಡುವ ಮೂಲಕ ವಾಟಾಳ್ ಜನ್ಮದಿನಾಚರಣೆ

ಬೆಂಗಳೂರು, ಸೆ.28: ಕನ್ನಡ ಚಳವಳಿ ಹೋರಾಟಗಾರ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವನ್ನು ಕತ್ತೆಗಳಿಗೆ ಪಾದಪೂಜೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿಕೊಂಡರು.

ಶನಿವಾರ ನಗರದ ಪುರಭವನದ ಎದುರು ಜಮಾಯಿಸಿದ್ದ ವಾಟಾಳ್ ನಾಗರಾಜ್ ಹಾಗೂ ಅವರ ಅಭಿಮಾನಿಗಳು ಕಳೆದ ಐದು ದಶಕಗಳ ಹಿಂದೆ ಪೊಲೀಸರು ಬೂಟುಗಳಿಂದ ಥಳಿಸಿದ್ದನ್ನೇ ನೆನಪಾಗಿಸಿಕೊಂಡು, ಅದೇ ದಿನವನ್ನೇ ಹುಟ್ಟುಹಬ್ಬದ ದಿನವನ್ನಾಗಿ ಆಚರಿಸಿಕೊಳ್ಳುತ್ತಾ ಬಂದಿದಾರೆ.

ವಾಟಾಳ್ ತಮ್ಮ ಹುಟ್ಟುಹಬ್ಬವನ್ನು ಕತ್ತೆಗಳಿಗೆ ಪಾದಪೂಜೆ ಮಾಡುವ ಮೂಲಕ ಇಂದು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಗೆಳೆಯರು, ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು. ಕರ್ನಾಟಕದ ವಿವಿಧ ಜಾನಪದ ಕಲಾತಂಡಗಳು ಪ್ರದರ್ಶನ ನಡೆಸಿದರು.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ವಾಟಾಳ್ ನಾಗರಾಜ್ ಕನ್ನಡ ನಾಡಿನ ಹೆಮ್ಮೆಯ ಕನ್ನಡ ಹೋರಾಟಗಾರ. ನಾಡಿನ ಎಲ್ಲ ವಿಚಾರಗಳಲ್ಲಿಯೂ ದಣಿವರಿಯದೇ ಹೋರಾಟ ಮಾಡುತ್ತಿದ್ದಾರೆ. ಇಂತಹ ನಾಯಕರ ಅಗತ್ಯವಿದೆ ಎಂದು ಹೇಳಿದರು.

ಮಾಜಿ ಸಚಿವ ರಾಮಚಂದ್ರಗೌಡ ಮಾತನಾಡಿ, ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು. ನಾಡಿನ ಇತಿಹಾಸದಲ್ಲಿ ವಾಟಾಳ್ ಅವರ ಹೆಸರು ಸುವರ್ಣಾಕ್ಷರದಲ್ಲಿ ಬರೆದಿಡುವಂತಹುದು ಎಂದು ನುಡಿದರು.

ನಾಡಿನಿಂದ ಗಡಿನಾಡಿನವರೆಗೂ ಕನ್ನಡತನವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ವಾಟಾಳ್ ನೇತೃತ್ವ ಕನ್ನಡ ಚಳವಳಿಗೆ ಇಲ್ಲದಿದ್ದರೆ ಇಂದಿನ ಕನ್ನಡ ಸಿನಿಮಾಗಳು ಉಳಿಯುತ್ತಿರಲಿಲ್ಲ ಎಂದು ಅವರು ಬಣ್ಣಿಸಿದರು.

ವಾಟಾಳ್ ನಾಗರಾಜ್ ಮಾತನಾಡಿ, ಕೊನೆ ಉಸಿರಿರುವವರೆಗೂ ಕನ್ನಡಕ್ಕಾಗಿ ಹೋರಾಟ ಮಾಡುತ್ತೇನೆ. ಕಾವೇರಿ, ಮಹಾದಾಯಿ ಹೋರಾಟ, ಗಡಿನಾಡು ಕನ್ನಡಿಗರಿಗೆ ನ್ಯಾಯ, ಉತ್ತರ ಕರ್ನಾಟಕಕ್ಕಾದ ಅನ್ಯಾಯದ ವಿರುದ್ಧ ಧ್ವನಿ, ಹೈದರಾಬಾದ್-ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡುವುದು, ಬೆಂಗಳೂರಿನಲ್ಲಿ ಪರಭಾಷಿಗರ ಹಾವಳಿ ತಡೆಯುವುದು ಸೇರಿದಂತೆ ಎಲ್ಲ ಹೋರಾಟಗಳನ್ನು ನಿರಂತರವಾಗಿ ಮಾಡುತ್ತೇನೆ ಎಂದು ಹೇಳಿದರು.

ಆಡಳಿತ ವ್ಯವಸ್ಥೆಯಲ್ಲಿ ಮೇಲ್ಮನೆಗೆ ಸಿನಿಮಾ ಕಲಾವಿದರು, ಸಾಹಿತಿಗಳನ್ನು ಅಷ್ಟೇ ನೇಮಕ ಮಾಡಲಾಗುತ್ತಿದೆ. ಆದರೆ, ಕನ್ನಡ ಚಳವಳಿಗಾರರನ್ನು ಸರಕಾರಗಳು ಪರಿಗಣಿಸುತ್ತಿಲ್ಲ. ಹೀಗಾಗಿ, ನಾಡಿನ ಯಾವುದೇ ಭಾಗದಲ್ಲಾಗಲಿ, ಯಾವುದೇ ಕ್ಷೇತ್ರದಲ್ಲಾಗಲಿ ಸೇವೆ ಸಲ್ಲಿಸಿರುವ ಹೋರಾಟಗಾರರನ್ನು ಸರಕಾರ ಪರಿಷತ್ತಿಗೆ ನೇಮಕ ಮಾಡಲು ಉದಾರತೆಯನ್ನು ತೋರಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಕನ್ನಡಪರ ಹೋರಾಟಗಾರ ಟಿ.ಪಿ.ಪ್ರಸನ್ನಕುಮಾರ್, ಕನ್ನಡ ಸೇನೆಯ ಕೆ.ಆರ್.ಕುಮಾರ್, ಶಿವರಾಮೇಗೌಡ, ಕರವೇಯ ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X