Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಡಿಕಲ್ ಸೀಟು ಹೆಸರಿನಲ್ಲಿ ಕೋಟ್ಯಂತರ...

ಮೆಡಿಕಲ್ ಸೀಟು ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ಐವರ ಸೆರೆ

ವಾರ್ತಾಭಾರತಿವಾರ್ತಾಭಾರತಿ29 Sept 2018 8:32 PM IST
share
ಮೆಡಿಕಲ್ ಸೀಟು ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ಐವರ ಸೆರೆ

ಬೆಂಗಳೂರು, ಸೆ.29: ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಶಿಕ್ಷಣ ಸೀಟು ಕೊಡಿಸುವುದಾಗಿ ಸುಮಾರು 200 ವಿದ್ಯಾರ್ಥಿಗಳಿಂದ 25 ಕೋಟಿಗಿಂತಲೂ ಅಧಿಕ ಮೊತ್ತದ ಹಣ ಪಡೆದು ವಂಚಿಸಿದ್ದ ಆರೋಪದಡಿ ಆರು ಜನರನ್ನು ಇಲ್ಲಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬಾಪೂಜಿನಗರ 10ನೆ ಕ್ರಾಸ್, 1ನೇ ಮೈನ್ ನಿವಾಸಿ ಸುಮನ್ (25), ಆಂಧ್ರಪ್ರದೇಶದ ಕರ್ನೂಲ್ ರಸ್ತೆಯ ವೆಂಕಟೇಶ್ವರ್ ನಗರ ನಿವಾಸಿಗಳಾದ ದಿಲೀಪ್ (28), ಏಡುಕೊಂಡಲು (51), ಹಳೆಗುಡ್ಡದ ಹಳ್ಳಿ ಆಯಿಷಾ ಬಾನು (25), ಸುದ್ದಗುಂಟೆ ಪಾಳ್ಯ ತಾವರೆಕೆರೆ ಮುಖ್ಯ ರಸ್ತೆ 4ನೆ ಕ್ರಾಸ್ ಕೃಷ್ಣಮೂರ್ತಿ ಲೇಔಟ್ ನಿವಾಸಿ ರಂಗ (30) ಹಾಗೂ ಸುದ್ದಗುಂಟೆ ಪಾಳ್ಯದ 1ನೆ ಕ್ರಾಸ್ 1ನೆ ಮುಖ್ಯ ರಸ್ತೆ ನಿವಾಸಿ ಬಾಷಾ (28) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ: 2011ರಲ್ಲಿ ಅಮೆರಿಕನ್ ಸರ್ವೀಸ್ ಸೆಂಟರ್ ಎಂಬ ಕನ್ಸಲ್‌ಟೆನ್ಸಿ ಕಂಪೆನಿಯೊಂದನ್ನು ಆಂಧ್ರಪ್ರದೇಶ ಮೂಲದ ಗೋಪಾಲ್ ವೆಂಕಟರಾವ್ ಎಂಬಾತ ಬೆಂಗಳೂರು, ಚೆನ್ನೈ, ಹೈದರಾಬಾದ್, ತಿರುಪತಿ ಹಾಗೂ ಕೊಯಮತ್ತೂರುಗಳಲ್ಲಿ ಪ್ರಾರಂಭಿಸಿದ್ದ.

ಈ ಕಂಪೆನಿಗಳ ಮೂಲಕ ಹಲವಾರು ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪದವಿ ಪ್ರವೇಶಕ್ಕೆ ಸೀಟು ಕೊಡಿ ಕೊಡಿಸುವುದಾಗಿ ವಿದೇಶಕ್ಕೆ ಕರೆದುಕೊಂಡು ಹೋಗಿ ಲಕ್ಷಾಂತರ ರೂ. ಹಣ ಪಡೆದು ಸಂಬಂಧಿಸಿದ ವಿಶ್ವವಿದ್ಯಾಲಯಗಳಿಗೆ ಹಣ ಕಟ್ಟದೆ, ವಂಚನೆ ನಡೆಸಿದ್ದ ಎನ್ನಲಾಗಿದೆ.
ಈ ಸಂಬಂಧ ಚೆನ್ನೈನಲ್ಲಿ ಪ್ರಕರಣ ದಾಖಲಾದ ನಂತರ, ಮೆಡಿಕಲ್ ಟೀಚರ್ಸ್ ರೂಟ್ಸ್ ಎಜುಕೇಷನ್ ಎಂಬ ಹೆಸರಿನ ಕನ್ಸಲ್‌ಟೆನ್ಸಿ ಕಂಪೆನಿಗಳನ್ನು ಚೆನ್ನೈ, ಹೈದರಾಬಾದ್ ಹಾಗೂ ನಗರದ ಆಡುಗೋಡಿಯಲ್ಲಿ ಪ್ರಾರಂಭಿಸಿ ಹಲವು ವಿದ್ಯಾರ್ಥಿಗಳಿಗೆ ವಂಚಿಸಿದ ಬಗ್ಗೆ ಆಡುಗೋಡಿ, ಮಡಿವಾಳ ಠಾಣೆಗಳಲ್ಲಿ ದೂರು ದಾಖಲಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ನಂತರ ಆರೋಪಿಗಳು, ಕನ್ಸಲ್‌ಟೆನ್ಸಿ ಕಚೇರಿಗಳನ್ನು ಮುಚ್ಚಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು.

ಬಳಿಕ ಆರೋಪಿಗಳು ಕನ್ಸಲ್‌ಟೆನ್ಸಿ ಹೆಸರುಗಳನ್ನು ಹಾಗೂ ಸ್ಥಳಗಳನ್ನು ಬದಲಿಸಿ ಡಾಕ್ಟರ್ಸ್‌ ವರ್ಲ್ಡ್ ಹಾಗೂ ಯೂ-ಕಾನ್ ಎಜುಕೇಷನ್ ಎಂಬ ಕನ್ಸಲ್ಟೆನ್ಸಿ ಕಂಪೆನಿಗಳನ್ನು ಎಚ್‌ಎಸ್‌ಆರ್ ಲೇಔಟ್ ಹಾಗೂ ಜಯನಗರಗಳಲ್ಲಿ ನಡೆಸುತ್ತಿದ್ದರು.
ಈ ಕನ್ಸಲ್ಟೆನ್ಸಿ ಕಂಪೆನಿಗಳ ಮುಖಾಂತರ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸುಮಾರು 25 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಿದ್ಯಾರ್ಥಿಗಳನ್ನು ಪ್ರವಾಸಿ ರೂಪದಲ್ಲಿ ವಿದೇಶಗಳಿಗೆ ಕರೆದೊಯ್ದು ಮಾನ್ಯತೆ ಇಲ್ಲದ ಮತ್ತು ಸರಿಯಾದ ಶಿಕ್ಷಣ ವ್ಯವಸ್ಥೆ ಇಲ್ಲದ ಗಯಾನ, ಅಲೆಕ್ಸಾಂಡರ್ ಯೂನಿವರ್ಸಿಟಿ ಆಫ್ ಅಮೆರಿಕ, ತಿಯಾನ್ ಜಿನ್ ಮೆಡಿಕಲ್ ಯೂನಿವರ್ಸಿಟಿ, ಚೀನಾ ಮುಂತಾದ ದೇಶಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರತಿಯೊಬ್ಬರಿಂದ 20 ರಿಂದ 30 ಲಕ್ಷ ರೂ. ಹಣವನ್ನು ಪಡೆದು ಸಂಬಂಧಿಸಿದ ಯೂನಿವರ್ಸಿಟಿಗಳಿಗೆ ಪಾವತಿಸದೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಕೊಡಿಸದೆ ಮೋಸ ಮಾಡಿದ್ದರು ಎಂದು ದೂರು ದಾಖಲಾಗಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಎಸಿಪಿ ಸೋಮೇಗೌಡ, ಮಡಿವಾಳ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಎಸ್. ಬೋಳೆತ್ತಿನ ನೇತೃತ್ವದ ವಿಶೇಷ ಪೊಲೀಸ್ ತಂಡ ಖಚಿತ ಮಾಹಿತಿ ಆಧರಿಸಿ ಕನ್ಸಲ್ಟೆನ್ಸಿ ಮೇಲೆ ದಾಳಿ ನಡೆಸಿ, ಬೃಹತ್ ಜಾಲವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದೆ. ಅವರಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿಗಳಾದ ಗೋಪಿ ವೆಂಕಟರಾವ್, ಆತನ ಪತ್ನಿ ನಿಖಿಲಾ ಹಾಗೂ ಝಮೀರ್ ಎಂಬುವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ಅವರ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಡಿಸಿಪಿ ಡಾ. ಬೋರಲಿಂಗೇಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X