ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ
ಮಾಯಾಂಕ್, ಸಿರಾಜ್ ಗೆ ಸ್ಥಾನ
ಮಾಯಾಂಕ್ ಅಗರ್ವಾಲ್
ಹೊಸದಿಲ್ಲಿ, ಸೆ.29: ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ಗಳ ಸರಣಿಗೆ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ಕರ್ನಾಟಕದ ಆರಂಭಿಕ ದಾಂಡಿಗ ಮಾಯಾಂಕ್ ಅಗರ್ವಾಲ್ ಮತ್ತು ಹೈದರಾಬಾದ್ನ ವೇಗಿ ಮುಹಮ್ಮದ್ ಸಿರಾಜ್ ಸ್ಥಾನ ಗಿಟ್ಟಿಕೊಂಡಿದ್ದಾರೆ.
ಮುಂಬೈನ ಪ್ರಥ್ವಿ ಶಾ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಕರ್ನಾಟಕದ ಕರುಣ್ ನಾಯರ್ರನ್ನು ಕಡೆಗಣಿಸಲಾಗಿದೆ. ಗಾಯಾಳು ಹಾರ್ದಿಕ್ ಪಾಂಡ್ಯರನ್ನು ಪರಿಗಣಿಸಲಾಗಿಲ್ಲ.
ಇಂದು ನಡೆದ ಎಂಎಸ್ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯ ಸಭೆಯು ಅ.4ರಂದು ಆರಂಭವಾಗಲಿರುವ ಟೆಸ್ಟ್ ಸರಣಿಗೆ 15 ಮಂದಿ ಸದಸ್ಯರ ಭಾರತದ ಟೆಸ್ಟ್ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ.
ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಲೋಕೇಶ್ ರಾಹುಲ್, ಪ್ರಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮಾನ್ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲ್ದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಮುಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್.