Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದವಿ ಮಟ್ಟದಲ್ಲಿ ಆಯ್ಕೆ ಆಧಾರಿತ...

ಪದವಿ ಮಟ್ಟದಲ್ಲಿ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿ: ಕುಲಸಚಿವ ಡಾ. ಖಾನ್ ಮಾಹಿತಿ

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ

ವಾರ್ತಾಭಾರತಿವಾರ್ತಾಭಾರತಿ29 Sept 2018 10:44 PM IST
share

ಮಂಗಳೂರು, ಸೆ.29: ವಿಶ್ವವಿದ್ಯಾಲಯದ ಅನುದಾನ ಆಯೋಗ(ಯುಜಿಸಿ)ದ ಸೂಚನೆಯಂತೆ ಪದವಿ ಮಟ್ಟದಲ್ಲೂ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿ (ಸಿಬಿಸಿಎಸ್)ಯನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಅಳವಡಿಸಲಾಗುವುದು ಎಂದು ಮಂಗಳೂರು ವಿವಿಯ ಕುಲಸಚಿವ ಡಾ.ಎ.ಎಂ. ಖಾನ್ ಹೇಳಿದರು.

ಮಂಗಳೂರು ವಿವಿಯ ಹೊಸ ಸೆನೆಟ್ ಸದನದಲ್ಲಿ 2018-19ರ ಸಾಲಿನ ಶೈಕ್ಷಣಿಕ ಮಂಡಳಿಯ ದ್ವಿತೀಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ನಾತಕೋತ್ತರ ಪದವಿಯಲ್ಲಿ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿ 2016-17ರ ಸಾಲಿನಲ್ಲಿ ಜಾರಿಗೆ ತರಲಾಗಿದೆ. ನೂತನ ಪರಿನಿಯಮಕ್ಕೆ ಪ್ರೊ.ಜೆ. ಈಶ್ವರ ಭಟ್ ಅಧ್ಯಕ್ಷತೆಯ ಸಮಿತಿಯಲ್ಲಿ ಯುಜಿಸಿ ಮಾರ್ಗಸೂಚಿಗಳ ಪ್ರಕಾರ ವಿನಿಮಯ ತಯಾರಿಸಿದ್ದು ಸೆ.15ರಂದು ಕಾರ್ಯಗಾರ ನಡೆಸಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಹಾಗೂ ಪದವಿ ಮಟ್ಟದ ಅಧ್ಯಯನ ಮಂಡಳಿಗಳ ಅಧ್ಯಕ್ಷರಿಗೆ ಮಾಹಿತಿ ನೀಡಲಾಗಿದೆ ಎಂದು ನುಡಿದರು.

ಯುಜಿಸಿಯು 2015ರಲ್ಲಿ ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿಯನ್ನು ಜಾರಿಗೆ ತರಲು ಸೂಚಿಸಿದೆ. ಅದರಂತೆ ಪದವಿಮಟ್ಟದ ಕಾರ್ಯಕ್ರಮಗಳಿಗೆ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿಗಾಗಿ ಕಾರ್ಯಾಗಾರದ ಅಭಿಪ್ರಾಯಗಳನ್ನು ಕ್ರೋಡೀಕರಿಸಿದೆ. ವಿಜ್ಞಾನ ನಿಕಾಯದ ವ್ಯಾಪ್ತಿಯಲ್ಲಿ ಬರುವ ಪದವಿಗಳಿಗೆ ಪದವಿಪೂರ್ವ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿ ನಿಗದಿ ಪಡಿಸಲಾಗಿದೆ ಎಂದು ನುಡಿದರು.

ಯುಜಿಸಿ ನಿಯಮದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ವಿಷಯ ವಾಣಿಜ್ಯ ವಿಭಾಗದಡಿ ಬರುವುದರಿಂದ ಈಗಿರುವ ಬಿಎ(ಎಚ್‌ಆರ್‌ಡಿ)ಶೀರ್ಷಿಕೆಯನ್ನು ಬಿಕಾಂ(ಎಚ್‌ಆರ್‌ಡಿ) ಎಂದು ಬದಲಿಸುವ ಅಗತ್ಯವಿದೆ. ಮಂಗಳೂರು ವಿವಿಯಲ್ಲಿ ಬಿ.ಎ.(ಎಚ್‌ಆರ್‌ಡಿ) ಮಾಡಿದ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗೆ ಬಂದಾಗ ಎಂಕಾಂ(ಎಚ್‌ಆರ್‌ಡಿ) ಸೀಟು ಬೇಕು ಎಂದು ಕೇಳುತ್ತಾರೆ. ವಾಸ್ತವದಲ್ಲಿ ಬಿಎ ಪದವಿಯಲ್ಲಿ ವಾಣಿಜ್ಯ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳನ್ನು ಕಲಿಯದೆ ಎಂಕಾಂ/ಬಿ.ಎ(ಎಚ್‌ಆರ್‌ಡಿ)ಗೆ ಬಂದಾಗ ತೊಂದರೆಯಾಗಲಿದೆ. ಹಾಗೆಯೇ ಮಂಗಳೂರು ವಿವಿಯಲ್ಲಿ ಬಿಎ(ಎಚ್‌ಆರ್‌ಡಿ) ಅಧ್ಯಯನ ಮಾಡಿದರಾದರೂ ಎಂಎ(ಎಚ್‌ಆರ್‌ಡಿ)ಕಲಿಯಲು ಅವಕಾಶ ಇಲ್ಲ. ಹಾಗಾಗಿ ಯಜಿಸಿ ನಿಯಮದಂತೆ ಮುಂದುವರಿಯಲು ಶಿರೋನಾಮೆ ಬದಲಾವಣೆ ಕಾರ್ಯ ಮುಂದಿನ ಶೈಕ್ಷಣಿಕ ಸಾಲಿನಲ್ಲಿಅನುಷ್ಠಾನಕ್ಕೆ ಬರಲಿದೆ ಎಂದರು.

2019-20ರ ಸಾಲಿನಿಂದ ಪದವಿ ಮಟ್ಟದಲ್ಲಿ ಬಿ.ಎಡ್, ಬಿ.ಎ.ಎಸ್.ಎಲ್.ಪಿ.ಬಿ.ಎಚ್.ಎಂ, ಹೊರತುಪಡಿಸಿ ಇತರ ಎಲ್ಲ ಕಾರ್ಯಕ್ರಮಗಳಿಗೆ ಆಯ್ಕೆ ಆಧಾರಿತ ಶ್ರೇಯಾಂಕ ಪದ್ಧತಿ ಜಾರಿಗೆ ತರಲು ಹಾಗೂ ಹೆಚ್ಚುವರಿ ಬೋಧನಾವಧಿಯನ್ನು ಅಧ್ಯಾಪಕರ ಕಾರ್ಯಭಾರದೊಂದಿಗೆ ಸೇರಿಸಲು ಅನುಮೋದಿಸಲಾಯಿತು.

*ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿಗೆ 2007-08ರ ಶೈಕ್ಷಣಿಕ ಸಾಲಿನಲ್ಲಿ ನೀಡಲಾದ ಸ್ವಾಯತ್ತ ಸ್ಥಾನಮಾನ ಮುಂದುವರಿಕೆ
*ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿಗೆ 2007-08ರ ಶೈಕ್ಷಣಿಕ ಸಾಲಿನಲ್ಲಿ ನೀಡಲಾದ ಸ್ವಾಯತ್ತ ಸ್ಥಾನಮಾನ ಮುಂದುವರಿಕೆ
*ಮಂಗಳೂರಿನ ಸಂತ ಆವ್ಯನ್ಸ್ ಕಾಲೇಜ್ ಆಫ್ ಎಜುಕೇಶನ್‌ಗೆ 2007-08ರ ಶೈಕ್ಷಣಿಕ ಸಾಲಿನಲ್ಲಿ ನೀಡಲಾದ ಸ್ವಾಯತ್ತ ಸ್ಥಾನಮಾನ ಮುಂದುವರಿಕೆ
*ಉಡುಪಿ ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ 2019-20ರ ಸಾಲಿನಲ್ಲಿ ಎಂಎಸ್ಸಿ ರಸಾಯನ ಶಾಸ್ತ್ರ ಕೋರ್ಸ್ ಸಂಯೋಜನೆಗೆ ಅನುಮೋದನೆ
*ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿಗೆ 2018-19ರ ಸಾಲಿನಿಂದ ಎಂಎಸ್ಸಿ ಸೈಕಾಲಜಿ ಕೋರ್ಸಿಗೆ ಹೆಚ್ಚುವರಿ ವಿದ್ಯಾರ್ಥಿ ಪರಿಮಿತಿಗೆ ಮಂಜೂರು
ಮಂಗಳೂರು ವಿವಿಯಲ್ಲಿ ನೆಹರೂ ಚಿಂತನಾ ಕೇಂದ್ರದ ಸ್ಥಾಪನೆಗೆ ಸಂಬಂಧಿಸಿದ ಪರಿನಿಯಮವನ್ನು ಕೆಲವೊಂದು ಬದಲಾವಣೆಗಳೊಂದಿಗೆ ಅನುಮೋದಿಸಲಾಯಿತು.

ಮಂಗಳೂರು ವಿವಿಯ ಅಂಚೆ ತೆರಪಿನ ಶಿಕ್ಷಣ ನಿರ್ದೇಶನಾಲಯದಲ್ಲಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹುದ್ದೆಗಳ ಸೃಜನೆಗೆ ಸಂಬಂಧಿಸಿ ಪರಿನಿಯಮ ತಿದ್ದುಪಡಿ ಹಾಗೂ ಅಂಚೆ ತೆರಪಿನ ಶಿಕ್ಷಣ ನಿರ್ದೇಶನಾಲಯದ ಹೆಸರನ್ನು ದೂರ ಶಿಕ್ಷಣ ಕೇಂದ್ರ ಎಂದು ಶೀರ್ಷಿಕೆ ಬದಲಾಯಿಸಲು ಅನುಮೋದನೆ ನೀಡಲಾಯಿತು.

ವಿವಿಯ ಪ್ರಭಾರ ಕುಲಪತಿ ಡಾ. ಕಿಶೋರ್‌ಕುಮಾರ್ ಸಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಪರೀಕ್ಷಾಂಗ ಕುಲಸಚಿವ ರವೀಂದ್ರಾಚಾರಿ ಹಾಗೂ ಹಣಕಾಸು ಅಧಿಕಾರಿ ದಯಾನಂದ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X