Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಯೋಧ್ಯೆ ವಿವಾದವನ್ನು ಬಿಜೆಪಿ ರಾಜಕೀಯ...

ಅಯೋಧ್ಯೆ ವಿವಾದವನ್ನು ಬಿಜೆಪಿ ರಾಜಕೀಯ ದಾಳವನ್ನಾಗಿಸಿಕೊಂಡಿದೆ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Sept 2018 6:21 PM IST
share
ಅಯೋಧ್ಯೆ ವಿವಾದವನ್ನು ಬಿಜೆಪಿ ರಾಜಕೀಯ ದಾಳವನ್ನಾಗಿಸಿಕೊಂಡಿದೆ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಸೆ.30: ಅಯೋಧ್ಯೆ ವಿವಾದವನ್ನು ಬಿಜೆಪಿಯವರು ರಾಜಕೀಯ ದಾಳವನ್ನಾಗಿಸಿಕೊಂಡಿದ್ದಾರೆ. ಅವರಿಗೆ ಜನರ ಭಾವನೆಗಳ ಮೇಲೆ ಕಾಳಜಿ ಇದ್ದಿದ್ದರೆ ಅಯೋಧ್ಯೆ ಅಭಿವೃದ್ಧಿ ಮಾಡುತ್ತಿದ್ದರು. ರಾಮಮಂದಿರ ವಿವಾದದಿಂದ ಹೆಸರು ಗಳಿಸಿತೇ ಹೊರತು ಆ ನಗರ ಅಭಿವೃದ್ಧಿಯಾಗಲಿಲ್ಲ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಎಂ.ಜಿ.ರಸ್ತೆಯ ಮೆಟ್ರೋ ಕೇಂದ್ರ ಬಳಿ ಅಯೋಧ್ಯೆಯ ಈಗಿನ ಪರಿಸ್ಥಿತಿ ಕುರಿತು ಛಾಯಾಗ್ರಾಹಕ ಸುಧೀರ್ ಶೆಟ್ಟಿ ಅವರು ಆಯೋಜಿಸಿದ್ದ ಚಿತ್ರಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಅವರಿಗೆ ರಾಮ ಬೇಕಾಗಿಲ್ಲ. ಗಲಾಟೆಯಾಗೋದು ಅಷ್ಟೆ ಬೇಕಾಗಿದೆ. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿ ದೊಡ್ಡ ತಪ್ಪು ಮಾಡಿದರು ಎಂದು ವಿಷಾದಿಸಿದರು.

ಅಯೋಧ್ಯೆ ವಿವಾದಕ್ಕೊಳಗಾಗಿದ್ದರಿಂದ ಅಭಿವೃದ್ಧಿಯಿಂದ ದೂರ ಉಳಿದಿದೆ. ಅಂದಿನ ಜನರು ಸೌಹಾರ್ದತೆಯಿಂದ ಒಟ್ಟಿಗೆ ಇದ್ದರೂ ಹೊರಗಿನವರು ಅಲ್ಲಿನ ಪರಿಸ್ಥಿತಿಯನ್ನು ಹದಗೆಡಿಸಿದ್ದಾರೆ. ಹೀಗಾಗಿ ಅಯೋಧ್ಯೆ ನಗರ ವಿವಾದ ಸ್ಥಳವಾಗಿ ಕಾಣಿಸುತ್ತದೆ. ಬಿಜೆಪಿ ಮತ್ತು ಆರೆಸ್ಸೆಸ್ ರಾಮಮಂದಿರ ಹೆಸರಿನಲ್ಲಿ ವಿವಾದ ಉಂಟು ಮಾಡಿದೆ ಹೊರತು ಅಭಿವೃದ್ದಿಪಡಿಸಲು ಮುಂದಾಗಲಿಲ್ಲ. ಈಗಲೂ ರಾಜಕೀಯ ಲಾಭ ಪಡೆಯಲು ಯತ್ನಿಸಲಾಗುತ್ತಿದೆಯೇ ಹೊರತು ಅಭಿವೃದ್ದಿಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.

ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗಡೆ ಮಾತನಾಡಿ, ಅಯೋಧ್ಯೆಯ ಜನರಲ್ಲಿ ವೈಷಮ್ಯವಿಲ್ಲ. ಜನರು ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸ್ಥಳೀಯರಿಗೆ ಬಿಟ್ಟುಕೊಡುವುದು ಒಳ್ಳೆಯದು ಎಂದ ಅವರು, ಇತ್ತೀಚೆಗೆ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಆದರೆ, ಅದರಿಂದ ಸಮಸ್ಯೆ ಪೂರ್ಣವಾಗಿ ಬಗೆಹರಿಯುವುದಿಲ್ಲ ಎಂದು ಹೇಳಿದರು.

ಸುಪ್ರಿಂಕೋರ್ಟ್ ತೀರ್ಪಿನ ನಂತರ ಜನರಲ್ಲಿ ಸೌರ್ಹಾದತೆ ಉಳಿಯುತ್ತದೆ ಎನ್ನುವುದು ಅನುಮಾನ. ಹೀಗಾಗಿ, ಸ್ಥಳೀಯರು ಸಮಸ್ಯೆಯನ್ನು ಒಟ್ಟಿಗೆ ಕುಳಿತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕಿದೆ. ಅಯೋಧ್ಯೆ ವಿಚಾರದಲ್ಲಿ ಹೊರಗಿನವರ ಹಸ್ತಕ್ಷೇಪ ಹೆಚ್ಚಾಗಿದೆ. ರಾಜಕೀಯ ಹಿತಾಸಕ್ತಿಯಿಂದಲೇ ಅದು ದೊಡ್ಡ ಮಟ್ಟದ ವಿವಾದವಾಗಿ ಬೆಳೆದಿದೆ. ಕೇವಲ ಸುಪ್ರೀಂ ತೀರ್ಪಿನ ಮೂಲಕವೇ ಎಲ್ಲವನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆಂದು ಮತ್ತೊಮ್ಮೆ ಒತ್ತಿ ಹೇಳಿದರು.

ಛಾಯಗ್ರಾಹಕ ಸುಧೀರ್ ಶೆಟ್ಟಿ ಕ್ಯಾಮೆರಾ ಕಣ್ಣಲ್ಲಿ ರಾಮಜನ್ಮ ಭೂಮಿಯ ಸತ್ಯ ಪ್ರದರ್ಶನವಾಗಿದ್ದು, ಅಯೋಧ್ಯ ಕುರಿತಾದ ಸ್ಫೋಟಕ ಮಾಹಿತಿಗಳು ಛಾಯಚಿತ್ರಗಳ ಮೂಲಕ ಹೊರ ಬಂದಿವೆ. ಛಾಯಚಿತ್ರ ಪ್ರದರ್ಶನದಲ್ಲಿ ರಾಮಜನ್ಮ ಭೂಮಿಯ ಸ್ಥಿತಿ-ಗತಿಗಳ ಛಾಯಚಿತ್ರ ಹಾಗೂ ವಿಡಿಯೋವನ್ನು ಅನಾವರಣಗೊಳಿಸಿದ್ದಾರೆ. ಅಯೋಧ್ಯಾ ನಗರಿಯಲ್ಲಿರುವ ಸ್ಥಳೀಯರಿಗೆ ಈ ವಿವಾದ ಬೇಕಾಗಿಲ್ಲ. ವಿವಾದದ ದಳ್ಳುರಿಯಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಅಲ್ಲಿನ ಮುಸ್ಲಿಮರು ಹಾಗೂ ಹಿಂದೂಗಳಿಗೆ ವಿವಾದವನ್ನು ಬಗೆಹರಿಸುವ ಆಸೆಯಿದೆ. ಆದರೆ ರಾಜಕೀಯ ನಾಯಕರಿಗೆ ವಿವಾದ ಜೀವಂತವಾಗಿದ್ದರೆ ಒಳ್ಳೆಯದು' ಎನ್ನುವ ಭಾವನೆಯನ್ನು ಛಾಯಚಿತ್ರದ ಮೂಲಕ ಬಿಚ್ಚಿಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X