Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೇಶಾವರ ಶಾಲೆಯ ಮೇಲಿನ ದಾಳಿಯಲ್ಲಿ ಭಾರತದ...

ಪೇಶಾವರ ಶಾಲೆಯ ಮೇಲಿನ ದಾಳಿಯಲ್ಲಿ ಭಾರತದ ಕೈವಾಡ ಎಂದ ಪಾಕ್

ಅಸಹ್ಯಕರ, ಅಸಂಬದ್ಧ ಆರೋಪ ಎಂದ ಭಾರತ

ವಾರ್ತಾಭಾರತಿವಾರ್ತಾಭಾರತಿ30 Sept 2018 9:26 PM IST
share
ಪೇಶಾವರ ಶಾಲೆಯ ಮೇಲಿನ ದಾಳಿಯಲ್ಲಿ ಭಾರತದ ಕೈವಾಡ ಎಂದ ಪಾಕ್

ನ್ಯೂಯಾರ್ಕ್, ಸೆ. 30: 2014ರಲ್ಲಿ ಪೇಶಾವರದ ಸೇನಾ ಶಾಲೆಯೊಂದರಲ್ಲಿ ನಡೆದ ಮಕ್ಕಳ ಹತ್ಯಾಕಾಂಡದಲ್ಲಿ ಭಾರತದ ಕೈವಾಡವಿದೆ ಎಂಬುದಾಗಿ ಶನಿವಾರ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಪಾಕಿಸ್ತಾನದ ವಿದೇಶ ಸಚಿವ ಶಾ ಮೆಹ್ಮೂದ್ ಕುರೇಶಿ ಮಾಡಿರುವ ಆರೋಪವು ‘ಅಸಹ್ಯಕರ’ ಹಾಗೂ ‘ಅಸಂಬದ್ಧ’ವಾಗಿದೆ ಎಂದು ಭಾರತ ಹೇಳಿದೆ.

ಕುರೇಶಿಯ ಆರೋಪಗಳನ್ನು ತಿರಸ್ಕರಿಸಿದ ವಿಶ್ವಸಂಸ್ಥೆಯಲ್ಲಿನ ಭಾರತೀಯ ಖಾಯಂ ನಿಯೋಗದ ಪ್ರಥಮ ಕಾರ್ಯದರ್ಶಿ ಈನಮ್ ಗಂಭೀರ್, ಭಯೋತ್ಪಾದಕರೆಂದು ವಿಶ್ವಸಂಸ್ಥೆ ಘೋಷಿಸಿದವರ ಪೈಕಿ 132 ಮಂದಿಗೆ ಪಾಕಿಸ್ತಾನ ‘ಆತಿಥ್ಯ ಮತ್ತು ಆಶ್ರಯ’ ನೀಡುತ್ತಿದೆ ಎಂದು ಆರೋಪಿಸಿದರು ಹಾಗೂ ಪಾಕಿಸ್ತಾನದ ಸಚಿವರು ಹಿಂದಿನ ಶೈಲಿಯಲ್ಲೇ ಭಾಷಣ ಮಾಡುತ್ತಿದ್ದಾರೆ ಎಂದರು.

ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಭಾಷಣ ಮಾಡಿದ ತುಂಬಾ ಹೊತ್ತಿನ ಬಳಿಕ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಕುರೇಶಿ, ‘ಕ್ಷುಲ್ಲಕ’ ಕಾರಣಗಳನ್ನು ಉಲ್ಲೇಖಿಸಿ ಭಾರತ ಶಾಂತಿ ಪ್ರಕ್ರಿಯೆಗೆ ತಡೆ ಒಡ್ಡಿದೆ, ಪಾಕಿಸ್ತಾನ ಮತ್ತು ವಲಯದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುತ್ತಿದೆ, ‘ಸಾರ್ಕ್’ ಸಂಘಟನೆಯನ್ನು ಪರಿಣಾಮರಹಿತವಾಗಿಸಿದೆ ಮತ್ತು ಕಾಶ್ಮೀರದಲ್ಲಿ ಮಾನವಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು.

‘‘ಪೇಶಾವರದ ಶಾಲೆಯೊಂದರಲ್ಲಿ ನಡೆದ 150ಕ್ಕೂ ಅಧಿಕ ಮಕ್ಕಳ ಮಾರಣಹೋಮ, ಭೀಕರ ಮಾಸ್ಟುಂಗ್ ಆಕ್ರಮಣ ಮತ್ತು ಭಾರತದ ಬೆಂಬಲ ಹೊಂದಿದ ಭಯೋತ್ಪಾದಕರು ನಡೆಸಿದ ಇತರ ಹಲವಾರು ಭಯೋತ್ಪಾದಕ ದಾಳಿಗಳನ್ನು ಪಾಕಿಸ್ತಾನ ಎಂದೂ ಮರೆಯದು’’ ಎಂದು ಕುರೇಶಿ ಹೇಳಿದರು.

ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿನ ಅದರ ವೈಫಲ್ಯತೆಯನ್ನು ಮುಚ್ಚಿಹಾಕುವ ನಿಟ್ಟಿನಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪಾಕ್ ಸಚಿವರು ಇಂಥ ಆರೋಪಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

‘‘ಭಾರತ ಅದರ ಎಲ್ಲ ನೆರೆ ದೇಶಗಳ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸಿದೆ ಹಾಗೂ ಆಕ್ರಮಣಕಾರಿಯಾಗಿ ವರ್ತಿಸಿದೆ’’ ಎಂಬುದಾಗಿಯೂ ಅವರು ಆರೋಪಿಸಿದರು.

ಭಾರತದ ಶಾಲೆಗಳು ಶ್ರದ್ಧಾಂಜಲಿ ಸಲ್ಲಿಸಿದ್ದವು

ಶನಿವಾರ ವಿಶ್ವಸಂಸ್ಥೆಯ ದಿನದ ಅಧಿವೇಶನ ಮುಗಿಯುವ ಮುನ್ನ ಉತ್ತರಿಸುವ ಹಕ್ಕನ್ನು ಚಲಾಯಿಸಿದ ಭಾರತ, ಪಾಕಿಸ್ತಾನದ ವಿರುದ್ಧ ಆರೋಪಗಳ ಸುರಿಮಳೆಗೈದಿತು.

 ‘‘ಪಾಕಿಸ್ತಾನದ ನೂತನ ವಿದೇಶ ಸಚಿವರ ಮಾತುಗಳನ್ನು ಗಮನವಿಟ್ಟು ಕೇಳುವುದಕ್ಕಾಗಿ ನನ್ನ ನಿಯೋಗ ಇಂದು ಬೆಳಿಗ್ಗೆ ಈ ಗೌರವಾನ್ವಿತ ಸಭೆಗೆ ಬಂದಿತು. ಅವರು ‘ನೂತನ ಪಾಕಿಸ್ತಾನ’ದ ಮುನ್ನೋಟವನ್ನು ಮುಂದಿಡುತ್ತಾರೆ ಎಂದು ನಾವು ಭಾವಿಸಿದ್ದೆವು’’ ಎಂದು ಗಂಭೀರ್ ಹೇಳಿದರು.

‘‘ಆದರೆ, ನಾವು ಕೇಳಿದ್ದು ಹಳೆಯ ಪಾಕಿಸ್ತಾನದ ಅಚ್ಚಿನಲ್ಲಿದ್ದ ಹೊಸ ಪಾಕಿಸ್ತಾನ ಮಾತನಾಡುವುದನ್ನು’’ ಎಂದರು.

 ‘‘ಪಾಕಿಸ್ತಾನದ ವಿದೇಶ ಸಚಿವರು ಅವರ ಭಾಷಣದಲ್ಲಿ ಹಲವಾರು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಅವುಗಳ ಪೈಕಿ ಒಂದು ಪೇಶಾವರದ ಮಕ್ಕಳ ಶಾಲೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದ್ದು. ಆ ದಾಳಿ ನಡೆದಾಗ ಭಾರತದಲ್ಲಿ ದುಃಖ ಮತ್ತು ನೋವು ಉಮ್ಮಳಿಸಿತ್ತು. ಸಂಸತ್ತಿನ ಉಭಯ ಸದನಗಳು ಅದನ್ನು ಖಂಡಿಸಿದ್ದವು. ಭಾರತದಾದ್ಯಂತದ ಶಾಲೆಗಳು ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಕ್ಕಳಿಗಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದವು’’ ಎಂದು ಈನಮ್ ಗಂಭೀರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X