Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಗಳಲ್ಲಿ ಜಾನಪದ ಅಧ್ಯಯನ ನಡೆಯಲಿ:...

ವಿವಿಗಳಲ್ಲಿ ಜಾನಪದ ಅಧ್ಯಯನ ನಡೆಯಲಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Sept 2018 9:28 PM IST
share
ವಿವಿಗಳಲ್ಲಿ ಜಾನಪದ ಅಧ್ಯಯನ ನಡೆಯಲಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಸೆ.30: ಇಂದಿನ ಸಂದರ್ಭದಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾನಪದದ ಅಧ್ಯಯನಗಳು ನಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ನಾಡೋಜ ಡಾ.ದೇಜಗೌ ಜನ್ಮಶತಮಾನೋತ್ಸವ ಹಾಗೂ ವಿಶ್ವಚೇತನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಜಾನಪದ ವಸ್ತು ಸಂಗ್ರಹಾಲಯ ಸ್ಥಾಪಿಸುವಲ್ಲಿ ದೇಜಗೌ ಅವರ ಪರಿಶ್ರಮ ಅಪಾರವಾದುದಾಗಿದೆ. ಅವರು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಸಂಚಾರ ಮಾಡಿ ಜಾನಪದ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾಳಜಿ ವಹಿಸಿದ್ದರು. ಆದರೆ, ಇತ್ತೀಚಿಗೆ ವಿಶ್ವವಿದ್ಯಾಲಯಗಳಲ್ಲಿ ಜಾನಪದದ ಬಗ್ಗೆ ಚರ್ಚೆಗಳು ನಡೆಯದಿರುವುದು ವಿಪರ್ಯಾಸ ಎಂದು ವಿಷಾದಿಸಿದರು.

ಹಿರಿಯ ಸಾಹಿತಿ ಡಾ.ದೇ.ಜವರೇಗೌಡರ ಸಾಹಿತ್ಯಕ ಹಾಗೂ ವೈಚಾರಿಕತೆಯ ಹರಿಕಾರರಾಗಿದ್ದಾರೆ. ವಿಶ್ವ ಮಾನವೀಯ ನೆಲೆಯಲ್ಲಿ ಚಿಂತನಾಶೀಲರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸ ಆಯಾಮವನ್ನೇ ಸೃಷ್ಟಿಸಿದ್ದರು ಎಂದು ಹೇಳಿದರು.

ನಾಡಿನ ಕವಿ ಕುವೆಂಪು ಅವರ ನೆಚ್ಚಿನ ಶಿಷ್ಯರಾಗಿದ್ದ ದೇಜಗೌ, ಅವರ ಕನಸುಗಳನ್ನು ಸಾಕಾರಗೊಳಿಸಿದ ಅಪರೂಪದ ವ್ಯಕ್ತಿಯಾಗಿದ್ದಾರೆ. ಎಲ್ಲ ಧರ್ಮೀಯರು ಒಟ್ಟಿಗೆ ಕುಳಿತು ಶಿಕ್ಷಣ ಕಲಿಯಬೇಕು, ರಾಜಕಾರಣಿಗಳು ಮತಕ್ಕಾಗಿ ಧರ್ಮ, ಜಾತಿಗಳ ಹೆಸರಿನಲ್ಲಿ ಮನಸ್ಸುಗಳನ್ನು ಛಿದ್ರ ಮಾಡಬಾರದು ಎಂದು ಹೇಳುತ್ತಿದ್ದರು ಎಂದು ಅವರು ನೆನಪಿಸಿಕೊಂಡರು.

ಧರ್ಮ ಜನರ ಮನಸ್ಸುಗಳನ್ನು ಛಿದ್ರ ಮಾಡುತ್ತಿರುವ ಸಂದರ್ಭದಲ್ಲಿ ಕನ್ನಡದ ಮೂಲಕ ನಾಡು ಕಟ್ಟಲು ಸಾಧ್ಯ. ಹೃದಯಗಳನ್ನು ಬೆಸೆಯಲು ಸಾಧ್ಯ. ಮನೆಯೊಳಗಿನ ಭಾಷೆ ಯಾವುದಾದರೂ, ಹೊರಗಿನ ವ್ಯವಹಾರಿಕ ಭಾಷೆ ಕಡ್ಡಾಯವಾಗಿ ಕನ್ನಡವಾಗಿರಬೇಕು. ಇಲ್ಲಿನ ನೆಲ, ಜಲವನ್ನು ಬಳಸಿಕೊಳ್ಳುವ ಅಂತಾರಾಷ್ಟ್ರೀಯ ಕಂಪನಿಗಳೂ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂಬುದು ದೇಜಗೌ ಅವರ ಅಭಿಪ್ರಾಯವಾಗಿತ್ತು ಎಂದು ಸಿದ್ದರಾಮಯ್ಯ ನುಡಿದರು.

ಕುವೆಂಪು ಅವರ ನಾಡಗೀತೆ ಇಂದು ಭಾಷಾಂತರದಿಂದಾಗಿ ಇಡೀ ಜಗತ್ತಿಗೆ ಕನ್ನಡದ ದರ್ಶನ ಮಾಡಿಸಿದೆ. ರಾಮಾಯಣವನ್ನು ವಾಲ್ಮೀಕಿ ಒಬ್ಬರಷ್ಟೇ ಸೃಷ್ಟಿಸಲಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯರು ರಾಮಾಯಣವನ್ನು ಸೃಷ್ಟಿಸಿದರು. ಮೂಲ ರಾಮಾಯಣದಲ್ಲಿ ಶೋಷಿತರಾಗಿದ್ದವರನ್ನು ಕುವೆಂಪು ತಮ್ಮ ರಾಮಾಯಣದಲ್ಲಿ ಪವಿತ್ರರನ್ನಾಗಿಸಿದರು. ಇದೇ ಕಾರಣಕ್ಕೆ ಕುವೆಂಪು ಜಗತ್ತಿಗೆ ಇಷ್ಟವಾಗುತ್ತಾರೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಥೆಗಾರ ಡಾ.ಕೆ.ಸತ್ಯ ನಾರಾಯಣ, ಹಾಸನ ಜಿಲ್ಲಾ ಪೊಲೀಸ್ ವರಿಷ್ಠ ಡಾ.ಎ.ಎನ್.ಪ್ರಕಾಶ್‌ಗೌಡ, ಬಿಬಿಎಂಪಿ ಮುಖ್ಯ ಅಭಿಯಂತರ ಕೆ.ಟಿ.ನಾಗರಾಜ್,ಲೆಕ್ಕ ಪರಿಶೋಧಕ ರಾಘವೇಂದ್ರ ಪುರಾಣಿಕ್ ಸೇರಿ ಸಮಾಜ ಸೇವಕ ಗೋವಿಂದಳ್ಳಿ ಕೃಷ್ಣೇಗೌಡ ಅವರಿಗೆ ವಿಶ್ವಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ.ಪದ್ಮಾಶೇಖರ್, ಕವಿ ಟಿ.ಸತೀಶ್ ಜವರೇಗೌಡ, ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸುರೇಶ್ ಜೀವನ್ಮುಖಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X