Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯಾರ್ಥಿಗಳಲ್ಲಿ ಚುನಾವಣಾ ಅರಿವು...

ವಿದ್ಯಾರ್ಥಿಗಳಲ್ಲಿ ಚುನಾವಣಾ ಅರಿವು ಮೂಡಿಸಲು ಸ್ಪರ್ಧೆಗಳ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ1 Oct 2018 7:50 PM IST
share

ಬೆಂಗಳೂರು, ಅ.1: ಚುನಾವಣಾ ಆಯೋಗ ಶಿಕ್ಷಣ ಇಲಾಖೆ ಜತೆಗೂಡಿ ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು ಮೂಡಿಸಲು ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಚುನಾವಣಾ ಪಾಠಶಾಲೆಗಳನ್ನೂ ರಚನೆ ಮಾಡಲಾಗಿದೆ.

ಪ್ರಜಾಪ್ರಭುತ್ವ, ಚುನಾವಣೆ ಮತ್ತು ಚುನಾವಣಾ ಪ್ರಕ್ರಿಯೆ, ನೂತನ ಮತದಾರರ ಗುರುತಿನ ಚೀಟಿ ಪಡೆಯುವ ವಿಧಾನ ಸೇರಿದಂತೆ ವಿವಿಧ ಮಾಹಿತಿ ನೀಡಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈ ಎರಡು ಸಮಿತಿಗಳು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಿವೆ.

ರಾಜ್ಯದ ಸರಕಾರಿ, ಖಾಸಗಿ ಹಾಗೂ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜು, ವಿಶ್ವವಿದ್ಯಾಲಯ, ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಗಳ ವಿದ್ಯಾರ್ಥಿಗಳಿಗೆ ಚುನಾವಣಾ ಸಂಬಂಧ ಚಿತ್ರಪಟ ಹಾಗೂ ಕೊಲಾಜ್ ಸಿದ್ಧಪಡಿಸುವ ಹಾಗೂ ಪ್ರಬಂಧ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಅವರ ಶಾಲಾ-ಕಾಲೇಜು ವಿಭಾಗವಾರು ಥೀಮ್ ನೀಡಲಾಗಿದೆ.

ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಯ ವಿದ್ಯಾರ್ಥಿಗಳಿಗೆ ಚಿತ್ರಪಟ ಹಾಗೂ ಕೊಲಾಜ್ ಸಿದ್ಧಪಡಿಸುವ ಸ್ಪರ್ಧೆ ರೂಪಿಸಲಾಗಿದೆ. ಅದಕ್ಕಾಗಿ ‘ಯಾವ ಮತದಾರರನ್ನು ಕೈ ಬಿಡುವಂತಿಲ್ಲ. ಪೂರ್ಣ ಮಾಹಿತಿ ಒಳಗೊಂಡ ಮತ್ತು ನೈತಿಕ ಮತದಾನ’ ಹಾಗೂ ‘ಸುಗಮ ಚುನಾವಣೆ’ ಎಂಬ ವಿಷಯ ನೀಡಲಾಗಿದೆ.

‘ಮತದಾನವನ್ನು ಕಡ್ಡಾಯಗೊಳಿಸಬೇಕೇ?: ಗಂಭೀರ ಅಪರಾಧಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೇ?’ ಹಾಗೂ ‘ಪ್ರಜಾಪ್ರಭುತ್ವದಲ್ಲಿ ಭಾರತ ಚುನಾವಣಾ ಆಯೋಗದ ಪಾತ್ರ’ ಎಂಬ ವಿಷಯ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ.

‘ಮತದಾನ ನನ್ನ ಸಂವಿಧಾನಿಕ ಹಕ್ಕು’, ‘ಮತದಾನವೇ ರಾಷ್ಟ್ರ ನಿರ್ಮಾಣದ ಮೊದಲ ಸೋಪಾನ’, ‘ಚುನಾವಣಾ ಅಭ್ಯರ್ಥಿಯಲ್ಲಿ ಅಪೇಕ್ಷಿಸುವ ಗುಣಗಳು’, ‘ಚುನಾವಣಾ ಆಯೋಗದ ರಚನೆ ಮತ್ತು ಕರ್ತವ್ಯ’, ‘ಪ್ರಜಾಪ್ರಭುತ್ವಕ್ಕೆ ಚುನಾವಣಾ ಆಯೋಗದ ಕೊಡುಗೆ’, ‘ನಿಷ್ಪಕ್ಷಪಾತ ಮತ್ತು ಪಾರದರ್ಶಕ ಚುನಾವಣಾ ನಿರ್ವಹಣೆ’, ನೋಟಾ ನನ್ನ ಆಯ್ಕೆ ಆಗಬೇಕೇ? ಹೀಗೆ ಏಳು ವಿಷಯಗಳನ್ನು ಪಿಯುಸಿ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಗೆ ನೀಡಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ‘ಮತದಾರರ ಶಿಕ್ಷಣದ ಅವಶ್ಯಕತೆ: ಇಂದಿನ ಸನ್ನಿವೇಶದಲ್ಲಿ ಅಂತರ್ಜಾಲ ಮತದಾನ ಪದ್ಧತಿ ಸಾಧ್ಯವೇ?’, ‘ಪ್ರಜಾಪ್ರಭುತ್ವದಲ್ಲಿ ಭಾರತ ಚುನಾವಣಾ ಆಯೋಗದ ಪಾತ್ರ’, ‘ಚುನಾವಣಾ ನಿರ್ವಹಣೆಯಲ್ಲಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆ’, ‘ಭಾರತದ ಚುನಾವಣಾ ಆಯೋಗದ ರಚನೆ ಹಾಗೂ ಕರ್ತವ್ಯ’ ಮತ್ತು ‘ನೋಟಾ ನನ್ನ ಆಯ್ಕೆ ಆಗಬೇಕೇ?’ ಎಂಬ ಆರು ವಿಷಯಗಳನ್ನು ನಿಗದಿ ಮಾಡಲಾಗಿದೆ.

ಸ್ಪರ್ಧೆ ವಿವರ: ಚುನಾವಣಾ ಅರಿವು ಕುರಿತಾಗಿ ನಡೆಸಬೇಕಾದ ಸ್ಪರ್ಧೆಯ ಮಾಹಿತಿ ಆಯಾ ಜಿಲ್ಲಾ ಉಪನಿರ್ದೇಶಕರ ಮೂಲಕ ಶಾಲಾ, ಕಾಲೇಜುಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳು ಅ. 10ರೊಳಗೆ ನೋಂದಣಿ ಮಾಡಿಕೊಳ್ಳಬಹುದು. ಆರಂಭದಲ್ಲಿ ಶಾಲಾ-ಕಾಲೇಜು ಹಂತದಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದೆ. ನಂತರ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ನಡೆಸಿ ವಿಜೇತರ ಪಟ್ಟಿ ಘೋಷಿಸಲಾಗುತ್ತದೆ. ನಂತರ ಎಲ್ಲ ಜಿಲ್ಲೆಗಳ ಮಾಹಿತಿ ಸಂಗ್ರಹಿಸಿ ರಾಜ್ಯ ಮಟ್ಟದ ವಿಜೇತರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X