Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯಾರನ್ನು ದ್ವೀಪಕ್ಕೆ...

ರೊಹಿಂಗ್ಯಾರನ್ನು ದ್ವೀಪಕ್ಕೆ ಸ್ಥಳಾಂತರಿಸುವ ಬಾಂಗ್ಲಾ ಯೋಜನೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ1 Oct 2018 10:38 PM IST
share
ರೊಹಿಂಗ್ಯಾರನ್ನು ದ್ವೀಪಕ್ಕೆ ಸ್ಥಳಾಂತರಿಸುವ ಬಾಂಗ್ಲಾ ಯೋಜನೆ ಮುಂದೂಡಿಕೆ

ಢಾಕಾ (ಬಾಂಗ್ಲಾದೇಶ), ಅ. 1: ರೊಹಿಂಗ್ಯಾ ಮುಸ್ಲಿಮರನ್ನು ದೂರದ ದ್ವೀಪವೊಂದಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಬಾಂಗ್ಲಾದೇಶ ಮುಂದೂಡಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ದ್ವೀಪಕ್ಕೆ ಸ್ಥಳಾಂತರಿಸುವ ಯೋಜನೆಗೆ ರೊಹಿಂಗ್ಯಾ ನಿರಾಶ್ರಿತರಿಂದ ತೀವ್ರ ವಿರೋಧ ವ್ಯಕ್ತವಾಗಿರುವುದನ್ನು ಸ್ಮರಿಸಬಹುದಾಗಿದೆ.

ಭಶನ್ ಚಾರ್ ದ್ವೀಪದಲ್ಲಿ ಒಂದು ಲಕ್ಷ ನಿರಾಶ್ರಿತರಿಗಾಗಿ ಕಾಲನಿಯೊಂದನ್ನು ನಿರ್ಮಿಸಲಾಗಿತ್ತು.

ಈ ಹೂಳುಭರಿತ ದ್ವೀಪವು ಪ್ರಾಕೃತಿಕ ವಿಕೋಪಗಳಿಗೆ ಬೇಗ ತುತ್ತಾಗುತ್ತದೆ ಎಂಬ ಎಚ್ಚರಿಕೆಯ ಹೊರತಾಗಿಯೂ ಬಾಂಗ್ಲಾದೇಶ ತನ್ನ ಯೋಜನೆಯನ್ನು ಮುಂದುವರಿಸಿತ್ತು.

ಪ್ರಧಾನಿ ಶೇಖ್ ಹಸೀನಾ ಬುಧವಾರ ಈ ಕಾಲನಿಯನ್ನು ಉದ್ಘಾಟಿಸುವ ಕಾರ್ಯಕ್ರಮವೂ ನಿಗದಿಯಾಗಿತ್ತು.

ಕೆಸರಿನಿಂದ ಕೂಡಿದ ಈ ಸಣ್ಣ ದ್ವೀಪವನ್ನು ವಾಸಯೋಗ್ಯವಾಗಿಸಲು ಬಾಂಗ್ಲಾದೇಶ ಸರಕಾರವು 280 ಮಿಲಿಯ ಡಾಲರ್ (ಸುಮಾರು 2040 ಕೋಟಿ ರೂಪಾಯಿ) ಖರ್ಚು ಮಾಡಿರುವುದನ್ನು ಸ್ಮರಿಸಬಹುದಾಗಿದೆ.

ಆದರೆ, ಈ ದ್ವೀಪ ಕಾಲನಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಬಾಂಗ್ಲಾದೇಶದ ಸಶಸ್ತ್ರ ಪಡೆಗಳ ವಕ್ತಾರರೊಬ್ಬರು ಹೇಳಿದ್ದಾರೆ.

ದ್ವೀಪದಲ್ಲಿ ಜನವಾಸ್ತವ್ಯ ಕಾಲನಿ ನಿರ್ಮಾಣದ ಹೊಣೆಯನ್ನು ಬಾಂಗ್ಲಾದೇಶದ ಸೇನೆ ವಹಿಸಿಕೊಂಡಿದೆ.

‘‘ನಾವು ಶೀಘ್ರವೇ ನೂತನ ದಿನಾಂಕವನ್ನು ಪ್ರಕಟಿಸುತ್ತೇವೆ’’ ಎಂದು ಲೆಫ್ಟಿನೆಂಟ್ ಕರ್ನಲ್ ಅಲಂಗೀರ್ ಕಬೀರ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X