Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾವು ಪೂಜಿಸುವ ರಾಮ, ಕೃಷ್ಣ, ಗಣೇಶ...

ನಾವು ಪೂಜಿಸುವ ರಾಮ, ಕೃಷ್ಣ, ಗಣೇಶ ಬ್ರಾಹ್ಮಣರಲ್ಲ: ಅನಂತ್‌ ಕುಮಾರ್ ಹೆಗಡೆ

"ರಾವಣ ಬ್ರಾಹ್ಮಣ ಸಮುದಾಯದವನು"

ವಾರ್ತಾಭಾರತಿವಾರ್ತಾಭಾರತಿ2 Oct 2018 7:57 PM IST
share
ನಾವು ಪೂಜಿಸುವ ರಾಮ, ಕೃಷ್ಣ, ಗಣೇಶ ಬ್ರಾಹ್ಮಣರಲ್ಲ: ಅನಂತ್‌ ಕುಮಾರ್ ಹೆಗಡೆ

ಬೆಂಗಳೂರು, ಅ.2: ನಾವು ಪೂಜಿಸುವ ರಾಮ, ಕೃಷ್ಣ, ಗಣಪತಿ ಯಾರೂ ಕೂಡ ಬ್ರಾಹ್ಮಣರಲ್ಲ. ಆದರೆ, ರಾವಣ ಬ್ರಾಹ್ಮಣ ಸಮುದಾಯದವನು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‌ ಕುಮಾರ್ ಹೆಗಡೆ ಇಂದಿಲ್ಲಿ ಹೇಳಿದ್ದಾರೆ.

ಮಂಗಳವಾರ ನಗರದ ಭಾರತೀಯ ವಿದ್ಯಾಭವನದಲ್ಲಿ ಮೈತ್ರೀ-ಸಂಸ್ಕೃತ-ಸಂಸ್ಕೃತಿ ಪ್ರತಿಷ್ಠಾನಮ್ ವತಿಯಿಂದ ಆಯೋಜಿಸಿದ್ದ, ಮೇಧಾನಮನಮ್ ಸಾಮರಸ್ಯಮ್ ತಥಾ ಸಂಸ್ಕೃತೋತ್ಸವಃ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಮ, ಕೃಷ್ಣ, ಗಣಪತಿ ಯಾರೂ ಕೂಡ ಬ್ರಾಹ್ಮಣರಲ್ಲ. ಆದರೆ, ರಾವಣ ಬ್ರಾಹ್ಮಣ ಸಮುದಾಯದವನು. ಆದರೆ, ರಾವಣನಿಗೆ ನಾವು ಗುಡಿ ಕಟ್ಟಿಲ್ಲ. ರಾಮ, ಕೃಷ್ಣ, ಗಣಪತಿಗೆ ದೇವಸ್ಥಾನ ನಿರ್ಮಿಸಿ ಪೂಜೆ ಮಾಡುತ್ತೇವೆ ಎಂದು ಹೇಳಿದರು.

ಸಂಸ್ಕತ ಕೇವಲ ಭಾಷೆಯಲ್ಲ. ಅದು ಶಕ್ತಿ. ಸುಸಂಸ್ಕೃತ ಜೀವನ ನಡೆಸಲು ಸಂಸ್ಕೃತ ಅತ್ಯಗತ್ಯ. ಕಂಪ್ಯೂಟರ್ ಒಪ್ಪುವ ಭಾಷೆ ಸಂಸ್ಕೃತ ಮಾತ್ರ. ಯೂರೋಪ್ ಸೇರಿ ಇತರ ದೇಶಗಳು ಸಂಸ್ಕೃತದ ಬಗ್ಗೆ ಆಸಕ್ತಿ ಹೊಂದಿವೆ. ಆದರೆ, ನಮ್ಮ ದೇಶದಲ್ಲಿ ಮಾತ್ರ ಸಂಸ್ಕೃತಕ್ಕೆ ಬೆಲೆ ಸಿಗುತ್ತಿಲ್ಲ ಎಂದು ತಿಳಿಸಿದರು.

ಸಂಸ್ಕೃತ ವಿಶ್ವದ ಬಹುತೇಕ ಭಾಷೆಗಳಲ್ಲಿ ಹಾಸುಹೊಕ್ಕಿದೆ. ಜಗತ್ತಿನ ಅನೈತಿಕತೆಗೆ ಸಂಸ್ಕೃತ ಮದ್ದಾಗಿದೆ. ಆದರೆ, ಸಂಸ್ಕೃತವನ್ನು ಬ್ರಾಹ್ಮಣರ ಭಾಷೆ ಎಂದು ಬಿಂಬಿಸುವ ಕೆಲಸ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆಯುತ್ತಿದೆ. ಹೀಗಾಗಿಯೇ, ದೇಶಕ್ಕೆ ಏನೂ ಕಲಿಯದೆ ಇದ್ದವರಿಂದ ಯಾವುದೇ ತೊಂದರೆಯಿಲ್ಲ. ಆದರೆ, ಸಾಕ್ಷರ ರಾಕ್ಷಕರಿಂದ ದೇಶವನ್ನು ರಕ್ಷಿಸಬೇಕಿದೆ ಎಂದು ನುಡಿದರು.

ಕೆಂಪು, ಹಳದಿ ಕನ್ನಡಕ ಧರಿಸಿದ ಜನರು ಆರ್ಯರು ಮಧ್ಯ ಏಷ್ಯಾದಿಂದ ಬಂದವರು ಎಂದು ಹೇಳುತ್ತಾರೆ. ಅಲ್ಲದೆ, ಆರ್ಯ ಎಂಬುದು ಜಾತಿ, ಅವರು ವಲಸಿಗರು ಎಂದು ಬಿಂಬಿಸುತ್ತಿದ್ದಾರೆ. ಆದರೆ, ಆರ್ಯ ಎಂಬುದು ಆರ್ಯನ್ ಎಂಬ ಪದದಿಂದ ಬಂದಿದೆ. ಆರ್ಯನ್ ಎಂದರೆ ಶ್ರೇಷ್ಠ ಮಾನವ ಎಂದರ್ಥ. ಅದನ್ನು ತಿಳಿಯದ ಕೆಂಪಂಗಿ ದಳ ಸುಳ್ಳನ್ನು ಹೇಳುವುದೇ ಜೀವನವನ್ನಾಗಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಸಿನೆಮಾ ಕಲಾವಿದರಾದ ಲಕ್ಷ್ಮೀ ಗೋಪಾಲಸ್ವಾಮಿ, ಸುಚೇಂದ್ರಪ್ರಸಾದ್, ಉದ್ಯಮಿ ಎಸ್.ಷಡಕ್ಷರಿ, ಹಾಸ್ಯ ಬರಹಗಾರ ಎಂ.ಎಸ್.ನರಸಿಂಹಮೂರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X