Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧೀಜಿ, ಆರೆಸ್ಸೆಸ್ ಚಿಂತನೆ ಒಂದೇ:...

ಗಾಂಧೀಜಿ, ಆರೆಸ್ಸೆಸ್ ಚಿಂತನೆ ಒಂದೇ: ವಿ.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ2 Oct 2018 8:21 PM IST
share

ಬೆಂಗಳೂರು, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹಿಂದು ಧರ್ಮದ ಚಿಂತನೆಗಳನ್ನೇ ಪ್ರತಿಪಾದಿಸಿದ್ದರು, ಹೀಗಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಗಾಂಧೀಜಿ ಅವರ ಚಿಂತನೆಗಳು ಒಂದೇ ಆಗಿವೆ ಎಂದು ಆರೆಸ್ಸೆಸ್ ಕ್ಷೇತ್ರೀಯ ಸಂಚಾಲಕ ವಿ.ನಾಗರಾಜ್ ಹೇಳಿದ್ದಾರೆ.

ಮಂಗಳವಾರ ನೃಪತುಂಗ ರಸ್ತೆಯ ಮಿಥಿಕ್ ಸೊಸೈಟಿಯಲ್ಲಿ ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಫೌಂಡೇಷನ್ ಫಾರ್ ಇಂಡಿಕ್ ರಿಸರ್ಚ್ ಸ್ಟಡೀಸ್(ಸ್ಟ್)ನಿಂದ ಏರ್ಪಡಿಸಿದ್ದ ‘ಸಮಯಾತೀತ ಮಹಾತ್ಮ ಗಾಂಧಿ’ ವಿಷಯವಾಗಿ ಅವರು ಉಪನ್ಯಾಸ ನೀಡಿದರು. ದೀನದಯಾಳ್ ಉಪಾಧ್ಯಾಯರು ಪ್ರತಿಪಾದಿಸಿದ ಚಿಂತನೆಗಳು ಮತ್ತು ಗಾಂಧೀಜಿ ಅವರ ಚಿಂತನೆಗಳು ಒಂದೇ ಆಗಿವೆ. ಗಾಂಧೀಜಿ ಅವರು ಶ್ರದ್ಧೆ, ಅಹಿಂಸೆ, ಸತ್ಯ, ಭಗವಂತನ ಕುರಿತಾದ ಚಿಂತನೆಗಳನ್ನು ಪ್ರತಿಪಾದಿಸುತ್ತಿದ್ದರು, ಅವೆಲ್ಲವೂ ಸನಾತನ ಧರ್ಮದ ಚಿಂತನೆಗಳಾಗಿವೆ ಎಂದು ಹೇಳಿದರು. ಗೋಪಾಲಕೃಷ್ಣ ಗೋಖಲೆ ಅವರನ್ನು ಗುರುವಾಗಿ ಸ್ವೀಕರಿಸಿದ್ದ ಗಾಂಧೀಜಿ ರಾಜಕೀಯ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಅವರಿಂದ ಮಾರ್ಗದರ್ಶನ ಕೋರಿದ್ದರು. ಆಗ ರಾಜಕೀಯವನ್ನು ಅಧ್ಯಾತ್ಮವನ್ನಾಗಿಸುವಂತೆ ಗಾಂಧೀಜಿಗೆ ಸಲಹೆ ನೀಡಿದ್ದರು. ಗಾಂಧೀಜಿ ಅವರ ಸರ್ವೊದಯ ಕಲ್ಪನೆಯು ಸಹ ಸಮಾನತೆಯನ್ನು ಪ್ರತಿಪಾದಿಸಿತ್ತು ಎಂದು ನುಡಿದರು.

ಗ್ರಾಮಗಳ ಮೂಲಕ ದೇಶವನ್ನು ಬಲಪಡಿಸುವ ಆರ್ಥಿಕ ನೀತಿಯನ್ನು ಅವರು ಪ್ರತಿಪಾದಿಸಿದ್ದರು. ಅವರು ಚರಕ ಹೊತ್ತು ಬಂದಾಗ ದೇಶ ಹೇಗೆ ಅಭಿವೃದ್ಧಿ ಆಗುತ್ತದೆ ಎಂದು ಹಲವರು ಟೀಕಿಸಿದ್ದರು. ಆದರೆ ಅದೇ ಚರಕದ ಮೂಲಕ ಅವರು ಸ್ವದೇಶಿ ವಸ್ತುಗಳ ಬಳಕೆಯನ್ನು ಪ್ರೋತ್ಸಾಹಿಸಿದರು. ಅವರ ಚಿಂತನೆಗಳು ಸಂಪೂರ್ಣ ಸ್ವದೇಶದಾಗಿದ್ದವು ಎಂದು ಹೇಳಿದರು. ಉಪನ್ಯಾಸದಲ್ಲಿ ಆರೆಸ್ಸೆಸ್ ಕ್ಷೇತ್ರೀಯ ಸಹಕಾರ್ಯವಾಹ ಎನ್. ತಿಪ್ಪೇಸ್ವಾಮಿ, ಪ್ರಾಂತ ಕಾರ್ಯವಾಹ ಡಾ.ಜಯಪ್ರಕಾಶ್, ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎನ್. ದಿನೇಶ್ ಹೆಗ್ಡೆ ಸೇರಿ ಪ್ರಮುಖರಿದ್ದರು.

‘ಮಿಥಿಕ್ ಸೊಸೈಟಿಯಲ್ಲಿ ಗಾಂಧಿ’

ಗಾಂಧೀಜಿ ಅವರು 1927ರಲ್ಲಿ ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಭಾಷಣ ಮಾಡಿದ್ದರು. ಮಿಥಿಕ್ ಸೊಸೈಟಿ ಕಾರ್ಯಕ್ರಮಗಳಲ್ಲಿ ವಿದ್ವಾಂಸರೆ ಹೆಚ್ಚಾಗಿ ಭಾಗವಹಿಸುತ್ತಿದ್ದರು. ಅವರ ಮೂಲಕವೇ ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರುವ ಉದ್ದೇಶವನ್ನು ಗಾಂಧೀಜಿ ಹೊಂದಿದ್ದು ಎಂದು ವಿ. ನಾಗರಾಜ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X