Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೂ ಕಿಯ ಕೃತ್ಯಗಳು ವಿಷಾದನೀಯ, ಆದರೆ...

ಸೂ ಕಿಯ ಕೃತ್ಯಗಳು ವಿಷಾದನೀಯ, ಆದರೆ ಪ್ರಶಸ್ತಿ ವಾಪಸ್ ಪಡೆಯುವುದಿಲ್ಲ: ನೊಬೆಲ್ ಪ್ರತಿಷ್ಠಾನ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ2 Oct 2018 10:01 PM IST
share
ಸೂ ಕಿಯ ಕೃತ್ಯಗಳು ವಿಷಾದನೀಯ, ಆದರೆ ಪ್ರಶಸ್ತಿ ವಾಪಸ್ ಪಡೆಯುವುದಿಲ್ಲ: ನೊಬೆಲ್ ಪ್ರತಿಷ್ಠಾನ ಮುಖ್ಯಸ್ಥ

ಸ್ಟಾಕ್‌ಹೋಮ್ (ಸ್ವೀಡನ್), ಅ. 2: ಮ್ಯಾನ್ಮಾರ್‌ನ ನಾಗರಿಕ ಸರಕಾರದ ನಾಯಕಿಯಾಗಿ ಆಂಗ್ ಸಾನ್ ಸೂ ಕಿ ತೆಗೆದುಕೊಂಡಿರುವ ಕ್ರಮಗಳು 'ವಿಷಾದನೀಯ', ಆದರೆ ಅವರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದಿಲ್ಲ ಎಂದು ನೊಬೆಲ್ ಪ್ರತಿಷ್ಠಾನ ಮುಖ್ಯಸ್ಥ ಲಾರ್ಸ್ ಹೇಕಿನ್‌ಸ್ಟನ್ ಹೇಳಿದ್ದಾರೆ.

ಅವರು ಶುಕ್ರವಾರ ಸ್ಟಾಕ್‌ಹೋಮ್‌ನಲ್ಲಿ 'ರಾಯ್ಟರ್ಸ್' ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಪ್ರಶಸ್ತಿಗಳನ್ನು ವಿತರಿಸಿದ ಬಳಿಕ ಸಂಭವಿಸಿದ ವಿದ್ಯಮಾನಗಳಿಗೆ ಪ್ರತಿಕ್ರಿಯೆಯಾಗಿ ಪ್ರಶಸ್ತಿಗಳನ್ನು ಹಿಂದಕ್ಕೆ ಪಡೆಯುವುದರಲ್ಲಿ ಅರ್ಥವಿಲ್ಲ, ಆದರೆ, ಫಲಾನುಭವಿಗಳ ಅರ್ಹತೆ ಬಗ್ಗೆ ಆಯ್ಕೆಗಾರರು ನಿರಂತರವಾಗಿ ಚರ್ಚಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ರೊಹಿಂಗ್ಯಾ ಮುಸ್ಲಿಮರ 'ಜನಾಂಗೀಯ ಹತ್ಯೆ' ನಡೆಸುವ ಉದ್ದೇಶದಿಂದ ಮ್ಯಾನ್ಮಾರ್ ಸೇನೆಯು ಅವರ ವಿರುದ್ಧ ಬೃಹತ್ ದಮನ ಕಾರ್ಯಾಚರಣೆ ನಡೆಸಿದೆ ಎಂಬುದಾಗಿ ವಿಶ್ವಸಂಸ್ಥೆಯ ತನಿಖೆಗಾರರು ಆಗಸ್ಟ್‌ನಲ್ಲಿ ಸಲ್ಲಿಸಿದ ವರದಿಯಲ್ಲಿ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

ಸೇನೆಯ ದಮನ ಕಾರ್ಯಾಚರಣೆಗೆ ಬೆದರಿ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವಕ್ಕಾಗಿ ನಡೆಸಿದ ಚಳವಳಿಗಾಗಿ 1991ರಲ್ಲಿ ಸೂ ಕಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿತ್ತು.

ಈಗ ಅವರು ಮ್ಯಾನ್ಮಾರ್‌ನ ನಾಗರಿಕ ಸರಕಾರದ ಮುಖ್ಯಸ್ಥೆಯಾಗಿದ್ದಾರೆ.

ಆದರೆ, ಅವರದೇ ದೇಶದ ನಾಗರಿಕರನ್ನು ರಕ್ಷಿಸಲು 'ನೈತಿಕ ಪ್ರಭಾವ'ವನ್ನು ಬಳಸಲು ಅವರು ವಿಫಲರಾಗಿದ್ದಾರೆ ಎಂಬುದಾಗಿ ವಿಶ್ವಸಂಸ್ಥೆಯ ವರದಿ ಆರೋಪಿಸಿದೆ.

''ಅವರು ಮ್ಯಾನ್ಮಾರ್‌ನಲ್ಲಿ ಏನು ಮಾಡುತ್ತಿದ್ದಾರೆ ಎನ್ನುವುದನ್ನು ನಾವು ನೋಡುತ್ತಿದ್ದೇವೆ. ಇದರ ಬಗ್ಗೆ ಅವರನ್ನು ಹಲವು ಬಾರಿ ಪ್ರಶ್ನಿಸಲಾಗಿದೆ. ನಾವು ಮಾನವಹಕ್ಕುಗಳ ಪರವಾಗಿ ನಿಲ್ಲುತ್ತೇವೆ. ಅದು ನಮ್ಮ ಮಹತ್ವದ ಮೌಲ್ಯಗಳ ಪೈಕಿ ಒಂದು'' ಲಾರ್ಸ್ ಹೇಕಿನ್‌ಸ್ಟನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X