Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾಪೂಜಿಯವರನ್ನು ಪೂಜಿಸುವುದು ಅವರವರ...

ಬಾಪೂಜಿಯವರನ್ನು ಪೂಜಿಸುವುದು ಅವರವರ ಇಷ್ಟ: ಸುಮಿತ್ರ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ2 Oct 2018 10:50 PM IST
share

ಕುಲಕರ್ಣಿ ಬೆಂಗಳೂರು, ಅ. 2: ದೇಶದ ಆಸ್ತಿಯಾದ ಬಾಪೂಜಿಯವರನ್ನು ಪೂಜಿಸುವುದು ಅವರವರ ಇಷ್ಟಕ್ಕೆ ಬಿಟ್ಟ ವಿಚಾರವೆಂದು ಗಾಂಧೀಜಿಯವರ ಮೂರನೆ ಪುತ್ರ ರಾಮದಾಸ್ ಗಾಂಧಿಯವರ ಪುತ್ರಿ ಸುಮಿತ್ರ ಗಾಂಧಿ ಕುಲಕರ್ಣಿ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಪ್ರೆಸ್‌ಕ್ಲಬ್ ಆವರಣದಲ್ಲಿ ಗಿಡ ನೆಡುವ ಮೂಲಕ ಗಾಂಧೀಜಿಯವರ 150ನೆ ಜಯಂತಿಗೆ ಚಾಲನೆ ನೀಡಿ, ಹಸಿರು ಉಳಿಸಿ ಬೆಳೆಸಬೇಕೆಂಬ ಸಂದೇಶ ಸಾರುವ ಮೂಲಕ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಗಾಂಧಿಯನ್ನು ಪೂಜಿಸುವುದು ಅವರವರ ಇಷ್ಟಕ್ಕೆ ಸಂಬಂಧಿಸಿದ್ದು, ನಾನು-ನೀವು ಹೇಳಿದರೆ ಪೂಜಿಸಬೇಕೆಂದೇನು ಇಲ್ಲ, ಅವರವರ ಭಾವಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.

ಬಾಪೂಜಿ ತಮ್ಮ ಜೀವಿತ ಅವಧಿಯಲ್ಲಿ ದೇಶದ ಒಳಿತಿಗೆ ಅನೇಕ ಮಾರ್ಗದರ್ಶನ ನೀಡಿದ್ದಾರೆ. ಮಹಾತ್ಮರ ಮರಣ ನಂತರ ಅಧಿಕಾರಕ್ಕೆ ಬಂದಿರುವವರು ಅವರವರದೇ ರೀತಿಯಲ್ಲಿ ಚಿಂತಿಸಿದರೆ ಅದಕ್ಕೆ ಅಚ್ಚರಿ ಪಡುವ ಅವಶ್ಯಕತೆ ಇಲ್ಲ. ಅಲ್ಲದೆ, ಯುವಕರು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಬಾಪೂಜಿ ಸತ್ಯ ಹಾಗೂ ಆದರ್ಶಗಳ ಪ್ರತಿರೂಪ. ಅವರು ಕುಟುಂಬಕ್ಕೆ ಸೀಮಿತರಲ್ಲ, ರಾಷ್ಟ್ರಕ್ಕೆ ಸಮರ್ಪಿತರು. ನೇರ ನಡೆನುಡಿ, ಸ್ವನಿರ್ಧಾರ, ಮನಸ್ಥಿತಿಯ ಹಿಡಿತದ ಪರಿಸ್ಥಿತಿಯನ್ನು ಸುಧಾರಿಸುವ ಧೈರ್ಯ ಇದ್ದರೆ ಬದುಕು ಸುಲಭ. ಅದೇ ರೀತಿ ಅಹಿಂಸೆ ಕೂಡಾ ಅಷ್ಟೇ ಸಹಜವಾದದ್ದು. ಸತ್ಯದ ಹಾದಿಯಲ್ಲಿ ನಡೆದರೆ ಅಹಿಂಸೆಯ ಪಾಲನೆಯನ್ನು ನಿಭಾಯಿಸಲು ಕಷ್ಟವಿಲ್ಲ. ತಾತ ಇಂದು ನಮ್ಮಿಂದಿಗಿಲ್ಲದಿದ್ದರೂ ಅವರ ಆದರ್ಶಗಳು ನಮ್ಮ ಹೃಯದಲ್ಲಿ ಸದಾ ಹಸಿರಾಗಿದೆ ಎಂದರು. ಸತ್ಯ ಹಾಗೂ ಅಹಿಂಸೆಯನ್ನು ಅಳವಡಿಸಿಕೊಳ್ಳುವುದು ಕಷ್ಟ ಎನ್ನುವವರಿದ್ದಾರೆ. ಆದರೆ ಅದೇ ಜೀವನದ ಅವಿಭಾಜ್ಯ ಅಂಗವಾದಾಗ ಖಂಡಿತಾ ಕಷ್ಟವಾಗಲಾರದು. ಸತ್ಯ ಹೇಳಲು ಯಾವುದೇ ತೊಂದರೆಯಿಲ್ಲ. ಸುಳ್ಳಾದರೆ ಉದ್ವೇಗದಿಂದ ತಡವರಿಸುವ ಮಾತುಗಳೇ ಸಾಕ್ಷಿಯಾಗುತ್ತದೆ ಎಂದರು.

ಕುಟುಂಬಕ್ಕೆ ಸೀಮಿತರಲ್ಲ ಬಾಪೂ: ರಾಹುಲ್ ಗಾಂಧಿಯವರು ಹೋದೆಡೆಯಲ್ಲ ಬಾಪೂಜಿಯವರ ಹೆಸರನ್ನು ಬಳಸುತ್ತಾರಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ದೇಶಕ್ಕೆ ಸಲ್ಲುವ ಮಹಾನ್ ಚೇತನ, ಆದ್ದರಿಂದ ಬಾಪೂಜಿ ಹೆಸರು ಬಳಸಿಕೊಂಡಿರುವುದಕ್ಕೆ ಆಶ್ಚರ್ಯ ಪಡಬೇಕಿಲ್ಲ ಎಂದರು.

ನಿಜಕ್ಕೂ ಬೆಂಗಳೂರಿಗರ ಪ್ರೀತಿಗೆ ಧನ್ಯವಾದ. ಬಾಪೂಜಿಯ ಆಚರಣೆಗೆ ನೀವೆಲ್ಲ ಇಲ್ಲಿ ಸೇರಿರುವುದು ಅತ್ಯಂತ ಖುಷಿ ವಿಷಯ. ನಿಮ್ಮೊಂದಿಗೆ ಬೆರೆಯಲೂ ಅವಕಾಶ ಕಲ್ಪಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿ, ಸ್ವತಃ ಅವರೆ ನೆರೆದಿದ್ದ ಮಾಧ್ಯಮ ಮಿತ್ರರಿಗೆ ಸಿಹಿ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಗಾಂಧೀಜಿ ಕುಟುಂಬದ ರಾಚಪ್ಪ, ಪ್ರೆಸ್‌ಕ್ಲಬ್‌ನ ಅಧ್ತಕ್ಷ ಸದಾಶಿವ ಶೆಣೈ, ಕಾರ್ಯದರ್ಶಿ ಕಿರಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X