Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಧೀಶರ ವೇತನ, ನಿವೃತ್ತಿ ವಯಸ್ಸು...

ನ್ಯಾಯಾಧೀಶರ ವೇತನ, ನಿವೃತ್ತಿ ವಯಸ್ಸು ಹೆಚ್ಚಳ ಬೇಡಿಕೆಗೆ ಎಜಿ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ2 Oct 2018 11:18 PM IST
share
ನ್ಯಾಯಾಧೀಶರ ವೇತನ, ನಿವೃತ್ತಿ ವಯಸ್ಸು ಹೆಚ್ಚಳ ಬೇಡಿಕೆಗೆ ಎಜಿ ಬೆಂಬಲ

ಹೊಸದಿಲ್ಲಿ, ಅ.2: ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62ರಿಂದ 65 ವರ್ಷಕ್ಕೆ ಹೆಚ್ಚಿಸಬೇಕೆಂಬ ಒತ್ತಾಯಕ್ಕೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಬೆಂಬಲ ಸೂಚಿಸಿದ್ದಾರೆ.

ನಿರ್ಗಮನ ಸಿಜೆಐ ದೀಪಕ್ ಮಿಶ್ರಾ ಅವರ ಗೌರವಾರ್ಥ ಸೋಮವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನ್ಯಾಯಾಧೀಶರಿಗೆ ಈಗ ನೀಡುತ್ತಿರುವ ವೇತನ ವಕೀಲರ ತಿಂಗಳ ಸರಾಸರಿ ಸಂಪಾದನೆಗಿಂತಲೂ ಕಡಿಮೆಯಿದೆ. ಆದ್ದರಿಂದ ವೇತನವನ್ನು 2ರಿಂದ 3 ಪಟ್ಟು ಹೆಚ್ಚಿಸಬೇಕು ಎಂದರು. ನಿವೃತ್ತರಾದ ಬಳಿಕ ನ್ಯಾಯಾಧೀಶರು ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳಬಾರದು ಎಂಬ ವಾದಕ್ಕೆ ತಮ್ಮ ಸಹಮತವಿಲ್ಲ. ನ್ಯಾಯಾಧೀಶರ ಅನುಭವ ವ್ಯರ್ಥವಾಗಬಾರದು ಎಂದು ವೇಣುಗೋಪಾಲ್ ಹೇಳಿದರು.

ಭಾರತದಲ್ಲಿ ಸರಾಸರಿ ಜೀವಿತಾವಧಿ 73 ವರ್ಷವಾಗಿದೆ. ಹೀಗಿರುವಾಗ ಹೈಕೋರ್ಟ್ ನ್ಯಾಯಾಧೀಶರು 62 ವರ್ಷಕ್ಕೆ ಹಾಗೂ ಸುಪ್ರೀಂಕೋರ್ಟ್ ನ್ಯಾಯಾಧೀಶರು 65ಕ್ಕೆ ನಿವೃತ್ತರಾಗಿ ಬಳಿಕ ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳದೆ ನಿಷ್ಕ್ರಿಯರಾಗಿರಬೇಕೇ. ಸುಪ್ರೀಂಕೋರ್ಟ್‌ನ ಆವರಣದಲ್ಲಿ ಓಡಾಡುವ ವಕೀಲರನ್ನೇ ಗಮನಿಸಿ. ಇವರಲ್ಲಿ ಹೆಚ್ಚಿನವರು 62 ಅಥವಾ 65 ವರ್ಷ ಮೀರಿದವರು ಆಗಿದ್ದಾರೆ. 65 ವರ್ಷ ದಾಟಿದ ವಕೀಲರು ವಾದ ಮಂಡಿಸಲು ಸಾಧ್ಯವಾಗುವುದಾದರೆ ನ್ಯಾಯಾಧೀಶರಿಗೆ ಯಾಕೆ ಇದು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಪ್ರಶ್ನಿಸಿದರು.

ಕಳೆದ ಕೆಲ ತಿಂಗಳಲ್ಲಿ ಸಿಜೆಐ ದಾಖಲೆ ಪ್ರಮಾಣದಲ್ಲಿ ತೀರ್ಪು ನೀಡಿರುವುದನ್ನು ಉಲ್ಲೇಖಿಸಿದ ಅವರು, ಹಲವು ಬಾರಿ ಲಿಂಗ ನ್ಯಾಯದ ಕುರಿತ ಪ್ರಕರಣಗಳನ್ನು ಅವರು ನಿರ್ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಪತ್ರಿಕೆಗಳಲ್ಲಿ ಅವರನ್ನು ಲಿಂಗಯೋಧ ಎಂದು ಹೆಸರಿಸಲಾಗಿತ್ತು ಎಂದು ವಿನೋದವಾಗಿ ನುಡಿದರು. ದೇಶದಲ್ಲಿ ಈಗಿರುವ ನ್ಯಾಯನಿರ್ಣಯ ಪ್ರಕ್ರಿಯೆ ಸುದೀರ್ಘಾವಧಿಯದ್ದಾಗಿದೆ. ವಿಚಾರಣಾ ನ್ಯಾಯಾಲಯದಲ್ಲಿ 10 ವರ್ಷ, ಹೈಕೋರ್ಟ್‌ನಲ್ಲಿ 10 ವರ್ಷ, ಸುಪ್ರೀಂಕೋರ್ಟ್‌ನಲ್ಲಿ 10 ವರ್ಷ- ಹೀಗೆ ಪ್ರಕರಣವೊಂದು ಇತ್ಯರ್ಥವಾಗಬೇಕಿದ್ದರೆ 30 ವರ್ಷ ಬೇಕಾಗುತ್ತದೆ. ಆಗ ನ್ಯಾಯಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿ ಬದುಕಿರುವ ಸಾಧ್ಯತೆಯೂ ಕಡಿಮೆ ಇರುತ್ತದೆ. ಸರಕಾರ ಮತ್ತು ನ್ಯಾಯಾಧೀಶರು ಸಭೆ ನಡೆಸಿ, ವಿಚಾರವಿಮರ್ಶೆ ನಡೆಸಿ ಕ್ಷಿಪ್ರ ನ್ಯಾಯತೀರ್ಮಾನದ ವ್ಯವಸ್ಥೆ ರೂಪಿಸಬೇಕು ಎಂದು ವೇಣುಗೋಪಾಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X