Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಂಟಾಲ್‌ಕಟ್ಟೆ ಯುವಕನ ಕೊಲೆಯತ್ನ ಪ್ರಕರಣ:...

ಗಂಟಾಲ್‌ಕಟ್ಟೆ ಯುವಕನ ಕೊಲೆಯತ್ನ ಪ್ರಕರಣ: ಮೂವರು ಆರೋಪಿಗಳು ಸೆರೆ

ವಾರ್ತಾಭಾರತಿವಾರ್ತಾಭಾರತಿ3 Oct 2018 10:08 PM IST
share
ಗಂಟಾಲ್‌ಕಟ್ಟೆ ಯುವಕನ ಕೊಲೆಯತ್ನ ಪ್ರಕರಣ: ಮೂವರು ಆರೋಪಿಗಳು ಸೆರೆ

ಮಂಗಳೂರು, ಅ.3: ಗಂಟಾಲ್‌ಕಟ್ಟೆ ಯುವಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ತೋಕೂರು ಕೋಡಿಕೆರೆ ನಿವಾಸಿ ಧನರಾಜ್ ಪೂಜಾರಿ ಯಾನೆ ಧನು (25), ಹಳೆಯಂಗಡಿಯ ಶಶಿಹಿತ್ಲು ನಿವಾಸಿ ದಿನೇಶ ಪೂಜಾರಿ (38), ಸುರತ್ಕಲ್‌ನ ಹೊನ್ನಕಟ್ಟೆ ಕುಳಾಯಿ ನಿವಾಸಿ ಶಾಶ್ವತ್ ಶೆಟ್ಟಿ ಯಾನೆ ಶಾಶ್ವತ್ (23) ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆ ವಿವರ

ಸೆ. 24ರಂದು ಕರಿಂಜೆ ಗ್ರಾಮದ ಗಂಟಾಲ್‌ಕಟ್ಟೆ ನಿವಾಸಿ ಮುಹಮ್ಮದ್ ಇಮ್ತಿಯಾಝ್ (32) ಎಂಬವರು ಮಸೀದಿಯ ಕಟ್ಟಡದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದು, ಎಂದಿನಂತೆ ಸೋಮವಾರ ಬೆಳಗ್ಗೆ ಅವರು ಹೊಟೇಲ್‌ನಲ್ಲಿದ್ದ ಸಂದರ್ಭ ಹೊಸಂಗಡಿ ಕಡೆಯಿಂದ ಕಾರಿನಲ್ಲಿ ಬಂದ ನಾಲ್ಕೈದು ಮಂದಿಯ ತಂಡ ಮಾರಕಾ ಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಇಮ್ತಿಯಾಝ್‌ರ ತಲೆ, ಕೈ ಹಾಗೂ ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಇಮ್ತಿಯಾಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಇಮ್ತಿಯಾಝ್ ಮೇಲೆ ನಡೆದ ದಾಳಿಯನ್ನು ತಡೆಯಲು ಯತ್ನಿಸಿದ ಹೊಟೇಲ್ ಸಿಬ್ಬಂದಿ ಇಬ್ರಾಹೀಂ (23) ಮೇಲೂ ತಂಡ ದಾಳಿ ನಡೆಸಿತ್ತು. ಇದರಿಂದ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪತ್ತೆ ಕಾರ್ಯಕ್ಕೆ ಮೂರು ತಂಡ ರಚನೆ

ಈ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯಕ್ಕೆ ಮೂರು ತಂಡಗಳನ್ನು ರಚಿಸಿಸಲಾಗಿತ್ತು. ಇದರಲ್ಲಿ ಮೂಡುಬಿದಿರೆ ಪೊಲೀಸರು, ಮಂಗಳೂರು ಸಿಸಿಬಿ ಮತ್ತು ಮಂಗಳೂರು ನಗರ ಉತ್ತರ ಉಪವಿಭಾಗ ಪಣಂಬೂರು ರೌಡಿ ನಿಗ್ರಹ ದಳದವರು ಆರೋಪಿಗಳ ಪತ್ತೆಗೆ ಶ್ರಮಿಸಿದ್ದಾರೆ.

ಹಲವು ಪ್ರಕರಣ

ಆರೋಪಿ ಧನರಾಜ್ ಯಾನೆ ಧನು ಎಂಬಾತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲೆ ಕೊಲೆಯತ್ನ ಪ್ರಕರಣ ಮತ್ತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ಅವಹೇಳಕಾರಿ ಪೋಸ್ಟ್ ಬಗ್ಗೆ ಪ್ರಕರಣ ದಾಖಲಾಗಿವೆ. ಆರೋಪಿ ದಿನೇಶ್ ಪೂಜಾರಿ ಯಾನೆ ದಿನ್ನು ವಿರುದ್ಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಆದೇಶದಂತೆ ಉಪಪೊಲೀಸ್ ಆಯುಕ್ತೆ ಉಮಾ ಪ್ರಶಾಂತ ನಿರ್ದೇಶನದಂತೆ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಜೇಂದ್ರ ಡಿ.ಎಸ್. ಮಾರ್ಗದರ್ಶನದಂತೆ ಪಣಂಬೂರು ರೌಡಿ ನಿಗ್ರಹದಳದ ಪೊಲೀಸ್ ನಿರೀಕ್ಷಕ ರಫೀಕ್ ಮತ್ತು ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಸಿಬ್ಬಂದಿ, ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಮ ಹಾಗೂ ಅವರ ಸಿಬ್ಬಂದಿ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಮಚಂದ್ರ ಕೆ. ನಾಯಕ್ ಮತ್ತು ರೌಡಿ ನಿಗ್ರಹ ದಳದ ಅಧಿಕಾರಿ ಸಿಬ್ಬಂ ಎಎಸ್ಸೈ ಮುಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ. ವಿಜಯ ಕಾಂಚನ್, ಇಸಾಕ್ ಅಹ್ಮದ್, ರಾಧಾಕೃಷ್ಣ, ಶರಣ್ ಕಾಳಿ, ಶೈಲೇಂದ್ರ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X