Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಸಚಿವರಿಗೆ ಡಿಕೆ ಶಿವಕುಮಾರ್...

ಕಾಂಗ್ರೆಸ್ ಸಚಿವರಿಗೆ ಡಿಕೆ ಶಿವಕುಮಾರ್ ಆತಿಥ್ಯ

ವಾರ್ತಾಭಾರತಿವಾರ್ತಾಭಾರತಿ4 Oct 2018 9:55 PM IST
share
ಕಾಂಗ್ರೆಸ್ ಸಚಿವರಿಗೆ ಡಿಕೆ ಶಿವಕುಮಾರ್ ಆತಿಥ್ಯ

ಬೆಂಗಳೂರು, ಅ. 4: ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಗೆ ಸಿಎಂ ಕುಮಾರಸ್ವಾಮಿ ಮುಂದಾಗಿರುವ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಸಚಿವರಿಗೆ ಉಪಾಹಾರ ಕೂಟ ಏರ್ಪಡಿಸಿ ರಾಜಕೀಯ ಕುತೂಹಲ ಸೃಷ್ಟಿಸಿದ್ದಾರೆ.

ಗುರುವಾರ ಬೆಳಗ್ಗೆ ಇಲ್ಲಿನ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರಕಾರಿ ಬಂಗಲೆಯಲ್ಲಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರಿಗೂ ಉಪಾಹಾರ ಕೂಟ ಆಯೋಜಿಸಿದ್ದರು. ಲೋಕಸಭೆ ಚುನಾವಣೆ, ಚುನಾವಣಾ ಪೂರ್ವ ಮೈತ್ರಿ, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸಂಬಂಧ ಸಮಾಲೋಚನೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳ ಹೊಸದಿಲ್ಲಿ ಮಟ್ಟದಲ್ಲಿ ಹಾಗೂ ಪ್ರಮುಖ ಮುಖಂಡ ಮನೆ ಬಾಲಿಗಿಗೆ ಎಡತಾಕುತ್ತಿದ್ದಾರೆ. ಈ ಮಧ್ಯೆಯೇ ಉಪಾಹಾರ ಕೂಟ ನಡೆಸಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾವುದೇ ಸಚಿವರು ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸೂಚನೆ ನೀಡಲಾಗಿದೆ ಎಂದು ಗೊತ್ತಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರತುಪಡಿಸಿ ಉಳಿದ ಎಲ್ಲ ಸಚಿವರು ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದರು.

ಅವರ ಸೂಚನೆ ಮೇರೆಗೆ ಔತಣ: ಮಾಜಿ ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಉಪಾಹಾರ ಕೂಟ ನಡೆಸಿದ್ದು, ಕಾಲಕಾಲಕ್ಕೆ ಪ್ರತಿಯೊಬ್ಬ ಸಚಿವರ ಮನೆಯಲ್ಲೂ ಔತಣಕೂಟ ನಡೆಸುವಂತೆ ಅವರೇ ಹೇಳಿದ್ದಾರೆ. ಈ ಮೊದಲು ಡಿಸಿಎಂ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದಿತ್ತು ಎಂದು ಶಿವಕುಮಾರ್ ತಿಳಿಸಿದರು.

ಇದೀಗ ನನ್ನ ಮನೆಯಲ್ಲಿ ನಡೆದಿದೆ. ಮುಂದೆ ಸಚಿವ ಆರ್.ವಿ.ದೇಶಪಾಂಡೆ ಅವರ ಮನೆಯಲ್ಲಿ ನಡೆಯಲಿದೆ. ಇದನ್ನು ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಮಾಡಿದ್ದೇವೆ. ಇದನ್ನೇ ಪ್ರತ್ಯೇಕತೆ ಎಂದು ಯಾರೂ ಭಾವಿಸಬಾರದು ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ವೆಂಕಟರಮಣಪ್ಪ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣ ಭೈರೇಗೌಡ, ಝಮೀರ್ ಅಹ್ಮದ್ ಖಾನ್, ಜಯಮಾಲಾ ಸೇರಿದಂತೆ 14 ಮಂದಿ ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಂಸದ ಡಿ.ಕೆ.ಸುರೇಶ್, ಶಾಸಕ ತುಕಾರಾಮ್ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಬೆಳ್ಳಿ ತಟ್ಟೆ-ಬೆಳ್ಳಿ ಲೋಟ

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಸಚಿವರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಬೆಳ್ಳಿ ತಟ್ಟೆ, ಬೆಳ್ಳಿ ಲೋಟಗಳನ್ನ ಬಳಸಲಾಗಿದೆ. ಎಲ್ಲ ಸಚಿವರು, ಶಾಸಕರಿಗೂ ಬೆಳ್ಳಿ ತಟ್ಟೆ, ಲೋಟಗಳಲ್ಲೇ ಉಪಚರಿಸಲಾಗಿದೆ. ಐಷಾರಾಮಿ ತಿಂಡಿ ತಿನಿಸುಗಳ ಜೊತೆಗೆ ಬೆಳ್ಳಿ ತಟ್ಟೆಗಳನ್ನೂ ಬಳಸಿರುವುದು ಸಾರ್ವಜನಿಕ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಗೂ ಮೈತ್ರಿ ಮುಂದುವರಿಕೆ

ಲೋಕಸಭೆ ಚುನಾವಣೆಗೂ ಮುನ್ನವೇ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೆ ಮೈತ್ರಿ ಮಾಡಿಕೊಂಡರೂ, ಆ ಕ್ಷೇತ್ರಗಳ ಗೆಲುವಿಗೆ ಶ್ರಮಿಸಬೇಕು. ರಾಮನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು, ಜಮಖಂಡಿ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಳ್ಳುವುದು ಎಂಬ ನಿರ್ಧಾರವಾಗಿದೆ. ಇನ್ನು ಲೋಕಸಭೆಯಲ್ಲಿ ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಲಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನ ಮಾಡಲಾಗಿದೆ. ಜಮಖಂಡಿ, ಶಿವಮೊಗ್ಗದಲ್ಲಿ ಜೆಡಿಎಸ್ ಪ್ರಭಾವಿ ಅಲ್ಲದಿದ್ದರೂ ಮೈತ್ರಿ ಧರ್ಮ ಪಾಲನೆಯಲ್ಲಿ ಹೊಂದಾಣಿಕೆ ಅನಿವಾರ್ಯ.

-ಡಾ.ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X