Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದಿಂದ ಶಸ್ತ್ರ ಖರೀದಿಸಿದರೆ...

ರಶ್ಯದಿಂದ ಶಸ್ತ್ರ ಖರೀದಿಸಿದರೆ ದಿಗ್ಬಂಧನ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ4 Oct 2018 10:45 PM IST
share
ರಶ್ಯದಿಂದ ಶಸ್ತ್ರ ಖರೀದಿಸಿದರೆ ದಿಗ್ಬಂಧನ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ವಾಶಿಂಗ್ಟನ್, ಅ. 4: ರಶ್ಯದ ಎಸ್-400 ವಾಯು ಮತ್ತು ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಆ ದೇಶದಿಂದ ಸೇನಾ ಸಾಮಗ್ರಿಗಳನ್ನು ಖರೀದಿಸುವ ದೇಶಗಳು ಪರೋಕ್ಷ ಆರ್ಥಿಕ ದಿಗ್ಬಂಧನಗಳನ್ನು ಬೇಡುತ್ತವೆ ಎಂದು ಅಮೆರಿಕ ಎಚ್ಚರಿಸಿದೆ.

ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗುರುವಾರ ಭಾರತ ಪ್ರವಾಸ ಆರಂಭಿಸಲಿದ್ದು, ಭಾರತದೊಂದಿಗೆ 5 ಬಿಲಿಯ ಡಾಲರ್ (ಸುಮಾರು 36,800 ಕೋಟಿ ರೂಪಾಯಿ)ಗೂ ಅಧಿಕ ಮೊತ್ತದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ.

ಅಮೆರಿಕ ಇತ್ತೀಚೆಗೆ ಅಂಗೀಕರಿಸಿರುವ ‘ಅಮೆರಿಕದ ವಿರೋಧಿಗಳನ್ನು ದಿಗ್ಬಂಧನದ ಮೂಲಕ ಎದುರಿಸುವ ಕಾಯ್ದೆ’ (ಸಿಎಎಟಿಎ)ಯಡಿಯಲ್ಲಿ ರಶ್ಯದ ವಿರುದ್ಧ ವ್ಯವಹಾರ ಮಾಡುವ ದೇಶಗಳ ವಿರುದ್ಧ ದಿಗ್ಬಂಧನಗಳನ್ನು ವಿಧಿಸಲು ಅದಕ್ಕೆ ಅವಕಾಶವಿದೆ.

2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ನಡೆಸಿದೆಯೆನ್ನಲಾದ ಹಸ್ತಕ್ಷೇಪ, ಸಿರಿಯ ಸಂಘರ್ಷದಲ್ಲಿ ಅದು ವಹಿಸುತ್ತಿರುವ ಪಾತ್ರ ಮತ್ತು ಯುಕ್ರೇನ್ ಭಾಗವಾಗಿದ್ದ ಕ್ರೈಮಿಯ ಪ್ರಾಂತವನ್ನು ರಶ್ಯಕ್ಕೆ ಸೇರಿಸಿರುವುದಕ್ಕಾಗಿ ರಶ್ಯವನ್ನು ಶಿಕ್ಷಿಸಲು ಅಮೆರಿಕ ಈ ಕಾಯ್ದೆಯನ್ನು ಅಂಗೀಕರಿಸಿರುವುದನ್ನು ಸ್ಮರಿಸಬಹುದಾಗಿದೆ.

 ರಶ್ಯ ಅಧ್ಯಕ್ಷರ ಭಾರತ ಭೇಟಿಯ ವೇಳೆ ಐದು ಎಸ್-400 ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲು ಭಾರತ ಉದ್ದೇಶಿಸಿತ್ತು ಎನ್ನಲಾಗಿದೆ. ಆದರೆ, ಅಮೆರಿಕದ ಈ ಬೆದರಿಕೆಯು ಭಾರತವನ್ನು ಗೊಂದಲದಲ್ಲಿ ಸಿಲುಕಿಸಲಿದೆ.

‘‘ರಶ್ಯದೊಂದಿಗೆ ವ್ಯವಹಾರ ಮಾಡದಂತೆ ನಮ್ಮ ಎಲ್ಲ ಮಿತ್ರರು ಮತ್ತು ಭಾಗೀದಾರರನ್ನು ನಾವು ಒತ್ತಾಯಿಸುತ್ತೇವೆ. ಅದು ಸಿಎಎಟಿಎ ಕಾಯ್ದೆಯಡಿ ಆರ್ಥಿಕ ದಿಗ್ಬಂಧನಗಳಿಗೆ ಕಾರಣವಾಗುತ್ತದೆ’’ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ತಿಳಿಸಿದರು.

ದಿಗ್ಬಂಧನ ವಿನಾಯಿತಿಗೂ ಅವಕಾಶ

ಆದಾಗ್ಯೂ, ರಶ್ಯದೊಂದಿಗೆ ಮಾಡಿಕೊಳ್ಳುವ ಒಪ್ಪಂದವು ಅಮೆರಿಕ ಮತ್ತು ಅದರ ಮಿತ್ರದೇಶಗಳಿಗೆ ಬೆದರಿಕೆಯಲ್ಲದಿದ್ದರೆ ಹಾಗೂ ಖರೀದಿದಾರ ದೇಶವು ರಶ್ಯದಿಂದ ಮಾಡಿಕೊಳ್ಳುವ ಶಸ್ತ್ರಾಸ್ತ್ರ ಆಮದನ್ನು ಹಾಗೂ ರಶ್ಯದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿರುವುದಕ್ಕೆ ಪುರಾವೆಗಳಿದ್ದರೆ, ಅಮೆರಿಕದ ಅಧ್ಯಕ್ಷರು ಆ ದೇಶಗಳಿಗೆ ದಿಗ್ಬಂಧನದಿಂದ ವಿನಾಯಿತಿ ನೀಡಬಹುದಾಗಿದೆ.

ವಿನಾಯಿತಿಗೆ ಅಮೆರಿಕ ಕಾಂಗ್ರೆಸ್ ಅನುಮೋದನೆ ನೀಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X