Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವ ಹಕ್ಕುಗಳನ್ನು ಕಸಿಯುವ ಹಕ್ಕು...

ಮಾನವ ಹಕ್ಕುಗಳನ್ನು ಕಸಿಯುವ ಹಕ್ಕು ಸಂಸತ್ತಿಗೂ ಇಲ್ಲ: ಪ್ರೊ.ರವಿವರ್ಮ ಕುಮಾರ್

ವಾರ್ತಾಭಾರತಿವಾರ್ತಾಭಾರತಿ5 Oct 2018 7:51 PM IST
share
ಮಾನವ ಹಕ್ಕುಗಳನ್ನು ಕಸಿಯುವ ಹಕ್ಕು ಸಂಸತ್ತಿಗೂ ಇಲ್ಲ: ಪ್ರೊ.ರವಿವರ್ಮ ಕುಮಾರ್

ಬೆಂಗಳೂರು, ಅ.5: ಮಾನವ ಹಕ್ಕುಗಳ ಪ್ರಭಾವ ನಮ್ಮ ಸಂವಿಧಾನದ ಮೇಲಿದೆ. ಸಂಸತ್ತಿಗೂ ಮಾನವ ಹಕ್ಕುಗಳನ್ನು ಕಸಿದುಕೊಳ್ಳುವ ಅವಕಾಶವಿಲ್ಲ ಎಂದು ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಾಕುಮಾರ್ ಅಭಿಪ್ರಾಯಪಟ್ಟರು.

ಶುಕ್ರವಾರ ‘ಸಂವಾದ’ ಹಾಗೂ ಬದುಕು ಕಮ್ಯುನಿಟಿ ಕಾಲೇಜು ವತಿಯಿಂದ ನಗರದ ದಿ ಯುನೈಟೆಡ್ ಥಿಯಲಾಜಿಕಲ್ ಕಾಲೇಜಿನಲ್ಲಿ ಏರ್ಪಡಿಸಿದ್ದ ‘ಯುವಜನರ ಹಕ್ಕುಗಳು’ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾನವ ಹಕ್ಕುಗಳ ಇತಿಹಾಸ ಮತ್ತು ಯುವಜನರ ಹಕ್ಕುಗಳ ಅಗತ್ಯ’ ಕುರಿತಂತೆ ಅವರು ಮಾತನಾಡಿದರು.

ಸಮಾಜದಲ್ಲಿ ವ್ಯಕ್ತಿಯ ಗೌರವದೊಂದಿಗೆ ಆತನ ಹಕ್ಕುಗಳು ಕೂಡ ಜಾತಿಗೆ ಅನುಗುಣವಾಗಿ ಏರಿಳಿಕೆಯ ಕ್ರಮದಲ್ಲಿರುತ್ತದೆ. ಹಿಟ್ಲರ್‌ನ ಕಾಲಘಟ್ಟದಲ್ಲಿ ವಿಜ್ಞಾನವೂ ಕೊಲ್ಲುವ ಆವಿಷ್ಕಾರದೊಂದಿಗೆ ಮಾನವ ಹಕ್ಕನ್ನು ಉಲ್ಲಂಘಿಸಿದೆ. ಇನ್ನೊಬ್ಬರ ಬದುಕನ್ನು ಕಸಿದುಕೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಾಮಾಜಿಕ ನ್ಯಾಯವೂ ಹಕ್ಕಿನ ಭಾಗವಾಗಿದೆ. ಯುವಜನರು ತಮ್ಮ ಹಕ್ಕುಗಳೊಂದಿಗೆ ಇತರರ ಹಕ್ಕುಗಳನ್ನು ದೊರಕಿಸಿಕೊಡುವಲ್ಲಿ ಮುಂದಾಗಬೇಕು ಎಂದು ನುಡಿದರು.

‘ಮಕ್ಕಳಿಗೆ ವಿಶೇಷ ಹಕ್ಕುಗಳು ಏಕೆ ಬೇಕು?’ ವಿಷಯ ಕುರಿತು ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ನೀನಾ ನಾಯಕ್, ನಮ್ಮಲ್ಲಿ ಅನೇಕ ಕಾಯ್ದೆ, ಕಾನೂನುಗಳಿದ್ದರೂ ಕಡತಗಳಿಗೆ ಮಾತ್ರ ಸೀಮಿತವಾಗಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣಕ್ಕಾಗಿರುವ ಪೋಕ್ಸೋ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳಿದ್ದರೂ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿಲ್ಲ. ಇದರಿಂದ ಇರುವ ಹಕ್ಕುಗಳನ್ನು ಯುವಜನರಿಗೆ ಬಳಸಲಾಗುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳು ಅಂಗನವಾಡಿ, ಶಾಲೆಗಳಲ್ಲೇ ಅತಿಯಾಗಿ ಉಲ್ಲಂಘನೆಯಾಗುತ್ತಿದೆ. ಸರಕಾರ ಗುಣಮಟ್ಟದ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದರೂ ಶಿಕ್ಷಣ ವ್ಯವಸ್ಥೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ? ಹಕ್ಕುಗಳು ಉಲ್ಲಂಘನೆಯಾದಾಗ ಪ್ರಶ್ನಿಸುವುದು ಅತ್ಯಗತ್ಯ. ಪ್ರತಿಯೊಬ್ಬರಲ್ಲೂ ಪ್ರಶ್ನಾರ್ಹ ಮನೋಭಾವ ಇರಬೇಕು. ಅನ್ಯಾಯ, ದೌರ್ಜನ್ಯ ವಿರುದ್ಧ ಪ್ರಶ್ನಿಸಿದಾಗಲಷ್ಟೇ ವ್ಯವಸ್ಥೆ ಎಚ್ಚರಗೊಳ್ಳುತ್ತದೆ. ಸಾಮಾಜಿಕ ಬದಲಾವಣೆ ಸಾಧ್ಯವಾಗಬೇಕಾದರೆ ಯುವಜನರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಸಂವಾದ ಸಂಸ್ಥೆಯ ನಿರ್ದೇಶಕಿ ಅನಿತಾ ರತ್ನಂ ಯುವಜನರ ಹಕ್ಕುಗಳಿಗೆ ಸಂಬಂಧಿಸಿದಂತೆ ವಿಷಯ ಮಂಡನೆ ಮಾಡಿದರು. ಹಾಗೂ ‘ಯುವಜನರ ಹಕ್ಕುಗಳು ಮತ್ತು ರಾಜ್ಯ’, ‘ಕುಟುಂಬ ಮತ್ತು ಸಮಾಜದಲ್ಲಿ ಯುಜನರ ಹಕ್ಕುಗಳು’ ವಿಷಯದ ಬಗ್ಗೆ ವಿಶೇಷ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬದುಕು ಕಾಲೇಜಿನ ಪ್ರಾಂಶುಪಾಲರಾದ ಮುರಳಿ ಮೋಹನ್ ಕಾಟಿ, ಸಂವಾದದ ದೇವರಾಜ್ ಪಾಟೀಲ್, ರಾಮಕ್ಕ, ಜನಾರ್ಧನ ಕೇಸರಗದ್ದೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದೇಶದಲ್ಲಿ ಚಾಲ್ತಿಯಲ್ಲಿರುವ ಎಸ್ಸಿ-ಎಸ್ಟಿ ಕಮಿಷನ್‌ಗಳಿಗೂ ಸಮಾಜದಲ್ಲಿ ಆಳವಾಗಿ ಬೇರೂರಿರುವ ಅಸ್ಪಶ್ಯತೆ ಹೋಗಲಾಡಿಸಲು ಸಾಧ್ಯವಾಗಿಲ್ಲ. ಜಾತಿ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳ ದಮನವಾಗುತ್ತಿದೆ. ಹಾಗಾಗಿ ಯಾವುದೇ ಸಂವಿಧಾನಬದ್ಧ ಹಕ್ಕುಗಳನ್ನು ಸಂಪೂರ್ಣವಾಗಿ ಅರಿತುಕೊಂಡರೆ ಮಾತ್ರ ಅವುಗಳ ರಕ್ಷಣೆ ಸಾಧ್ಯ.

- ಪ್ರೊ.ರವಿವರ್ಮಾಕುಮಾರ್, ಮಾಜಿ ಅಡ್ವೊಕೇಟ್ ಜನರಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X