Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಧೆಡೆ ಏಕಕಾಲಕ್ಕೆ ಎಸಿಬಿ ದಾಳಿ:...

ವಿವಿಧೆಡೆ ಏಕಕಾಲಕ್ಕೆ ಎಸಿಬಿ ದಾಳಿ: ನಗದು, ಕೋಟ್ಯಂತರ ರೂ. ಮೌಲ್ಯದ ದಾಖಲೆಗಳ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ5 Oct 2018 8:04 PM IST
share
ವಿವಿಧೆಡೆ ಏಕಕಾಲಕ್ಕೆ ಎಸಿಬಿ ದಾಳಿ: ನಗದು, ಕೋಟ್ಯಂತರ ರೂ. ಮೌಲ್ಯದ ದಾಖಲೆಗಳ ಜಪ್ತಿ

ಬೆಂಗಳೂರು, ಅ.5: ಆದಾಯಕ್ಕಿಂತ ಅಧಿಕ ಸಂಪತ್ತು ಗಳಿಕೆ ಆರೋಪ ಕೇಳಿಬಂದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿದಂತೆ 8 ಸ್ಥಳಗಳ ಮೇಲೆ ದಾಳಿ ನಡೆಸಿ ನಗದು ಹಾಗೂ ಕೋಟ್ಯಂತರ ಮೌಲ್ಯದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. 

ಶುಕ್ರವಾರ ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮ(ಕೆಐಎಡಿಬಿ)ದ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್.ಸ್ವಾಮಿ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಎಂಜಿನಿಯರ್ ಅಧಿಕಾರಿ ಎನ್.ಜಿ.ಗೌಡಯ್ಯ ಮನೆ ಮೇಲೆ ದಾಳಿ ನಡೆಸಿದ್ದಾರೆ.

ದಾಳಿ ಏಲ್ಲೆಲ್ಲಿ?: ಟಿ.ಆರ್.ಸ್ವಾಮಿಯ ಬೆಂಗಳೂರಿನ ಮಲ್ಲೇಶ್ವರದ ಗ್ರೀನ್ಸ್ ಅಪಾರ್ಟ್‌ಮೆಂಟ್, ಅವರ ಇಬ್ಬರು ಸಂಬಂಧಿಕರ ಮನೆ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎನ್.ಜಿ. ಗೌಡಯ್ಯರ ಬೆಂಗಳೂರಿನ ವಾಸದ ಮನೆ, ನಗರದ ಸಂಬಂಧಿಕರ ಮನೆ, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮನೆ ಹಾಗೂ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಕೋಟ್ಯಂತರ ನಗದು ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಚ್ಚಿಬಿದ್ದ ಎಸಿಬಿ: ಸ್ವಾಮಿ ಅವರ ಮನೆ ಮತ್ತು ಕಚೇರಿಯ ಮೇಲೆ 20ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ 2 ಸಾವಿರ ರೂ., 500 ರೂ. ಮತ್ತು 200 ರೂ. ಮುಖಬೆಲೆಯ 4.5 ಕೋಟಿಗೂ ಅಧಿಕ ನಗದು ಪತ್ತೆಯಾಗಿದ್ದು, ಎಸಿಬಿ ತನಿಖಾಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.

ಅಷ್ಟೇ ಅಲ್ಲದೆ, ಕೋಟ್ಯಂತರ ಮೌಲ್ಯದ ಮಹತ್ವದ ದಾಖಲೆಗಳು, 30 ಲಕ್ಷ ಬೆಲೆ ಬಾಳುವ ಕಾರು ಸೇರಿ ಒಟ್ಟು ಮೂರು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಮಂತ್ರಿಮಾಲ್ ಗ್ರೀನ್ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ನಲ್ಲಿದ್ದ ಓಮಿನಿ ಕಾರ್‌ನಲ್ಲಿ ರಾಶಿ, ರಾಶಿ ಕಡತಗಳು ಪತ್ತೆಯಾಗಿದ್ದು, ಇದರಲ್ಲಿ ಅಕ್ರಮ ದಾಖಲಾತಿಗಳನ್ನು ಅಡಗಿಸಿಟ್ಟಿರುವ ಶಂಕೆ ಎಸಿಬಿಗೆ ಬಂದಿದೆ.

ಎಲ್ಲರಿಗೂ ಅಪಾರ್ಟ್‌ಮೆಂಟ್: ಸ್ವಾಮಿ 1405 ಸಂಖ್ಯೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರೆ ಆತನ ಸಹೋದರಿ 1504 ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. ಕೋಟಿ ಕೋಟಿ ಹಣ ಸಿಕ್ಕ ಹಿನ್ನೆಲೆಯಲ್ಲಿ ಎರಡು ಮನೆಗಳಿಗೂ ಒಟ್ಟು ಮೂರು ಹಣ ಎಣಿಕೆಯ ಯಂತ್ರವನ್ನು ತಂದು ದೊರೆತ ಮೊತ್ತವನ್ನು ಲೆಕ್ಕ ಹಾಕಲಾಯಿತು. 

ಕಂಜೂಸ್ ಬಳಿ ಕೋಟಿ ಕೋಟಿ: ಅಧಿಕಾರಿ ಸ್ವಾಮಿ ಅಪಾರ್ಟಮೆಂಟ್‌ನಲ್ಲಿರುವ ಕಾರ್ಮಿಕರಿಗೆ ಬಿಡಿಗಾಸು ನೀಡುತ್ತಿರಲಿಲ್ಲ. ಮನೆ ಸ್ವಚ್ಛಗೊಳಿಸಿದ ಕಾರ್ಮಿಕರು ಹಣ ಕೇಳಿದರೆ ಚೌಕಾಸಿ ಮಾಡುತ್ತಿದ್ದನಂತೆ. ಮನೆಗೆ ಬಂದ ಕೆಲಸಗಾರರಿಗೆ ಒಂದು ಕಪ್ ಟೀ ಕೂಡಾ ನೀಡುತ್ತಿರಲಿಲ್ಲವಂತೆ. ಇದರಿಂದ ಅಪಾರ್ಟ್‌ಮೆಂಟ್ ಸಿಬ್ಬಂದಿ ಸಾಕಷ್ಟು ನೊಂದಿದ್ದರು ಎನ್ನಲಾಗಿದೆ.

ಐಜಿಪಿ ಭೇಟಿ

ಕೆಐಎಡಿಬಿ ಅಧಿಕಾರಿ ಟಿ.ಆರ್.ಸ್ವಾಮಿ ನಿವಾಸಕ್ಕೆ ಎಸಿಬಿ ಐಜಿಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಮನೆಯಿಂದ ಚೀಲ ಎಸೆದಿದ್ದಾರೆ ಎನ್ನುವ ಕುರಿತು ಮತ್ತಷ್ಟು ಪರಿಶೀಲನೆ ನಡೆಸುತ್ತಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಗೌಡಯ್ಯ ಮನೆಯಲ್ಲಿ ಸಿಕ್ಕಿದ್ದು ಎಷ್ಟು?

ಎನ್.ಜಿ ಗೌಡಯ್ಯ ಅವರ ಕುಟುಂಬಸ್ಥರ ಹೆಸರಿನಲ್ಲಿ 2 ಮನೆ, 8 ನಿವೇಶನಗಳು, 14 ಅರ್ಪಾಟ್‌ಮೆಂಟ್‌ಗಳು, ಚಿನ್ನ 3 ಕೆಜಿ, ಬೆಳ್ಳಿ 10 ಕೆಜಿ, 3 ಕಾರು, 3 ಬೈಕ್, 75 ಲಕ್ಷ ನಗದು ಹಾಗೂ ವಿವಿಧ ಬ್ಯಾಂಕ್‌ಗಳಲ್ಲಿ 30 ಲಕ್ಷ ಠೇವಣಿ. ಜೊತೆಗೆ ಅವರ ಮಾವನ ಮನೆಯಲ್ಲಿ 4.5 ಕೆಜಿ ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ಎಸಿಬಿ ಅಧಿಕೃತ ಮೂಲಗಳು ತಿಳಿಸಿವೆ.

ನೋಟುಗಳ ರಾಶಿ?

ಟಿ.ಆರ್. ಸ್ವಾಮಿ ಅವರ ಕುಟುಂಬಸ್ಥರ ಮತ್ತು ಸಂಬಂಧಿಕರ ಹೆಸರಿನಲ್ಲಿ 8 ಮನೆ, 10 ನಿವೇಶನಗಳು, ವಿವಿಧೆಡೆ 10 ಎಕರೆ ಕೃಷಿ ಭೂಮಿ, 1.6 ಕೆಜಿ ಚಿನ್ನ, 3 ಕಾರು, 2 ಸಾವಿರ ರೂ. ಮುಖಬೆಲೆ ನೋಟುಗಳು ಸೇರಿದಂತೆ 4 ಕೋಟಿ 52 ಲಕ್ಷ ನಗದು ರಾಶಿ ಪತ್ತೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X