Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಪಕ್ಷಗಳ ಮಹಾಮೈತ್ರಿ ಪ್ರಯೋಗ...

ವಿಪಕ್ಷಗಳ ಮಹಾಮೈತ್ರಿ ಪ್ರಯೋಗ ವಿಫಲವಾಗಲಿದೆ: ಅರುಣ್ ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ6 Oct 2018 8:03 PM IST
share
ವಿಪಕ್ಷಗಳ ಮಹಾಮೈತ್ರಿ ಪ್ರಯೋಗ ವಿಫಲವಾಗಲಿದೆ: ಅರುಣ್ ಜೇಟ್ಲಿ

ಹೊಸದಿಲ್ಲಿ, ಅ.6: ವಿಪಕ್ಷಗಳ ಮಹಾಮೈತ್ರಿ ಎಂಬುದು ಒಂದು ಸಂಯುಕ್ತ ಅರಾಜಕತೆಯಾಗಿದೆ ಎಂದು ಲೇವಡಿ ಮಾಡಿರುವ ವಿತ್ತಸಚಿವ ಅರುಣ್ ಜೇಟ್ಲಿ, ಇದರ ಪ್ರಯೋಗಾರ್ಥ ಪರೀಕ್ಷೆ ದೇಶದಲ್ಲಿ ಹಲವಾರು ಬಾರಿ ವಿಫಲವಾಗಿದೆ ಎಂದು ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿರುವ ‘ಹಿಂದುಸ್ತಾನ್ ಟೈಮ್ಸ್’ ನಾಯಕತ್ವ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಮಹಾಮೈತ್ರಿಯಿಂದ ಅಸ್ಥಿರತೆ ನೆಲೆಸುತ್ತದೆ. ಪಕ್ಷಗಳ ಸಿದ್ಧಾಂತಗಳನ್ನು ಬಲಿಗೊಟ್ಟು ರೂಪಿಸುವ ಮಹಾಮೈತ್ರಿ ಸರಕಾರ ಕೆಲವೇ ತಿಂಗಳು ಬಾಳುತ್ತದೆ ಎಂದರು.

ಬ್ಯಾಂಕ್‌ಗಳ ಎನ್‌ಪಿಎ(ಅನುತ್ಪಾದಕ ಆಸ್ತಿ)ಯ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟೀಕೆಗಳನ್ನು ಪ್ರಸ್ತಾವಿಸಿದ ಜೇಟ್ಲಿ, ಇಂತಹ ವಿಷಯಗಳನ್ನು ಅರಿತುಕೊಳ್ಳುವಷ್ಟು ರಾಹುಲ್ ಪ್ರಬುದ್ಧರಾಗಿಲ್ಲ. ಎನ್‌ಪಿಎ ಬಗ್ಗೆ ಸ್ವಲ್ಪ ಅರಿತುಕೊಂಡು ಆ ಬಳಿಕ ಸಾರ್ವಜನಿಕ ಸಂವಾದಕ್ಕೆ ಮುಂದಾಗುವುದು ಒಳಿತು . ಘೋಷಣೆ ಮೊಳಗಿಸುವ ಮೊದಲು ವಿಷಯ ಏನೆಂಬುದನ್ನು ಸ್ಪಷ್ಟವಾಗಿ ಅರಿತುಕೊಳ್ಳಬೇಕು ಎಂದು ಸಲಹೆ ಮಾಡಿದರು. ಎನ್‌ಪಿಎ ಎಂದರೆ ಸಾಲಮನ್ನಾ ಎಂದು ಬಹುಷಃ ರಾಹುಲ್ ತಿಳಿದಿರಬೇಕು ಎಂದು ಲೇವಡಿ ಮಾಡಿದ ಅವರು, ಈ ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ಬೇಕಾಬಿಟ್ಟಿ ಸಾಲ ನೀಡಿರುವುದು ಈಗಿನ ಎನ್‌ಪಿಎ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದರು.

ಎನ್‌ಡಿಎ ಅಧಿಕಾರಕ್ಕೆ ಬಂದಾಗ ದಾಖಲೆಪತ್ರಗಳಲ್ಲಿ ಎನ್‌ಪಿಎಯ ಮೊತ್ತ 2.5 ಲಕ್ಷ ಕೋಟಿ ರೂ. ಎಂದು ನಮೂದಿಸಲಾಗಿತ್ತು. ಆದರೆ ವಾಸ್ತವದಲ್ಲಿ ಇದು 8.5 ಲಕ್ಷ ಕೋಟಿ ರೂ. ಆಗಿತ್ತು ಎಂದು ಜೇಟ್ಲಿ ತಿಳಿಸಿದರು. ತಾನು ಮೈತ್ರಿಕೂಟಕ್ಕೆ ವಿರೋಧವಾಗಿಲ್ಲ. ಆದರೆ ಮಹಾಮೈತ್ರಿಯ ಪ್ರಮುಖ ಪಕ್ಷ ಪ್ರಬಲವಾಗಿದ್ದರೆ ಮಾತ್ರ ಮಹಾಮೈತ್ರಿ ಬಾಳುತ್ತದೆ. ಇದಕ್ಕೆ ಈ ಹಿಂದಿನ ವಾಜಪೇಯಿ ನೇತೃತ್ವದ ಸರಕಾರ(ಬಿಜೆಪಿ 183 ಸಂಸದರನ್ನು ಹೊಂದಿತ್ತು) ಹಾಗೂ ಈಗಿನ ಮೋದಿ ನೇತೃತ್ವದ ಸರಕಾರ(ಬಿಜೆಪಿ 282 ಸಂಸದರನ್ನು ಹೊಂದಿದೆ) ಸ್ಪಷ್ಟ ಉದಾಹರಣೆಯಾಗಿದೆ . ಈ ಹಿನ್ನೆಲೆಯಲ್ಲಿ ಗಮನಿಸಿದರೆ 2019ರ ಚುನಾವಣೆ ಸುಸಂಬದ್ಧ ಕಾರ್ಯನೀತಿ ಮತ್ತು ಬಲಿಷ್ಟನಾಯಕನನ್ನು ಹೊಂದಿರುವ ಸ್ಥಿರ ಸರಕಾರ ಮತ್ತು ಸಂಪೂರ್ಣ ಅರಾಜಕತೆಯ ಒಕ್ಕೂಟದ ನಡುವಿನ ಆಯ್ಕೆಯಾಗಿದೆ ಎಂದರು. ಈ ಹಿಂದೆ ಕ್ಷಿಪ್ರವಾಗಿ ಅಭಿವೃದ್ಧಿ ಹೊಂದುವ ಹಲವು ಅವಕಾಶಗಳನ್ನು ದೇಶ ವ್ಯರ್ಥವಾಗಿಸಿದೆ. ಆದರೆ ಇನ್ನು ವ್ಯರ್ಥವಾಗಿಸಲು ಬಿಡುವುದಿಲ್ಲ ಎಂದು ಎನ್‌ಡಿಎ ಸರಕಾರ ಪಣತೊಟ್ಟಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X