Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಕೀಲರ ಮುಷ್ಕರದ ಮೇಲಿನ ನಿಷೇಧ ತೆರವಿಗೆ...

ವಕೀಲರ ಮುಷ್ಕರದ ಮೇಲಿನ ನಿಷೇಧ ತೆರವಿಗೆ ಸಿಜೆಐ ನಕಾರ

ವಾರ್ತಾಭಾರತಿವಾರ್ತಾಭಾರತಿ6 Oct 2018 11:18 PM IST
share

ಹೊಸದಿಲ್ಲಿ, ಅ.6: ವಕೀಲರು ಮುಷ್ಕರ ನಡೆಸುವುದರ ಮೇಲೆ 16 ವರ್ಷಗಳ ಹಿಂದೆ ವಿಧಿಸಲಾಗಿರುವ ನಿಷೇಧವನ್ನು ತೆರವುಗೊಳಿಸಬೇಕೆಂದು ಸುಪ್ರೀಂಕೋರ್ಟ್ ವಕೀಲರ ಸಂಘ ಮಾಡಿರುವ ಸಲಹೆಯನ್ನು ಒಪ್ಪದ ಸಿಜೆಐ ರಂಜನ್ ಗೊಗೊಯಿ, ವಕೀಲರು ಮುಷ್ಕರ ನಡೆಸುವುದಾದರೂ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನೂತನ ಸಿಜೆಐ ಆಗಿ ನೇಮಕಗೊಂಡ ಗೊಗೊಯಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ)ದ ಆಶ್ರಯದಲ್ಲಿ ನಡೆದಿದ್ದು ಈ ಸಂದರ್ಭ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರ ಈ ವಿಷಯವನ್ನು ಎತ್ತಿದರು.

ವಕೀಲರ ಬಾಯನ್ನು ಮುಚ್ಚಿಸಿದರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯೇ ನಾಶವಾಗಬಹುದು. ನಮ್ಮ ಸ್ವಾತಂತ್ರವನ್ನು ಮರುಸ್ಥಾಪಿಸಲಿದ್ದೀರಿ ಎಂಬ ವಿಶ್ವಾಸವಿದೆ ಎಂದು ಮಿಶ್ರ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಇದೊಂದು ವಿಷಯವೇ ಅಲ್ಲ ಎಂಬುದು ನನ್ನ ಭಾವನೆ. ಮುಷ್ಕರ ನಡೆಸುವ ಅಗತ್ಯವೇ ಇಲ್ಲ ಎಂಬುದು ತನಗಂತೂ ಖಚಿತವಾಗಿದೆ ಎಂದರು. ಸಿಜೆಐ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶ ಅರುಣ್ ಮಿಶ್ರಾ, ವಕೀಲರು ಮುಷ್ಕರದ ಕಾರಣದಿಂದ ನ್ಯಾಯಾಲಯಕ್ಕೆ ಗೈರು ಹಾಜರಾದರೆ ಜನತೆ ತಮ್ಮ ಸ್ವಾತಂತ್ರ ಮತ್ತು ಹಕ್ಕನ್ನು ಕಳೆದುಕೊಂಡಂತಾಗುತ್ತದೆ ಎಂದರು.

ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾದರೆ ಅಥವಾ ನ್ಯಾಯಾಂಗ ವ್ಯವಸ್ಥೆಯನ್ನು ರಕ್ಷಿಸುವ ವಿಶೇಷ ಸಂದರ್ಭ ಎದುರಾದಾಗ ವಕೀಲರು ಮುಷ್ಕರ ನಡೆಸಬಹುದು. ಇತರ ಸಂದರ್ಭಗಳಲ್ಲಿ ಅಗತ್ಯವಿಲ್ಲ ಎಂದು ಮಿಶ್ರಾ ಹೇಳಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಎನ್‌ವಿ ರಮಣ ಮತ್ತು ಮೋಹನ್ ಎಂ.ಶಾಂತನಗೌಡರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಕೀಲರು ಮುಷ್ಕರ ನಡೆಸಬಾರದು ಎಂದು ಸುಪ್ರೀಂಕೋರ್ಟ್ 2002ರ ತೀರ್ಪಿನಲ್ಲಿ ಸೂಚಿಸಿತ್ತು. ದೇಶದಲ್ಲಿ ವಿಚಾರಣಾಧೀನ ಖೈದಿಗಳ ಸಂಖ್ಯೆ ಹೆಚ್ಚಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿಜೆಐ ಗೊಗೊಯಿ, ದೇಶದ ಯುವಜನಾಂಗದ ಗಮನಾರ್ಹ ಪ್ರಮಾಣ ಜೈಲಿನಲ್ಲಿದೆ ಎಂದರು. ಖೈದಿಗಳಲ್ಲಿ ಶೇ.67ರಷ್ಟು ವಿಚಾರಣಾಧೀನ ಖೈದಿಗಳಾಗಿದ್ದು, ಇವರಲ್ಲಿ ಶೇ.47ರಷ್ಟು 18ರಿಂದ 30 ವರ್ಷದೊಳಗಿನವರು ಎಂದು ಸಿಜೆಐ ಕಳವಳ ವ್ಯಕ್ತಪಡಿಸಿದರು.

ಈ ಶೇ.67 ವಿಚಾರಣಾಧೀನ ಖೈದಿಗಳಲ್ಲಿ ಶೇ.66ರಷ್ಟು ಪರಿಶಿಷ್ಟ ಜಾತಿಯವರು. 10ನೇ ತರಗತಿಗಿಂತ ಕಡಿಮೆ ವಿದ್ಯಾಭ್ಯಾಸ ಪಡೆದವರು ಶೇ.71, ಅವಿದ್ಯಾವಂತರು ಶೇ.28ರಷ್ಟು ಎಂದು ಅವರು ವಿವರಿಸಿದರು. ಅಗತ್ಯವಿದ್ದವರಿಗೆ ಏನಾದರೂ ಸಹಾಯ ಮಾಡುವುದೇ ಕಾನೂನು ನೆರವು ಕಾರ್ಯಕ್ರಮ. ವಕೀಲರಲ್ಲಿ ಇಂತಹ ಭಾವನೆ ಬೆಳೆಸಲು ಬಿಸಿಐ ಮುಂದಾಗಬೇಕು ಎಂದು ಸಿಜೆಐ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X