Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಹಳ್ಳ ದಾಟಲು ಕಾಲುಸಂಕದಲ್ಲಿ ಸರ್ಕಸ್...

ಕಳಸ: ಹಳ್ಳ ದಾಟಲು ಕಾಲುಸಂಕದಲ್ಲಿ ಸರ್ಕಸ್ ಮಾಡುವ ದಲಿತ ಕಾಲನಿ ನಿವಾಸಿಗಳು

ಅರ್ಧಂಬರ್ದ ಸೇತುವೆ ಮಾಡಿ ನಾಪತ್ತೆಯಾಗಿರುವ ಗುತ್ತಿಗೆದಾರ : ಆರೋಪ

ವಾರ್ತಾಭಾರತಿವಾರ್ತಾಭಾರತಿ7 Oct 2018 6:51 PM IST
share
ಕಳಸ: ಹಳ್ಳ ದಾಟಲು ಕಾಲುಸಂಕದಲ್ಲಿ ಸರ್ಕಸ್ ಮಾಡುವ ದಲಿತ ಕಾಲನಿ ನಿವಾಸಿಗಳು

►ಮಳೆಗಾಲದಲ್ಲಿ ತುಂಬಿ ಹರಿಯವ ಭದ್ರಾನದಿಯ ಉಪನದಿ
►ಕಾಮಗಾರಿ ಪೂರ್ಣಕ್ಕೆ ದಲಿತರ ಒತ್ತಾಯ

ಚಿಕ್ಕಮಗಳೂರು, ಅ.7: ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬ ಗಾದೆ ಮಾತು ಜಿಲ್ಲೆಯ ಕಳಸ ಪಟ್ಟಣ ಸಮೀಪದಲ್ಲಿರುವ ಹಡ್ಲುಮನೆ ದಲಿತ ಕಾಲನಿ ಜನರ ಪಾಲಿಗೆ ಅಕ್ಷರಶಃ ನಿಜ ಎಂಬಂತಾಗಿದ್ದು, ದಲಿತರ ಮನೆಗಳ ಸಂಪರ್ಕಕ್ಕಾಗಿ ಸಮೀಪದಲ್ಲಿ ಹರಿಯುವ ಭದ್ರಾನದಿಯ ಉಪನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಮೀಸಲಿಟ್ಟ ಅನುದಾನದಲ್ಲಿ ಅರ್ಧಂಬರ್ದ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರು, ಗ್ರಾಪಂ ಅಧಿಕಾರಿಗಳು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿವಾಸಿಗಳು ಆರೋಪಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಗ್ರಾಪಂ ವ್ಯಾಪ್ತಿಯಲ್ಲಿರುವ ಹಡ್ಲುಮನೆ ಕಳಸ ಪಟ್ಟಣದಿಂದ ಕೂಗಳತೆಯ ದೂರದಲ್ಲಿದೆ. ಇಲ್ಲಿ ದಲಿತರ ಸುಮಾರು 8ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿನ ನಿವಾಸಿಗಳ ಪೈಕಿ ಕೆಲವರು ಭತ್ತದ ಕೃಷಿಕರಾಗಿದ್ದು, ಕೆಲವರು ಕೂಲಿ ಕಾರ್ಮಿಕರಾಗಿದ್ದಾರೆ. ನಿವಾಸಿಗಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳಸ ಪಟ್ಟಣಕ್ಕೆ ಬರಲು ಹಾಗೂ ಹೊಲಗದ್ದೆಗಳಿಗೆ ತೆರಳಲು ನಿವಾಸಿಗಳ ಮನೆಗಳ ಸಮೀಪದಲ್ಲಿ ಹರಿಯುವ ಭದ್ರಾ ನದಿಯ ಉಪನದಿಯೊಂದನ್ನು ದಾಟಬೇಕಿದೆ. ಬೇಸಿಗೆಯಲ್ಲಿ ನದಿಯಲ್ಲಿ ನೀರು ಕಡಿಮೆ ಇರುವುದರಿಂದ ನಿವಾಸಿಗಳು ನದಿಗೆ ಅಡ್ಡಲಾಗಿ ಮರದ ಕಂಬದಿಂದ ಮಾಡಿದ ಕಾಲು ಸಂಕದ ಮೂಲಕ ನದಿ ದಾಟುತ್ತಾರೆ.

ಆದರೆ ಮಳೆಗಾಲದಲ್ಲಿ ನದಿ ತುಂಬಿ ರಭಸವಾಗಿ ಹರಿಯುವುದರಿಂದ ಮಳೆ ನೀರಿಗೆ ತೊಯ್ದು ಜಾರುವ ಕಾಲುಸಂಕದಲ್ಲಿ ನದಿ ದಾಟಿದರೆ ಪ್ರಾಣಾಪಾಯ ಸಂಭವಿಸುವ ಭೀತಿಯಿಂದ ನಿವಾಸಿಗಳು ಮಳೆಗಾಲದಲ್ಲಿ ಈ ನದಿಯ ಸಹವಾಸಕ್ಕೆ ಹೋಗದೇ ಸುಮಾರು 2 ಕಿ.ಮೀ. ಸುತ್ತಿ ಬಳಸಿ ಹೊಲಗದ್ದೆಗಳಿಗೆ ಹಾಗೂ ಪಟ್ಟಣಕ್ಕೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆಗಾಲದ ಈ ಸಮಸ್ಯೆಯಿಂದ ಪಾರಾಗಲು ನಿವಾಸಿಗಳು ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆಂದು ಕಳಸ ಗ್ರಾಮ ಪಂಚಾಯತ್ ಹಾಗೂ ಜಿಪಂ ಸದಸ್ಯರಲ್ಲಿ ಮನವಿ ಮಾಡಿದ ಪರಿಣಾಮ ಈ ಭಾಗದ ಜಿಪಂ ಸದಸ್ಯ ಕೆ.ಪ್ರಭಾಕರ್‍ ಗೌಡ ಗ್ರಾಪಂ ಅನುದಾನದಲ್ಲಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ಸೇತುವೆ ನಿರ್ಮಿಸಲು ಮುಂದಾಗಿದ್ದರ ಫಲವಾಗಿ ಕಳಸ ಪಟ್ಟಣದ ಗುತ್ತಿಗೆದಾರರೊಬ್ಬರು ಕಳೆದ ನಾಲ್ಕು ವರ್ಷಗಳ ಹಿಂದೆ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಆದರೆ ಗುತ್ತಿಗೆದಾರ ಹಳ್ಳದ ಎರಡು ಬದಿಯಲ್ಲಿ ಎರಡು ಕಾಂಕ್ರೀಟ್ ಪಿಲ್ಲರ್‍ಗಳನ್ನು ನಿರ್ಮಿಸಿ ಹೋಗಿ ನಾಲ್ಕು ವರ್ಷ ಕಳೆದಿದ್ದರೂ ಕಾಮಗಾರಿಯನ್ನು ಇನ್ನೂ ಪೂರ್ಣಗೊಳಿಸಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ಹಡ್ಲುಮನೆ ಸಮೀಪದಲ್ಲಿ ಕೋಣೇಬೈಲು, ನೀರುಕಟ್ಟು, ದೇವರಪಾಲು, ದೇವರಗುಡ್ಡ ಗ್ರಾಮಗಳ ನಿವಾಸಿಗಳಿಗೆ ಹಡ್ಲುಮನೆ ಮೂಲಕ ಕಳಸ ಪಟ್ಟಣ ಸಂಪರ್ಕಕ್ಕೆ ಹತ್ತಿರದ ದಾರಿಯಾಗಿದೆ. ಬೇಸಿಗೆಯಲ್ಲಿ ಈ ನಿವಾಸಿಗಳೂ ಹಡ್ಲುಮನೆ ಮಾರ್ಗವಾಗಿಯೇ ಪಟ್ಟಣಕ್ಕೆ ತಿರುಗಾಡುತ್ತಿದ್ದಾರೆ. ಆದರೆ ಮಳೆಗಾಲದಲ್ಲಿ ನದಿ ತುಂಬಿ ಹರಿಯುವುದರಿಂದ ಹಳ್ಳ ದಾಟಲಾಗದೇ ದೂರದ ರಸ್ತೆಗಳ ಮೂಲಕ ಪಟ್ಟಣಕ್ಕೆ ಬರುವಂತಾಗಿದೆ.

ಇನ್ನಾದರೂ ಸಂಬಂಧಿಸಿ ಗ್ರಾಪಂ ಹಾಗೂ ಜಿಪಂ ಸದಸ್ಯರು ಅಪೂರ್ಣಗೊಂಡಿರುವ ಈ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿಕೊಡುವ ಮೂಲಕ ಮಳೆಗಾದಲ್ಲಿ ಇಲ್ಲಿನ ನಿವಾಸಿಗಳು, ಶಾಲಾ ಕಾಲೇಜು ಮಕ್ಕಳು ಅನುಭವಿಸುವ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಅಪೂರ್ಣ ಕಾಮಗಾರಿ ನಡೆಸಿ ಅನುದಾನದ ದುರ್ಬಳಕೆ ಮಾಡಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

2014ರಲ್ಲಿ ನಡೆದ ಜಿಪಂ ಚುನಾವಣೆ ಸಂದರ್ಭ ಓಟು ಕೇಳಲು ಬಂದವರ ಬಳಿ ಇಲ್ಲಿನ ನಿವಾಸಿಗಳ ಸಮಸ್ಯೆ ಹೇಳಿಕೊಂಡಿದ್ದೆವು. ಅವರು ಗೆದ್ದ ಬಳಿಕ ಗ್ರಾಪಂ ಅನುದಾನದಲ್ಲಿ ಮನೆ  ಸಮೀಪದಲ್ಲಿ ಹರಿಯುವ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ಕೊಡಿಸಿದ್ದರು. ಗುತ್ತಿಗೆದಾರರೊಬ್ಬರು ಕಾಮಗಾರಿ ಗುತ್ತಿಗೆ ಪಡೆದು ಹಳ್ಳದಲ್ಲಿ ಎರಡು ಪಿಲ್ಲರ್‍ ಗಳನ್ನು ನಿರ್ಮಿಸಿ ಹೋದವರು ಮತ್ತೆ ಇತ್ತ ತಲೆ ಹಾಕಿಲ್ಲ. ಆದರೆ ಗ್ರಾಪಂನಲ್ಲಿ 90 ಸಾವಿರ ರೂ ಬಿಲ್ ಮಾಡಿಕೊಂಡಿರುವ ಬಗ್ಗೆ ಸಿಬ್ಬಂದಿಯೇ ತಿಳಿಸಿದ್ದಾರೆ. ಈ ಹಳ್ಳ ಮಳೆಗಾಲದಲ್ಲಿ ತುಂಬಿ ಹರಿಯುತ್ತದೆ. ದಾಟಲು ಕಾಲು ಸಂಕ ಬಳಸಬೇಕಿದೆ. ಪ್ರಾಣಾಪಾಯದ ಭೀತಿಯಿಂದ ಸಂಕ ದಾಟಲು ಸಾಧ್ಯವಾಗುತ್ತಿಲ್ಲ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು.
- ಸತೀಶ್, ನಿವಾಸಿ, ಹಡ್ಲುಮನೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X