Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ತೀರ್ಪಿನ ಕುರಿತು ಮಾತುಕತೆ:...

ಸುಪ್ರೀಂ ತೀರ್ಪಿನ ಕುರಿತು ಮಾತುಕತೆ: ಪಿಣರಾಯಿ ಆಹ್ವಾನಕ್ಕೆ ಶಬರಿಮಲೆ ದೇಗುಲದ ಅರ್ಚಕರ ತಿರಸ್ಕಾರ

ಮಹಿಳೆಯರಿಗೆ ಶಬರಿಮಲೆ ಪ್ರವೇಶಾವಕಾಶ

ವಾರ್ತಾಭಾರತಿವಾರ್ತಾಭಾರತಿ7 Oct 2018 7:37 PM IST
share
ಸುಪ್ರೀಂ ತೀರ್ಪಿನ ಕುರಿತು ಮಾತುಕತೆ: ಪಿಣರಾಯಿ ಆಹ್ವಾನಕ್ಕೆ ಶಬರಿಮಲೆ ದೇಗುಲದ ಅರ್ಚಕರ ತಿರಸ್ಕಾರ

 ತಿರುವನಂತಪುರ,ಅ.7: ಸೋಮವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉದ್ದೇಶಿತ ಮಾತುಕತೆಯಿಂದ ಶಬರಿಮಲೆ ದೇಗುಲದ ಅರ್ಚಕರು ಹಿಂದೆ ಸರಿದಿರುವುದರಿಂದ ಎಲ್ಲ ವಯೋಮಾನಗಳ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನದಲ್ಲಿ ಪ್ರವೇಶಾವಕಾಶ ಕಲ್ಪಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸಿರುವುದಕ್ಕಾಗಿ ಈಗಾಗಲೇ ಭಕ್ತರ ಕ್ರೋಧಕ್ಕೆ ಗುರಿಯಾಗಿರುವ ಕೇರಳ ಸರಕಾರಕ್ಕೆ ಹಿನ್ನಡೆಯುಂಟಾಗಿದೆ.

ಸರಕಾರವು ಮೊದಲು ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಪುನರ್‌ಪರಿಶೀಲನೆ ಕೋರಿ ಅರ್ಜಿ ಸಲ್ಲಿಸಲಿ. ನಂತರ ನಾವು ಮಾತುಕತೆಗೆ ಮುಂದಾಗುತ್ತೇವೆ ಎಂದು ಶಬರಿಮಲೆ ದೇವಸ್ಥಾನದ ತಂತ್ರಿ ಮೋಹನಾರು ಕಂದರಾರು ಅವರು ಸುದ್ದಿಗಾರರಿಗೆ ತಿಳಿಸಿದರು.

ದೇವಸ್ಥಾನದಲ್ಲಿ ಋತುಚಕ್ರ ವಯಸ್ಸಿನ ಮಹಿಳೆಯರ ಪ್ರವೇಶವು ದೇವಳದ ಸಂಪ್ರದಾಯಗಳ ಮೇಲೆ ದುಷ್ಪರಿಣಾಮಗಳನ್ನುಂಟು ಮಾಡುತ್ತದೆ ಮತ್ತು ಅದರ ದೈವತ್ವವನ್ನು ನಾಶಗೊಳಿಸುತ್ತದೆ ಎಂದ ಅವರು,ಮಹಿಳಾ ಪೊಲೀಸರ ನಿಯೋಜನೆ ದೇವಸ್ಥಾನದ ಸಂಪ್ರದಾಯಗಳನ್ನು ನಾಶ ಮಾಡುತ್ತದೆ ಎಂದರು.

ಶಬರಿಮಲೆ ದೇವಸ್ಥಾನದಲ್ಲಿ 600 ಮಹಿಳಾ ಪೊಲೀಸರನ್ನು ನಿಯೋಜಿಸುವುದಾಗಿ ಡಿಜಿಪಿ ಲೋಕನಾಥ ಬೆಹ್ರಾ ಹೇಳಿದ್ದರು.

ಪಂದಳಂ ರಾಜಕುಟುಂಬವೂ ಅರ್ಚಕರೊಂದಿಗೆ ಧ್ವನಿಗೂಡಿಸಿದೆ.

ಶಬರಿಮಲೆ ಕ್ಷೇತ್ರವಿರುವ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ರವಿವಾರ ಬಿಜೆಪಿ ಯುವ ಮೋರ್ಚಾದ ಕರೆಯ ಮೇರೆಗೆ ಬಂದ್ ಆಚರಿಸಲಾಗಿದ್ದು,ಪ್ರತಿಭಟನೆ ಹೆಚ್ಚಿನ ಪ್ರದೇಶಗಳಿಗೆ ಹರಡುತ್ತಿದೆ.

ಶನಿವಾರ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಂದಂಳಂ ರಾಜವಂಶಜ ಹಾಗೂ ಶಬರಿಮಲೆ ದೇಗುಲದ ಕಸ್ಟೋಡಿಯನ್ ಶಶಿಕುಮಾರ ವರ್ಮಾ ಮತ್ತು ಮುಖ್ಯ ಅರ್ಚಕ ರಾಜೀವರು ಕಂದರಾರು ಅವರು ಭಾಗವಹಿಸಿದ್ದರು.

ತಾನು ಆಸ್ತಿಕರ ಪರವಾಗಿದ್ದೇನೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದ್ದರೆೆ,ಸರಕಾರವು ಭಕ್ತರ ಧಾರ್ಮಿಕ ನಂಬಿಕೆಗಳನ್ನು ಕಡೆಗಣಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

 ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಕುರಿತಂತೆ ಉಂಟಾಗಿರುವ ಅಶಾಂತಿಗೆ ರಾಜಕೀಯ ವೈರಿಗಳು ಕಾರಣರು ಎಂದು ಕೇರಳದ ದೇವಸ್ಥಾನ ವ್ಯವಹಾರಗಳ ಸಚಿವ ಕೆ.ಸುರೇಂದ್ರನ್ ಅವರು ಯಾರನ್ನೂ ಹೆಸರಿಸದೆ ದೂರಿದ್ದಾರೆ. ಮತಗಳ ಮೇಲೆ ಕಣ್ಣಿಟ್ಟಿರುವ ಕೆಲವು ಪಕ್ಷಗಳು ತೊಂದರೆಯನ್ನು ಸೃಷ್ಟಿಸುತ್ತಿವೆ. ಅವರ ಕುಯುಕ್ತಿ ಯಶಸ್ವಿಯಾಗುವುದಿಲ್ಲ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭ ಅವರು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X